ಮಾಂಸ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟ ಬಿಬಿಎಂಪಿ

Siddu stalin kcr (37)

ಜೈನ ಧರ್ಮದಲ್ಲಿ ವಿವಿಧ ಹಬ್ಬಗಳಂತೆ ‘ಮಹಾವೀರ ಜಯಂತಿ’ ಸಹ ಅತಿ ಮುಖ್ಯವಾದದ್ದಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲೂ ಮಹಾವೀರ ಜಯಂತಿಯನ್ನು ಏಪ್ರಿಲ್ 10ರಂದು ಆಚರಿಸಲಾಗುತ್ತಿದೆ. ಈ ದಿನ ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶಿಸಿದೆ.

ಹೌದು, ಮಹಾವೀರ ಜಯಂತಿ ಜೈನ ಧರ್ಮಕ್ಕೆ ಸೀಮಿತವಾಗದೇ ಇತರ ಸಮುದಾಯವರು ಆಚರಣೆ ಮಾಡುತ್ತಾರೆ. ಏಪ್ರಿಲ್ 10ರಂದು ಗೌರವಾರ್ಥ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಬ್ಯಾನ್ ಮಾಡಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version