ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ಮುಸ್ಲಿಂ ಸಮುದಾಯದ ಗುಂಪೊಂದು ನಮಾಜ್ ಮಾಡಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.
ಈ ಘಟನೆಯು ವಿವಾದ ಹುಟ್ಟುಹಾಕಿದ್ದು, ವಿರೋಧ ಪಕ್ಷ ಬಿಜೆಪಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿದೆ. ಅತ್ಯಂತ ಭದ್ರತೆಯ ಪ್ರದೇಶವಾದ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಲು ಹೇಗೆ ಅವಕಾಶ ನೀಡಲಾಯ್ತು ಎಂದು ಬಿಜೆಪಿ ಪ್ರಶ್ನಿಸಿದೆ. ರಾಜ್ಯದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಆದರೆ ಮುಸ್ಲಿಂ ಸಮುದಾಯಕ್ಕೆ ನಮಾಜ್ ಮಾಡಲು ಹೇಗೆ ಅವಕಾಶ ನೀಡಿತ್ತು. ನಮಾಜ್ ಮಾಡಲು ಅನುಮತಿ ನೀಡಿದಿಯೇ ಎಂದು ಬಿಜೆಪಿ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿದಿನ ಸಾವಿರಾರು ಪ್ರಯಾಣಿಕರು ಇಲ್ಲಿಂದ ಪ್ರಯಾಣಿಸುತ್ತಾರೆ. ಈ ಘಟನೆಯಲ್ಲಿ ವೀಡಿಯೋದಲ್ಲಿ ಕಾಣುವಂತೆ, ಮುಸ್ಲಿಂ ಸಮುದಾಯದ ಸುಮಾರು 10-15 ಜನರು ನೆಲದ ಮೇಲೆ ಕುಳಿತು ನಮಾಜ್ ಮಾಡುತ್ತಿರುವುದು ಕಾಣಬಹುದು. ಭದ್ರತಾ ಸಿಬ್ಬಂದಿ ಹತ್ತಿರದಲ್ಲೇ ನಿಂತು ನೋಡುತ್ತಿರುವುದು ಕಂಡುಬರುತ್ತದೆ. ಈ ವೀಡಿಯೋವನ್ನು ಬಿಜೆಪಿ ವಕ್ತಾರ ವಿಜಯ್ ಪ್ರಸಾದ್ ಅವರು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.
How is this even allowed inside the T2 Terminal of Bengaluru International Airport?
Hon’ble Chief Minister @siddaramaiah and Minister @PriyankKharge do you approve of this?Did these individuals obtain prior permission to offer Namaz in a high-security airport zone?
Why is it… pic.twitter.com/iwWK2rYWZa— Vijay Prasad (@vijayrpbjp) November 9, 2025
ವಿಜಯ್ ಪ್ರಸಾದ್ ಅವರ ಪೋಸ್ಟ್ನಲ್ಲಿ, “ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ನಮಾಜ್ ಮಾಡಲು ಹೇಗೆ ಅನುಮತಿಸಲಾಗಿದೆ? ಮಾನ್ಯ ಮುಖ್ಯಮಂತ್ರಿ @siddaramaiah ಮತ್ತು ಸಚಿವ @PriyankKharge ನೀವು ಇದನ್ನು ಅನುಮೋದಿಸುತ್ತೀರಾ? ಈ ವ್ಯಕ್ತಿಗಳು ಹೆಚ್ಚಿನ ಭದ್ರತೆಯ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ? ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್ಎಸ್ಎಸ್ ಪಥಸಂಚಲನ ನಡೆಸಿದಾಗ ಸರ್ಕಾರ ಏಕೆ ಆಕ್ಷೇಪಿಸುತ್ತದೆ. ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ಅಂತಹ ಚಟುವಟಿಕೆಗಳಿಗೆ ಕಣ್ಣು ಮುಚ್ಚು ಕುಳಿತಿರುತ್ತದೆ. ಇದು ಅಂತಹ ಸೂಕ್ಷ್ಮ ವಲಯದಲ್ಲಿ ಗಂಭೀರ ಭದ್ರತಾ ಕಾಳಜಿಯನ್ನು ಉಂಟುಮಾಡುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ. ಅದರೆ ರಾಜ್ಯ ಸರ್ಕಾರ ಇನ್ನೂ ಈ ಘಟನೆಗೆ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.





