• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುವರ್ಣಸೌಧಕ್ಕೆ ಮುತ್ತಿಗೆ ಯತ್ನಿಸಿದ ರೈತರು, ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರನ್ನ ವಶಕ್ಕೆ ಪಡೆದ ಪೊಲೀಸರು

ಯಶಸ್ವಿನಿ ಎಂ by ಯಶಸ್ವಿನಿ ಎಂ
December 9, 2025 - 2:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 09T140743.461

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು (ಡಿಸೆಂಬರ್ 9), ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿಭಟನೆಗಳ ಕಾವು ತಟ್ಟಿದೆ. ವಿರೋಧ ಪಕ್ಷವಾದ ಬಿಜೆಪಿ (BJP) ರೈತರ ಸಂಕಷ್ಟಗಳನ್ನು ಮುಂದಿಟ್ಟುಕೊಂಡು ಬೃಹತ್ ಪ್ರತಿಭಟನಾ ರ್ಯಾಲಿ ಆರಂಭಿಸಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾನಿರತರನ್ನು ತಡೆದು, ಹಲವು ಪ್ರಮುಖ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ಹಲವು ಹಿರಿಯ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರೈತರ ಹಿತಾಸಕ್ತಿಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

RelatedPosts

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

ADVERTISEMENT
ADVERTISEMENT

ಬಿಜೆಪಿ ನಾಯಕರು ಮತ್ತು ರೈತರು ತಮ್ಮ ಹೋರಾಟವನ್ನು ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಸುವುದರೊಂದಿಗೆ ಪ್ರಾರಂಭಿಸಿದರು. ಈ ಸಭೆಯಲ್ಲಿ ಸಾವಿರಾರು ರೈತರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಭೆಯ ನಂತರ, ಬಿಜೆಪಿ ನಾಯಕರು ಮತ್ತು ರೈತ ಮುಖಂಡರು ಒಗ್ಗೂಡಿ, ಮಾಲಿನಿ ಸಿಟಿ ಮೈದಾನದಿಂದ ಪಾದಯಾತ್ರೆ ಮೂಲಕ ಸುವರ್ಣಸೌಧದತ್ತ ಮುನ್ನುಗ್ಗಲು ಪ್ರಯತ್ನಿಸಿದರು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಆರ್. ಅಶೋಕ್, ಸಿ. ಟಿ. ರವಿ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ಮತ್ತು ಹಲವಾರು ರೈತ ಮುಖಂಡರು ಭಾಗವಹಿಸಿದ್ದರು. ರೈತರ ಸಂಕಷ್ಟವನ್ನು ಪ್ರತಿಬಿಂಬಿಸುವ ಸಂಕೇತವಾಗಿ, ಹಲವು ರೈತರು ಮತ್ತು ನಾಯಕರು ಬಾರುಕೋಲು (ಕೋಲು) ಹಿಡಿದು ಸಾಗಿದ್ದು, ರೈತರನ್ನು ನಿರ್ಲಕ್ಷ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರ ನೇತೃತ್ವದಲ್ಲಿ ಬೃಹತ್ ಸಂಖ್ಯೆಯಲ್ಲಿ ಸುವರ್ಣಸೌಧದತ್ತ ಮುನ್ನುಗ್ಗುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲ ಕಾಲ ಮಾತಿನ ಚಕಮಕಿ ಮತ್ತು ನೂಕುನುಗ್ಗಲು ಉಂಟಾಯಿತು. ರೈತರು ಮುತ್ತಿಗೆ ಹಾಕುವ ಪ್ರಯತ್ನವನ್ನು ಮುಂದುವರಿಸಿದಾಗ, ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರು.

ಪೊಲೀಸರ ಸೂಚನೆಯನ್ನ ಧಿಕ್ಕರಿಸಿ ಮುನ್ನುಗ್ಗಲು ಯತ್ನಿಸಿದ ಬಿ. ವೈ. ವಿಜಯೇಂದ್ರ, ಸಿ. ಟಿ. ರವಿ, ಆರ್. ಅಶೋಕ್ ಸೇರಿದಂತೆ ಹಲವು ಹಿರಿಯ ಬಿಜೆಪಿ ನಾಯಕರು ಮತ್ತು ಪ್ರಮುಖ ರೈತ ಮುಖಂಡರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದುಕೊಂಡರು. ಅವರನ್ನು ಪೊಲೀಸ್ ವಾಹನಗಳಲ್ಲಿ ಕರೆದೊಯ್ಯಲಾಯಿತು.

ಸುವರ್ಣಸೌಧದ ಸುತ್ತಮುತ್ತಲ ಪ್ರದೇಶದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಅಧಿವೇಶನಕ್ಕೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುವುದು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಪ್ರಮುಖ ಆದ್ಯತೆಯಾಗಿದೆ.

ಬಿಜೆಪಿ ಮತ್ತು ರೈತರು ಸರ್ಕಾರದ ವಿರುದ್ಧ ನಡೆಸುತ್ತಿರುವ ಈ ಬೃಹತ್ ಪ್ರತಿಭಟನೆಗೆ ಮುಖ್ಯ ಕಾರಣಗಳನ್ನ ನೋಡುವುದಾದರೇ, ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ, ಸರ್ಕಾರವು ರೈತರಿಗೆ ಸೂಕ್ತ ಮತ್ತು ಸಕಾಲಿಕ ಪರಿಹಾರ ವಿತರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಕಬ್ಬು, ಮೆಕ್ಕೆಜೋಳ ಸೇರಿದಂತೆ ರೈತರ ಪ್ರಮುಖ ಬೆಳೆಗಳಿಗೆ ನ್ಯಾಯಯುತ ಬೆಲೆ ಮತ್ತು ಕನಿಷ್ಠ ಬೆಂಬಲ ಬೆಲೆ ದೊರಕುತ್ತಿಲ್ಲ. ಜೊತೆಗೆ ಕಾಂಗ್ರೆಸ್ ನಾಯಕತ್ವದಲ್ಲಿನ ಅಧಿಕಾರ ಹಂಚಿಕೆಗಾಗಿ ನಡೆಯುತ್ತಿರುವ ಆಂತರಿಕ ಕದನದಿಂದಾಗಿ ರೈತರ ಸಮಸ್ಯೆಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಹೀಗಾಗಿ ಬೇಸತ್ತ ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ಒಟ್ಟಾರೆಯಾಗಿ, ಬೆಳಗಾವಿ ಅಧಿವೇಶನವು ಇಂದು ಕೂಡ ರೈತರ ಆಕ್ರೋಶ ಮತ್ತು ವಿರೋಧ ಪಕ್ಷದ ರಾಜಕೀಯ ಹೋರಾಟದ ಬಿಸಿಗೆ ಸಾಕ್ಷಿಯಾಯಿತು. ಪ್ರಮುಖ ನಾಯಕರ ಬಂಧನದ ನಂತರವೂ ಹೋರಾಟ ಮುಂದುವರೆಯುವ ಸಾಧ್ಯತೆಗಳಿದ್ದು, ರಾಜ್ಯ ಸರ್ಕಾರ ಈ ಪ್ರತಿಭಟನೆಗಳನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 18T155435.248
    Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್
    January 18, 2026 | 0
  • BeFunky collage 2026 01 18T123800.070
    ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಕೌಂಟ್‌ಡೌನ್ ಶುರು
    January 18, 2026 | 0
  • BeFunky collage 2026 01 18T115912.355
    ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚ ಸುದೀಪ್ ಅಚ್ಚರಿ ಪೋಸ್ಟ್
    January 18, 2026 | 0
  • BeFunky collage 2026 01 18T073854.066
    ಸ್ಟ್ರಾಂಗ್ ಕೋರ್ ಬೇಕಾ? ಈ 4 ಮ್ಯಾಜಿಕ್ ಯೋಗಾಸನಗಳು ಮನೆಯಲ್ಲೇ ಮಾಡಿ
    January 18, 2026 | 0
  • BeFunky collage 2026 01 18T071800.393
    ಕರ್ನಾಟಕದಲ್ಲಿ ಹೇಗಿದೆ ಇಂದಿನ ಹವಾಮಾನ? ಬೆಂಗಳೂರಲ್ಲಿ ಚಳಿಯ ಅಲರ್ಟ್
    January 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version