ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!

BeFunky collage (72)

ಕರ್ನಾಟಕದಲ್ಲಿ ತೀವ್ರ ಬಿಸಿಲ ಅಲೆ (Heat Wave) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ವೇವ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಬೀದರ್ ಜಿಲ್ಲೆಯಲ್ಲಿ ಹೀಟ್ ಸ್ಟ್ರೋಕ್‌ಗೆ ಮೊದಲ ಬಲಿ ದಾಖಲಾಗಿದೆ.

ಘಟನೆಯ ವಿವರ : ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದ ಹೊರವಲಯದಲ್ಲಿ 20 ವರ್ಷದ ಯುವಕ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ ಬಿಸಿಲಿನ ಝಳ ತಾಳಲಾರದೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉತ್ತರ ಪ್ರದೇಶ ಮೂಲದ ಈ ಯುವಕ ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದನು.

ಕಳೆದ ಕೆಲವು ದಿನಗಳಿಂದ ಬೀದರ್ ಜಿಲ್ಲೆಯಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಹೊರಗೆ ಸಂಚರಿಸುವುದು ಕಷ್ಟಕರವಾಗಿತ್ತು. ಘಟನೆಯ ದಿನ ಸಮೀರ್ ಅವರಿಗೆ ತಲೆ ಸುತ್ತು ಬಂದಿತ್ತು ಎಂದು ಹೇಳಿಕೊಂಡಿದ್ದರು. ಸ್ಥಳೀಯ ಮೆಕ್ಯಾನಿಕ್ ಅಂಗಡಿ ಬಳಿ ನೀರು ಕುಡಿದು ಸ್ವಲ್ಪ ವಿಶ್ರಾಂತಿ ಪಡೆದ ನಂತರ ಡಿಗ್ಗಿ ಗ್ರಾಮದ ಕಡೆಗೆ ರಾಷ್ಟ್ರೀಯ ಹೆದ್ದಾರಿ-50 ಮಾರ್ಗವಾಗಿ ತೆರಳುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದರು. ಸ್ಥಳೀಯರು ನೆರವಿಗೆ ಧಾವಿಸಿದ್ದರೂ, ಹೀಟ್ ಸ್ಟ್ರೋಕ್‌ನಿಂದಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದರು.

ಅಧಿಕಾರಿಗಳ ಎಚ್ಚರಿಕೆ: ಜಿಲ್ಲಾ ಅಧಿಕಾರಿಗಳು ಮತ್ತು ವೈದ್ಯರು ಜನರಿಗೆ ಮನವಿ ಮಾಡಿದ್ದಾರೆ:

ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಕಮಲನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.

ಕರ್ನಾಟಕದಲ್ಲಿ ಈ ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್‌ಗೆ ಮೊದಲ ಬಲಿ ದಾಖಲಾಗಿದೆ. ಬೀದರ್‌ನಲ್ಲಿ 20 ವರ್ಷದ ಯುವಕನ ಸಾವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿದ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದಿರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Exit mobile version