• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2025 - 11:03 am
in Flash News, ಕರ್ನಾಟಕ
0 0
0
Untitled design 2025 03 08t104932.577

ಬೆಂಗಳೂರು: “ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?” ಎಂದು ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

RelatedPosts

ವಿಜಯ್ ಮಲ್ಯರ ಈಗಿನ ಒಟ್ಟು ಆಸ್ತಿ ಎಷ್ಟು? ₹9,000 ಕೋಟಿ ಸಾಲದ ಬಗ್ಗೆ ಮಲ್ಯ ಹೇಳಿದ್ದೇನು?

ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ

ಕರ್ನಾಟಕದಲ್ಲಿ ಕೊರೋನಾ ಏರಿಕೆ: 24 ಗಂಟೆಯಲ್ಲಿ 61 ಹೊಸ ಕೇಸ್‌ಗಳು ಪತ್ತೆ

ADVERTISEMENT
ADVERTISEMENT

ಬಿಜೆಪಿಯವರು ಈ ಬಜೆಟ್ ಅನ್ನು ಹಲಾಲ್ ಬಜೆಟ್ ಎಂದು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ಅವರು ಹೇಳಲಿ. ಪಾಪ ಅವರಾದರೂ ಏನು ಮಾಡುತ್ತಾರೆ. ಈ ರೀತಿ ಹೇಳುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ? ನಮ್ಮ ಬಜೆಟ್ ಅನ್ನು ಅವರು ಕಣ್ಣಾರೆ ಓದಿದ್ದು, ಕಿವಿಯಾರೆ ಕೇಳಿದ್ದು, ಬಾಯಲ್ಲಿ ಇನ್ನೇನು ಹೇಳಲು ಸಾಧ್ಯ? ಕಣ್ಣು ಕಿವಿಯಲ್ಲಿ ಸುಳ್ಳು ಹೇಳಲು ಆಗುವುದಿಲ್ಲ. ಕೇವಲ ಬಾಯಲ್ಲಿ ಮಾತ್ರ ಸುಳ್ಳು ಹೇಳಲು ಸಾಧ್ಯ. ಹೀಗಾಗಿ ಹೇಳುತ್ತಿದ್ದಾರೆ” ಎಂದು ತಿರುಗೇಟು ಕೊಟ್ಟರು.

“ಸಿಎಂ ಸಿದ್ದರಾಮಯ್ಯ ಅವರು ಐತಿಹಾಸಿಕ ಹಾಗೂ ದೇಶಕ್ಕೆ ಮಾದರಿ ಬಜೆಟ್ ಕೊಟ್ಟಿದ್ದಾರೆ. ಮುಂದೆ ಬೇರೆ ಬೇರೆ ರಾಜ್ಯಗಳು ನಮ್ಮ ಬಜೆಟ್ ಪಾಲನೆ ಮಾಡಲಿವೆ. ಈ ಬಜೆಟ್ ಸಮಾಜದ ಎಲ್ಲಾ ವರ್ಗದವರಿಗಾಗಿ ಮಾಡಿರುವ ಬಜೆಟ್. ಈ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಗೆ ಹಾಗೂ ಇದಕ್ಕೆ ಸಹಕಾರ ಕೊಟ್ಟ ನನ್ನ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸುತ್ತೇನೆ” ಎಂದರು.

ಬ್ರ್ಯಾಂಡ್ ಬೆಂಗಳೂರು ಜಾರಿ

“ಬ್ರ್ಯಾಂಡ್ ಬೆಂಗಳೂರಿನ ಮಹತ್ವದ ಯೋಜನೆಗಳಿಗೆ ಅನುದಾನ ನೀಡಲಾಗಿದೆ. ರಾಜಧಾನಿಯಲ್ಲಿರುವ 1.40 ಕೋಟಿ ಜನರಿಗೆ ಅನುಕೂಲವಾಗಲಿದೆ. ಟನಲ್ ರಸ್ತೆ ಆಗಿಯೇ ಆಗುತ್ತೆ. ಮುಂಬರುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ಮಾಡಲಾಗುವುದು ಪಾಲಿಕೆ ಹಾಗೂ ಬಿಎಂಆರ್ ಸಿಎಲ್ ಇದರ ವೆಚ್ಚವನ್ನು 50:50 ಅನುಪಾತದಲ್ಲಿ ಭರಿಸಲಿವೆ. ಇನ್ನು ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿ ಬಫರ್ ವಲಯದಲ್ಲಿ 300 ಕಿ.ಮೀ ಉದ್ದದಷ್ಟು ರಸ್ತೆ ನಿರ್ಮಾಣ ಮಾಡಲಾಗುವುದು. ಈ ಯೋಜನೆಗೆ 3 ಸಾವಿರ ಕೋಟಿ ಮೀಸಲಿಡಲಾಗಿದೆ. ಬಫರ್ ರಸ್ತೆ, ಮೇಲ್ಸೇತುವೆ, ಟನಲ್ ರಸ್ತೆ ಗಳ ಮೂಲಕ ಬೆಂಗಳೂರುನಲ್ಲಿ 700-800 ಕಿ.ಮೀ ಉದ್ದದಷ್ಟು ಹೊಸ ರಸ್ತೆ ನಿರ್ಮಾಣ ಮಾಡುತ್ತಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ ಇನ್ನೇನು ಅಲೋಚನೆ ಮಾಡಲು ಸಾಧ್ಯ? ಜನರ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಸಾಲ ಮಾಡಿಯಾದರೂ ಈ ಯೋಜನೆ ಮಾಡುತ್ತೇವೆ. ಇಡೀ ವಿಶ್ವ ಬೆಂಗಳೂರಿನತ್ತ ತಿರುಗಿ ನೋಡುತ್ತಿದ್ದು, ಈ ನಗರಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ” ಎಂದು ತಿಳಿಸಿದರು.

ಸಿಂಗ್ ಅವರಿಗೆ ಇನ್ನಷ್ಟು ಮಾನ್ಯತೆ ನೀಡಬೇಕು

ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ಇಟ್ಟಿರುವ ಬಗ್ಗೆ ವಿವಾದ ಕೇಳಿಬರುತ್ತಿದೆ ಕೇಳಿದಾಗ, “ಅವರು ದೀನದಯಾಳ್ ಹೆಸರು ಇಡುವಾಗ ನಾವು ಮನಮೋಹನ್ ಸಿಂಗ್ ಹೆಸರು ಇಡಬಾರದೆ? ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆ, ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ನೆಲಮಂಗಲ ಮೇಲ್ಸೇತುವೆ, ಜೆ.ಎನ್ ನರ್ಮ್ ಯೋಜನೆ, ನರೇಗಾ, ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಆಶಾ ಕಾರ್ಯಕರ್ತ ಯೋಜನೆ ಜಾರಿಗೆ ತಂದವರು ಇವರು. ಬಿಜೆಪಿಯವರು ಇಂತಹ ಯಾವುದಾದರೂ ಒಂದು ಯೋಜನೆ ಮಾಡಿದ್ದಾರಾ? ದೇಶ ಹಾಗೂ ಕರ್ನಾಟಕ ರಾಜ್ಯದ ಕೊಡುಗೆಗೆ ಮನಮೋಹನ್ ಸಿಂಗ್ ಅವರು ಕೊಟ್ಟಿರುವ ಕೊಡುಗೆಗೆ ಅವರಿಗೆ ಇನ್ನಷ್ಟು ಮಾನ್ಯತೆ ನೀಡಬೇಕು” ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕಕ್ಕೆ ಲಾಟರಿ:

ಕಲ್ಯಾಣ ಕರ್ನಾಟಕ ಪ್ರವಾಸದ ಬಗ್ಗೆ ಕೇಳಿದಾಗ, “ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಲಾಟರಿ ಹೊಡೆದಿದೆ. ಖರ್ಗೆ ಅವರು ಆರ್ಟಿಕಲ್ 371ಜೆ ಜಾರಿಗೆ ತಂದರು. ಇನ್ನು ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪ್ರತಿ ವರ್ಷ 5 ಸಾವಿರ ಕೋಟಿ ನೀಡುತ್ತಿದ್ದೇವೆ. ಇಂದು ಕೂಡ ಸಚಿವ ಪ್ರಿಯಾಂಕ್ ಖರ್ಗೆ, ಸಂಸದರಾದ ರಾಧಾಕೃಷ್ಣ ಅವರ ಜತೆ ಜೇವರ್ಗಿಗೆ ತೆರಳಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು” ಎಂದರು.

ನೀರಾವರಿ ಇಲಾಖೆಗೆ ಅನುದಾನ ಕಡಿಮೆಯಾಗಿದೆ ಎಂದು ಕೇಳಿದಾಗ, “ನೀರಾವರಿ ಇಲಾಖೆಗೆ ಕಳೆದ ಬಾರಿಗಿಂತ ರೂ. 2 ಸಾವಿರ ಕೋಟಿ ಹೆಚ್ಚಿಗೆ ನೀಡಲಾಗಿದೆ. ನೀರಾವರಿಗೆ ನಾವು ಬೇರೆ ಯೋಜನೆ ರೂಪಿಸಿದ್ದೇವೆ. ಮಧ್ಯದಲ್ಲಿ ಬೇರೆ ಘೋಷಣೆ ಆಗಲಿದೆ, ಮಂಡಳಿಗಳಲ್ಲಿ ಕೆಲವು ತೀರ್ಮಾನ ಮಾಡಿದ್ದೇವೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1 (15)

ಹನಿಮೂನ್ ಕೊಲೆ ಕೇಸ್: “ನನ್ನ ಮಗಳು 100% ಮುಗ್ಧೆ,” ಎಂದ ಸೋನಂನ ತಂದೆ, CBI ತನಿಖೆಗೆ ಮನವಿ!

by ಸಾಬಣ್ಣ ಎಚ್. ನಂದಿಹಳ್ಳಿ
June 9, 2025 - 2:30 pm
0

Befunky collage 2025 06 09t135230.695

‘ಥಗ್ ಲೈಫ್’ ವಿವಾದ: ಕಮಲ್ ಹಾಸನ್‌ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

by ಸಾಬಣ್ಣ ಎಚ್. ನಂದಿಹಳ್ಳಿ
June 9, 2025 - 1:53 pm
0

Befunky collage 2025 06 09t131416.319

ಓಯೋ ರೂಂಗೆ ಕರೆಸಿ ಪ್ರಿಯತಮೆಯ ಬರ್ಬರ ಹ*ತ್ಯೆ: ಟೆಕ್ಕಿ ಬಂಧನ

by ಸಾಬಣ್ಣ ಎಚ್. ನಂದಿಹಳ್ಳಿ
June 9, 2025 - 1:14 pm
0

Your paragraph text (5)

ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ, ಇಲ್ಲಿದೆ ಇಂದಿನ ದರಪಟ್ಟಿ

by ಸಾಬಣ್ಣ ಎಚ್. ನಂದಿಹಳ್ಳಿ
June 9, 2025 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 08t231627.863
    ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ
    June 8, 2025 | 0
  • Untitled design 2025 06 08t225009.638
    ಕರ್ನಾಟಕದಲ್ಲಿ ಕೊರೋನಾ ಏರಿಕೆ: 24 ಗಂಟೆಯಲ್ಲಿ 61 ಹೊಸ ಕೇಸ್‌ಗಳು ಪತ್ತೆ
    June 8, 2025 | 0
  • Untitled design 2025 06 08t212632.755
    ಕಾಲ್ತುಳಿತ ಪ್ರಕರಣದಲ್ಲಿ BJP-JDS ರಾಜಕೀಯ ಉದ್ದೇಶದಿಂದ ಆರೋಪ ಮಾಡುತ್ತಿದೆ : ಸಿಎಂ
    June 8, 2025 | 0
  • Untitled design 2025 06 08t173844.352
    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಎನ್‌ಐಎ ಹೆಗಲಿಗೆ
    June 8, 2025 | 0
  • Untitled design 2025 06 07t225805.848
    ರಾಜ್ಯದಲ್ಲಿ ಕೊರೊನಾ ಮಹಾಮಾರಿ ಮತ್ತೆ ಏರಿಕೆ: 57 ಹೊಸ ಪ್ರಕರಣ, ಇಬ್ಬರು ಬಲಿ
    June 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version