ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ.ಆರ್. ಪುರಂ ವ್ಯಾಪ್ತಿಯ ಶೀಗೆಹಳ್ಳಿಯಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರೀತಿಗೆ ಅಡ್ಡಿಯಾಗುತ್ತಾರೆ ಎಂಬ ಕಾರಣಕ್ಕೆ ತಂದೆ, ತಾಯಿ ಹಾಗೂ ತಮ್ಮನನ್ನೇ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಹತ್ಯೆ ಮಾಡಿದ ಘಟನೆ ದಾಖಲಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಮಗಳು ಮತ್ತು ಆಕೆಯ ಪ್ರಿಯಕರ ಇಬ್ಬರೂ ಸೇರಿಕೊಂಡು ಕುಟುಂಬ ಸದಸ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ತಂದೆ, ತಾಯಿ ಹಾಗೂ ತಂಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬೆಳಗಿನ ಜಾವ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ನಂತರದಲ್ಲಿ ಸ್ಥಳೀಯರಿಗೆ ಮಾಹಿತಿ ತಿಳಿದು ಪ್ರಕರಣ ಬಹಿರಂಗವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕೆ.ಆರ್. ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯೊಳಗಿನ ಸಾಕ್ಷ್ಯಗಳು ಮತ್ತು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಈ ಘಟನೆ ಸ್ಥಳೀಯ ಪ್ರದೇಶದಲ್ಲಿ ಆತಂಕ ಮತ್ತು ಆಘಾತವನ್ನು ಉಂಟುಮಾಡಿದ್ದು, ಇಂತಹ ಕ್ರೂರ ಕೃತ್ಯಕ್ಕೆ ಕಾರಣವಾದ ಹಿನ್ನೆಲೆ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈ ಘಟನೆಗೆ ಕಾರಣ ಮಗಳು ಶ್ವೇತ ಎಂಬಾಕೆ ಕೆನತ್ ಎಂಬಾತನ ಬಳಿ ವರ್ಷಗಳಿಂದ ಪ್ರೀತಿಯಲ್ಲಿದ್ದಳು ಅಷ್ಟೇ ಅಲ್ಲದೆ ಲಿವ್ ಇನ್ ರಿಲೇಷನ್ಶಿಪ್ ಅಲ್ಲಿ ಸಹ ಆತನ ಜೊತೆ ಇದ್ದಳು ಅದನ್ನು ಸಹಿಸದ ಕುಟುಂಬದವರು ಅದನ್ನು ವಿರೋಧಿಸಿದ್ದಾರೆ . ಇದನ್ನು ವಿರೋಧಿಸಿದ ಕಾರಣಕ್ಕೆ ಇಡೀ ಕುಟುಂಬಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾಳೆ. ಚಾಕುವಿನಿಂದ ಇರಿದು ಮನೆಯಲ್ಲಿನ ತಂದೆ ತಾಯಿ ಮತ್ತು ತಂಗಿಯನ್ನು ಸಾಯಿಸಿದ್ದಾಳೆ.
ಮನೆಯೊಳಗಿನ ವಿವಾದವೇ ಅಥವಾ ಪ್ರೀತಿಯ ವಿಷಯವೇ ಈ ದುರ್ಘಟನೆಗೆ ಕಾರಣವಾಯಿತೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ವಿವರಗಳನ್ನು ಪೊಲೀಸರು ಶೀಘ್ರದಲ್ಲೇ ಬಹಿರಂಗಪಡಿಸುವ ಸಾಧ್ಯತೆ ಇದೆ.
ಘಟನೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದು, ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ತನಿಖೆ ಚುರುಕುಗೊಂಡಿದೆ. ಶೀಘ್ರದಲ್ಲೇ ಇಬ್ಬರೂ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯರು ನೀಡಿದ ಮಾಹಿತಿಯನ್ನೂ ಪೊಲೀಸರು ಸಂಗ್ರಹಿಸುತ್ತಿದ್ದು, ಘಟನೆಯ ನಿಖರ ಕಾರಣವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.
ಘಟನೆ ಬಳಿಕ ಪ್ರದೇಶದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ನೆರೆಹೊರೆಯವರು ಇಂತಹ ಘಟನೆ ನಡೆಯುತ್ತದೆ ಎಂದು ಊಹಿಸಿರಲಿಲ್ಲ ಎಂದು ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರವೇ ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಸ್ಪಷ್ಟವಾಗುವ ಸಾಧ್ಯತೆ ಇದೆ.




