ಬಿಕ್ಲು ಶಿವ ಕೇಸ್‌ನಲ್ಲಿ ಬೈರತಿ ಬಸವರಾಜ್‌‌ಗೆ ಸಂಕಷ್ಟ: ಬಂಧಿಸಬೇಕೆಂದು ಹೈಕೋರ್ಟ್‌ಗೆ ಅರ್ಜಿ

Untitled design 2025 09 24t134043.301

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ಗುಪ್ತಚರ ಇಲಾಖೆ (ಸಿಐಡಿ) ಚುರುಕುಗೊಳಿಸಿದ್ದು, ಈಗಾಗಲೇ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಜಗದೀಶ್‌ನನ್ನು ಬಂಧಿಸಲಾಗಿದೆ. ಈಗ ಭೈರತಿ ಬಸವರಾಜ್‌ರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಪ್ರಾಸಿಕ್ಯೂಷನ್‌ನ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಬಿ.ಎನ್. ಜಗದೀಶ್ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

ಈ ಹಿಂದೆ, ಭೈರತಿ ಬಸವರಾಜ್‌ಗೆ ಬಂಧನದಿಂದ ರಕ್ಷಣೆ ನೀಡಿದ್ದ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ತೆರವುಗೊಳಿಸುವಂತೆ ಕೋರಿ ಸಿಐಡಿ ಅರ್ಜಿ ಸಲ್ಲಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಬೈರತಿ ಬಸವರಾಜ್ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಲಾಗಿದೆ ಎಂಬ ಗಂಭೀರ ಆರೋಪವೂ ಇದೆ.

ಸಿಐಡಿ ತನಿಖೆಯಲ್ಲಿ ಈಗಾಗಲೇ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಈ ಸಾಕ್ಷ್ಯಗಳು ಭೈರತಿ ಬಸವರಾಜ್‌ ಅವರ ವಿರುದ್ಧದ ತನಿಖೆಯನ್ನು ಮತ್ತಷ್ಟು ಗಂಭೀರಗೊಳಿಸಿವೆ. ಈ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿದೆ ಎಂದು ಪ್ರಾಸಿಕ್ಯೂಷನ್ ಒತ್ತಾಯಿಸಿದೆ.

ಆದರೆ, ಈ ಅರ್ಜಿಗೆ ಬೈರತಿ ಬಸವರಾಜ್‌ ಅವರ ವಕೀಲರಾದ ಹಿರಿಯ ವಕೀಲ ಸಂದೇಶ್ ಚೌಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಸಿಐಡಿ ತನಿಖೆಗೆ ತಮ್ಮ ಕಕ್ಷಿದಾರರನ್ನು ಕರೆದಿಲ್ಲ ಎಂದು ಅವರು ವಾದಿಸಿದ್ದಾರೆ. ಈ ಹಿಂದೆ ತನಿಖೆಗೆ ಕರೆದಾಗಲೆಲ್ಲಾ ಬೈರತಿ ಬಸವರಾಜ್ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಚೌಟ ತಿಳಿಸಿದ್ದಾರೆ. ಈಗ ಇದ್ದಕ್ಕಿದ್ದಂತೆ ಬಂಧನದ ಅಗತ್ಯವಿದೆ ಎಂದು ಆರೋಪಿಸುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದ್ದಾರೆ.

ಈ ಹಿಂದೆ, ಹೈಕೋರ್ಟ್ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್ ನೀಡಿತ್ತು. ಬಂಧನದಿಂದ ರಕ್ಷಣೆ ನೀಡುವ ಮಧ್ಯಂತರ ಆದೇಶ ಹೊರಡಿಸಿದ್ದ ಕೋರ್ಟ್, ತನಿಖೆಗೆ ಸಹಕರಿಸುವಂತೆ ಸೂಚಿಸಿತ್ತು. ಆದರೆ, ಈಗ ಸಿಐಡಿಯಿಂದ ಸಲ್ಲಿಕೆಯಾದ ಹೊಸ ಅರ್ಜಿಯಿಂದಾಗಿ ಆ ಆದೇಶವನ್ನು ತೆರವುಗೊಳಿಸುವ ಸಾಧ್ಯತೆ ಇದೆ.

Exit mobile version