ಬಿಜೆಪಿಯಿಂದ ಯತ್ನಾಳ್ ಕಿಕ್‌ ಔಟ್: 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ!

Untitled design 2025 03 26t173448.371

ವಿಜಯಪುರ (ಮಾರ್ಚ್ 26): ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡುವಂತೆ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶ ಹೊರಡಿಸಲಾಗಿದೆ. ಈ ನಿರ್ಧಾರದ ಮೂಲಕ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ದೂರವಿಟ್ಟು, ಅವರ ಮೇಲಿನ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಲಾಗಿದೆ.

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ, ಪಕ್ಷವು ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. 2025ರ ಫೆಬ್ರವರಿ 10 ರಂದು ನೀಡಿದ ಈ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ರು ಕೂಡಾ, ಅವರು ಪದೇ ಪದೇ ಶಿಸ್ತಿನ ಉಲ್ಲಂಘನೆಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ADVERTISEMENT
ADVERTISEMENT

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಪ್ರಕಟಣೆ ಮೂಲಕ ಈ ವಿಷಯವನ್ನು ಮಾಹಿತಿ ನೀಡಿದ್ದು, ‘ಪಕ್ಷದ ಶಿಸ್ತು ಮತ್ತು ನಂಬಿಕೆಯನ್ನು ಪುನಃ ಪುನಃ ಉಲ್ಲಂಘಿಸಿರುವುದರಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರವು ತಕ್ಷಣದಿಂದಲೇ ಜಾರಿಗೆ ಬರಲಿದೆ’ ಎಂದು ತಿಳಿಸಿದ್ದಾರೆ.

ಯತ್ನಾಳ್ ವಿರುದ್ಧದ ಆರೋಪಗಳು:

ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಳೆದ ಕೆಲವು ದಿನಗಳಿಂದ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಧಿಕ್ಕಾರಮಾಡಿ ಮಾತನಾಡುತ್ತಿದ್ದರು. ಈ ಕಾರಣದಿಂದಲೇ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಆದರೆ, ಇದೇ ಮೊದಲ ಬಾರಿಗೆ ಅಲ್ಲ; ಹಿಂದೆಯೂ ಹಲವು ಬಾರಿ ಅವರು ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಗಳು ಇವೆ.

 

Exit mobile version