• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಟ್ರಾಫಿಕ್‌‌ ಸಮಸ್ಯೆಗೆ ಡಬಲ್ ಡೆಕ್ಕರ್, ಎಲಿವೇಟೆಡ್ ಕಾರಿಡಾರ್ ಮೂಲಕ ಪರಿಹಾರ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2025 - 4:34 pm
in Flash News, ಕರ್ನಾಟಕ
0 0
0
Untitled design (40)

ಬೆಂಗಳೂರು: “ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಸುಧಾಮ್ ದಾಸ್ ಅವರು ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು.

RelatedPosts

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ADVERTISEMENT
ADVERTISEMENT

ಇದಕ್ಕೆ ಉತ್ತರ ನೀಡಿದ ಶಿವಕುಮಾರ್ ಅವರು, “ಬೆಂಗಳೂರಿನ ಸಮಸ್ಯೆ, ಜನಸಂಖ್ಯೆ ದಟ್ಟಣೆ ವಿಚಾರವಾಗಿ ಸದಸ್ಯರಾದ ಸುಧಾಮ್ ದಾಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ನಾನು ಬಹಳ ಗಂಭೀರವಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಬೆಂಗಳೂರು ನವದೆಹಲಿ ರೀತಿ ಯೋಜಿತ ನಗರವಲ್ಲ. ಮಲ್ಲೇಶ್ವರ, ಜಯನಗರ, ಇಂದಿರಾನಗರದಂತಹ ಕೆಲವು ಬಡಾವಣೆಗಳು ಮಾತ್ರ ಯೋಜಿತವಾಗಿ ರೂಪುಗೊಂಡಿವೆ. ಈ ಹಿಂದೆ ಬಿಎಂಐಸಿಪಿ ರಸ್ತೆ ಆದ ಕಾರಣ ಸಂಚಾರ ದಟ್ಟಣೆ ಸ್ವಲ್ಪ ಮಟ್ಟಿಗೆ ನಿಯಂತ್ರಣವಾಗಿದೆ. ಇಲ್ಲದಿದ್ದರೆ ಪರಿಸ್ಥಿತಿ ಇನ್ನು ಹದಗೆಡುತ್ತಿತ್ತು. ಈಗ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪಿಆರ್ ಆರ್ ಯೋಜನೆ ಮಾಡಲು 2006ರಲ್ಲಿ ಅಧಿಸೂಚನೆ ಹೊರಡಿಸಿದ್ದರೂ ನಂತರ ಅದು ಮುಂದಕ್ಕೆ ಸಾಗಲಿಲ್ಲ. ಆಗಲೇ ಮಾಡಿದ್ದರೆ 2-3 ಸಾವಿರ ಕೋಟಿಯಲ್ಲಿ ಯೋಜನೆ ಪೂರ್ಣಗೊಳ್ಳುತ್ತಿತ್ತು” ಎಂದರು.

“ಈಗ ಪಿಆರ್ ಆರ್ ಯೋಜನೆಗೆ ಹುಡ್ಕೋ ಮೂಲಕ 26 ಸಾವಿರ ಕೋಟಿ ಸಾಲ ಪಡೆದು ರೈತರನ್ನು ಒಪ್ಪಿಸಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮಾಡಲು ಮುಂದಾಗಿದ್ದೇವೆ. ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ರಸ್ತೆ ಅಗಲೀಕರಣ ಮಾಡಬಹುದೆ, ಅಥವಾ ಬೇರೆ ಅವಕಾಶಗಳಿವೆಯೇ ಎಂದು ಆಲೋಚನೆ ಮಾಡಿದ್ದೇವೆ. ಈ ಹಿಂದೆ ಜಾರ್ಜ್ ಅವರು ಸಚಿವರಾಗಿದ್ದಾಗ ಸ್ಟೀಲ್ ಬ್ರಿಡ್ಜ್ ಮಾಡಲು ಹೋದಾಗ ಗಲಾಟೆ ಮಾಡಿ ಅದನ್ನು ನಿಲ್ಲಿಸಿದರು. ಈಗ ಅದರ ತೊಂದರೆ ಅನುಭವಿಸುತ್ತಿದ್ದೇವೆ. ಈಗ ಈ ಸಮಸ್ಯೆಗೆ ಪರಿಹಾರವಾಗಿ ಬೆಂಗಳೂರು ನಗರದ ಪೂರ್ವದಿಂದ ಪಶ್ಚಿಮಕ್ಕೆ (17 ಕಿ.ಮೀ), ದಕ್ಷಿಣದಿಂದ ಉತ್ತರಕ್ಕೆ (23 ಕಿ.ಮೀ) 40 ಕಿ.ಮೀ ಉದ್ದದ ಸುರಂಗ ರಸ್ತೆ ಮಾಡಲು ಹೊರಟಿದ್ದೇವೆ. ಬೆಂಗಳೂರು ನಗರದಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಇದರ ಮೊದಲ ಹಂತದ ಯೋಜನೆಗೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುತ್ತಿದೆ. ಅತಿಲೋಕ್ ಇಂಜಿನಿಯರಿಂಗ್ ಸಂಸ್ಥೆ ಡಿಪಿಆರ್ ಸಿದ್ಧಪಡಿಸಿದ್ದು, ಸರ್ಕಾರ ಅದಕ್ಕೆ ಅನುಮತಿ ನೀಡಿದೆ” ಎಂದು ತಿಳಿಸಿದರು.

“ಇನ್ನು ಬೆಂಗಳೂರಿನಲ್ಲಿ ಹೊಸ ಪ್ರಯೋಗದ ಮೂಲಕ ಎಲ್ಲೆಲ್ಲಿ ಹೊಸ ಮೆಟ್ರೋ ಮಾರ್ಗಗಳು ಬರುತ್ತಿವೆಯೋ ಅಲ್ಲಿ 44.3 ಕಿ.ಮೀ ಉದ್ಧದ ಡಬಲ್ ಡೆಕ್ಕರ್ ಮೇಲ್ಸೆತುವೆ ಮೂಲಕ ಮೇಲ್ಸೆತುವೆ ಹಾಗೂ ಮೆಟ್ರೋ ಮಾರ್ಗ ಮಾಡಲಾಗುತ್ತಿದೆ. ಈ ಯೋಜನೆಗೆ ಪಾಲಿಕೆ ಹಾಗೂ ಬಿಎಂಆರ್ ಸಿಎಲ್ 50:50 ಅನುಪಾತದಲ್ಲಿ ವೆಚ್ಚ ಭರಿಸಲಿವೆ. ಪ್ರತಿ ಕಿ.ಮೀಗೆ ರೂ.120 ಕೋಟಿ ವೆಚ್ಚವಾಗಲಿದ್ದು, ಈ ಯೋಜನೆಗೆ ಒಟ್ಟು ರೂ.9 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಇನ್ನು ಸಿಗ್ನಲ್ ಮುಕ್ತ ಎಲಿವೇಟೆಡ್ ಕಾರಿಡಾರ್ ಮೂಲಕ ವಾಹನ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿದ್ದೇವೆ. ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಬಳಿ ಕಾಜಕಾಲುವೆ ಮೇಲೆ ರಸ್ತೆ ಮಾಡಿರುವ ರೀತಿ ರಸ್ತೆ ಮಾಡಲು ಎನ್ ಜಿಟಿಯಿಂದ ಅನುಮತಿ ಸಿಗುತ್ತಿಲ್ಲ ಹೀಗಾಗಿ ರಾಜಕಾಲುವೆ ಅಕ್ಕಪಕ್ಕದ ಬಫರ್ ಪ್ರದೇಶದಲ್ಲಿ 50 ಅಡಿಯ 300 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಇದಕ್ಕಾಗಿ 3 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಐಟಿಪಿಎಲ್, ಥಣಿಸಂಧ್ರ, ಆರ್ ಆರ್ ನಗರ ಸೇರಿದಂತೆ ಇತರೆ ಭಾಗಗಳಲ್ಲಿ ಟಿಡಿಆರ್ ನೀಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಹೆಬ್ಬಾಳದಿಂದ ಹೆಣ್ಣೂರು ಮಾರ್ಗದಲ್ಲಿ 7.8 ಕಿ.ಮೀ ರಸ್ತೆ ನಿರ್ಮಾಣಕ್ಕೆ ನೋಟಿಫಿಕೇಶನ್ ಕೂಡ ಹೊರಡಿಸಲಾಗಿದೆ. ಆ ಮೂಲಕ ಬೆಂಗಳೂರಿನಲ್ಲಿ 320 ಕಿ.ಮೀ ಹೊಸ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ” ಎಂದು ವಿವರಣೆ ನೀಡಿದರು.

“1682 ಕಿ.ಮೀ ಉದ್ದದಷ್ಟು ರಸ್ತೆಗಳನ್ನು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದ್ದು, 30 ವರ್ಷಗಳ ಕಾಲ ಬಾಳಿಕೆ ಬರುವ ನಿರ್ವಹಣೆ ಮುಕ್ತ ರಸ್ತೆಗಳನ್ನು ಮಾಡಲಾಗಿದೆ. ಈ ಯೋಜನೆಗಳಿಗೆ 9 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಇನ್ನು 850 ಕಿ.ಮೀ ಉದ್ದದ ಮಳೆನೀರುಗಾಲುವೆಗಾಗಿ ವಿಶ್ವಬ್ಯಾಂಕ್ ನಿಂದ 2 ಸಾವಿರ ಕೋಟಿ ಹಣ ಪಡೆಯಲಾಗಿದೆ. ಈ ಪೈಕಿ 480 ಕಿ.ಮೀ ಪೂರ್ಣಗೊಂಡಿದ್ದು, 175 ಕಿ.ಮೀ ಉದ್ದದ ಕಾಮಗಾರಿ ನಡೆಯುತ್ತಿದೆ. ಉಳಿದ 173 ಕಿ.ಮೀ ಉದ್ದದ ಕಾಮಗಾರಿ ಮುಂದೆ ಕೈಗೆತ್ತಿಕೊಳ್ಳುತ್ತೇವೆ. ಆ ಮೂಲಕ ಬೆಂಗಳೂರಿನಲ್ಲಿ ಪೂರ್ಣಪ್ರಮಾಣದಲ್ಲಿ ಯೋಜನೆ ಮುಕ್ತಾಯವಾಗಲಿದೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version