• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲು’: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 1:40 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 16T133712.904

ಬೆಳಗಾವಿ, ಡಿ.16: “ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.

ಬೆಳಗಾವಿ ವಿಮಾನ ನಿಲ್ದಾಣದ ಬಳಿ ಮಂಗಳವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

RelatedPosts

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ

ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿಗೆ ವರುಣನ ಸಿಂಚನ: ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ

ADVERTISEMENT
ADVERTISEMENT

ಗ್ಯಾರಂಟಿ ಯೋಜನೆ ಬಗ್ಗೆ ಕೇಳಿದಾಗ, “ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ ಜಿಎಸ್ ಟಿ ಪರಿಷ್ಕರಣೆ ಮೂಲಕ ರಾಜ್ಯದ ಆದಾಯ ಕಡಿಮೆ ಮಾಡಿದೆ. ವಾರ್ಷಿಕ 10-15 ಸಾವಿರ ಕೋಟಿ ಕೊರತೆಯಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ಒಂದೆರಡು ತಿಂಗಳು ಹೆಚ್ಚು ಕಮ್ಮಿಯಾಗಲಿದೆ. ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ. ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗೆ ಘೋಷಿಸಿದ ಅನುದಾನ ಇಲ್ಲಿಯವರೆಗೂ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದರು.

ರಾಜ್ಯ, ಸಮಾಜದ ಹಿತಕ್ಕೆ ದ್ವೇಷ ಭಾಷಣ ನಿಷೇಧ ಕಾಯ್ದೆ

ದ್ವೇಷ ಭಾಷಣ ನಿಷೇಧ ಕಾಯ್ದೆ ಬಗ್ಗೆ ಕೇಳಿದಾಗ, “ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ಕಾನೂನು ತರಲಾಗುತ್ತಿದೆ. ಇದರಿಂದ ರಾಜ್ಯ ಹಾಗೂ ಸಮಾಜಕ್ಕೆ ಒಳ್ಳೆಯದಾಗಲಿದೆ” ಎಂದರು.

ಮತಕಳ್ಳತನ ವಿರುದ್ದ ಪ್ರತಿಭಟನೆ ಯಶಸ್ವಿ; ಸಾವಿರಾರು ಕಾರ್ಯಕರ್ತರು ಭಾಗಿ

ದೆಹಲಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು. ಮತಕಳ್ಳತನದಿಂದ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ನಮ್ಮ ಯಶಸ್ವಿ” ಎಂದರು.

“ನಾವು ಅನೇಕರಿಗೆ ಅಧಿಕಾರವನ್ನೇ ಕೊಟ್ಟಿಲ್ಲ. ಆದರೂ ಸಾವಿರಾರು ರೂಪಾಯಿ ಹಣವನ್ನು ಖರ್ಚು ಮಾಡಿಕೊಂಡು ದೆಹಲಿಗೆ ಬಂದು ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದಾರೆ” ಎಂದರು.

“ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಬೇಕು ಎಂದು ಪ್ರಿಯಾಂಕ ಗಾಂಧಿ ಅವರು ಸಂದೇಶ ನೀಡಿದ್ದಾರೆ. ಪ್ರತಿಭಟನೆ ಯಶಸ್ವಿಯಾಯಿತು. ಕರ್ನಾಟಕದ ಮೂಲೆ,‌ ಮೂಲೆಯಿಂದ ಬಂದ ಕಾರ್ಯಕರ್ತರು, ಮುಖಂಡರಿಗೆ ಪಕ್ಷದ ಪರವಾಗಿ ಧನ್ಯವಾದಗಳು” ಎಂದರು.

ಹೈಕಮಾಂಡ್ ನಾಯಕರ ಭೇಟಿ, ಫೋಟೋಗಳಲ್ಲಿ ನೋಡಿದ್ದಿರಲ್ಲ

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದೀರಾ ಎಂದು ಕೇಳಿದಾಗ, “ಭೇಟಿಯಾಗಿದ್ದನ್ನು, ಕುಶಲೋಪರಿ ವಿಚಾರಿಸುವುದನ್ನು ಫೋಟೋಗಳಲ್ಲಿ ನೀವುಗಳೂ ನೋಡಿದ್ದೀರಲ್ಲ”ಎಂದರು.

ದ್ವೇಷ ಭಾಷಣ ತಡೆ ಮಸೂದೆ ಅಂಗೀಕಾರಕ್ಕೆ ಬಿಜೆಪಿ ವಿರೋಧದ ಬಗ್ಗೆ ಕೇಳಿದಾಗ, “ಕರ್ನಾಟಕದ ಅಭಿವೃದ್ಧಿ ಬಗ್ಗೆ ಏನು ಚರ್ಚೆಯಾಯಿತು ಎಂದು ಮಾಧ್ಯಮದವರು ಹೇಳುತ್ತಾರೆಯೇ?” ಎಂದು ಹೇಳಿದರು.

ಕೊಡುಗೈ ದಾನಿ, ಜನರ ಪರವಾಗಿ ಕೆಲಸ ಮಾಡಿದ ಅಜಾತಶತ್ರು

“ಶಾಮನೂರು ಶಿವಶಂಕರಪ್ಪ ಅವರು ಅಜಾತಶತ್ರು, ಮಧ್ಯ ಕರ್ನಾಟಕದ ದಾವಣಗೆರೆಗೆ ಹೊಸ ರೂಪ ನೀಡಿದವರು. ಇಳಿವಯಸ್ಸಿನಲ್ಲೂ ಲವಲವಿಕೆಯಿಂದ ನಮಗೆಲ್ಲರಿಗೂ ಮಾರ್ಗದರ್ಶನ ಮಾಡುತ್ತಿದ್ದವರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿ, ಸಮಾಜದ ಎಲ್ಲಾ ವರ್ಗದ ಜನರ ಪರವಾಗಿ ಕೆಲಸ ಮಾಡಿ, ಕೊಡಗೈ ದಾನಿ ಎನಿಸಿಕೊಂಡಿದ್ದರು” ಎಂದರು.

“ಕೊರೋನಾ ಸಂದರ್ಭದಲ್ಲಿ ಸರ್ಕಾರಕ್ಕೆ ವ್ಯಾಕ್ಸಿನ್ ಕೊಡಲು ಆಗದೇ ಇದ್ದಾಗ ಇವರೇ ಮುಂಚಿತವಾಗಿ ಇಡೀ ದಾವಣಗೆರೆ ಜನತೆಗೆ ಉಚಿತವಾಗಿ ಲಸಿಕೆ ನೀಡಿದ್ದರು. ಇದಾದ ಮೇಲೆ ಸರ್ಕಾರ ಮುಂದಕ್ಕೆ ಬಂದಿದ್ದು. ನಾನು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೃದಯ ಶ್ರೀಮಂತಿಕೆ ಮೆಚ್ಚಿದ್ದೆ” ಎಂದರು.

“ಇಡೀ ಸರ್ಕಾರವೇ ಅವರಿಗೆ ಗೌರವ ಸಲ್ಲಿಸಿದೆ. ತುಂಬಾ ದುಃಖವಾಗುತ್ತದೆ. ಇಂತಹವರನ್ನು ಕಳೆದುಕೊಂಡಿದ್ದು ನೋವಿದೆ. ಇಂತಹವರಿಗೆ ಭಗವಂತ ಹೆಚ್ಚು ಆಯಸ್ಸು ನೀಡಬೇಕಿತ್ತು. 10-15 ದಿನ ಆಸ್ಪತ್ರೆಯಲ್ಲಿ ಕಳೆದಿದ್ದು ಬಿಟ್ಟರೆ ಇಡೀ ಬದುಕನ್ನು ಸಂಭ್ರಮದಿಂದ ಬದುಕಿದವರು. ಲಕ್ಷಾಂತರ ಜನಕ್ಕೆ ಉದ್ಯೋಗ, ಶಿಕ್ಷಣ ನೀಡಿದವರು. ತಾವು ನಂಬಿದ ಧರ್ಮವನ್ನು ಪಾಲಿಸಿ ಕೀರ್ತಿಶೇಷರಾಗಿ ಬದುಕಿದವರು ಶಾಮನೂರು ಶಿವಶಂಕರಪ್ಪ ಅವರು” ಎಂದರು.

“ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನಕ್ಕೆ ನೇರವಾಗಿ ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಯಲ್ಲಿ ದಾವಣಗೆರೆಗೆ ತೆರಳಿದ ಕಾರಣಕ್ಕೆ ಸೋಮವಾರ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಲು ಆಗಲಿಲ್ಲ” ಎಂದ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 20T203217.674

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
September 20, 2026 - 8:33 pm
0

Untitled design 2026 09 20T200816.294

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

by ಶಾಲಿನಿ ಕೆ. ಡಿ
September 20, 2026 - 8:09 pm
0

Untitled design 2026 09 20T194512.242

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

by ಶಾಲಿನಿ ಕೆ. ಡಿ
September 20, 2026 - 7:45 pm
0

Untitled design 2026 09 20T192706.370

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

by ಶಾಲಿನಿ ಕೆ. ಡಿ
September 20, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T175452.311
    ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು
    September 20, 2026 | 0
  • Untitled design 2026 09 20T171119.389
    ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
    September 20, 2026 | 0
  • ಡೈವರ್ಟ್ (10)
    ಬಿಸಿಲಿನಿಂದ ಕಂಗೆಟ್ಟ ಬೆಂಗಳೂರಿಗೆ ವರುಣನ ಸಿಂಚನ: ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ
    September 20, 2026 | 0
  • ಡೈವರ್ಟ್ (4)
    ಪರಪ್ಪನ ಅಗ್ರಹಾರದಲ್ಲಿ ಮೊಬೈಲ್ ಬೇಟೆ: ಒಂದೇ ಜೈಲಿನಲ್ಲಿ 334 ಫೋನ್‌ಗಳು ಪತ್ತೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version