ವಿನಯ್ ಸೋಮಯ್ಯ ಆ*ತ್ಮಹ*ತ್ಯೆ ಕೇಸ್: ಕುಶಾಲನಗರದಲ್ಲಿ ಇಂದು BJP ಪ್ರತಿಭಟನೆ

Untitled design 2025 04 05t081702.023

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದರಿಂದ ರಾಜ್ಯ ರಾಜಕಾರಣ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ  ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇಂದು ಕುಶಾಲನಗರದಲ್ಲಿ ಭಾರೀ ಮಟ್ಟದ ಪ್ರತಿಭಟನೆ ನಡೆಯಲಿದೆ.

ಘಟನೆಯ ಹಿನ್ನೆಲೆ:

ADVERTISEMENT
ADVERTISEMENT

ವಿನಯ್ ಸೋಮಯ್ಯ ಎನ್ನುವವರು ಬಿಜೆಪಿ ಬೆಂಬಲಿಗರಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರುವುದು  ಸಾಕಷ್ಟು ಅನುಮಾನಗಳು ಮತ್ತು ರಾಜಕೀಯ ಪಿತೂರಿಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಅವರು ಆತ್ಮಹತ್ಯೆಗೆ ಶರಣಾದ ಕಾರಣಗಳನ್ನು ಕುರಿತಂತೆ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಶಾಸಕ ಪೊನ್ನಣ್ಣ ಹಾಗೂ ಮಂಥರ್ ಗೌಡರ ಹೆಸರು ಎಫ್‌ಐಆರ್‌ನಲ್ಲಿ ಸೇರಿಸುವಂತೆ ಬಿಜೆಪಿ ಒತ್ತಾಯಿಸುತ್ತಿದೆ.

ಪ್ರತಿಭಟನೆಗೆ ಭಾರೀ ಸಿದ್ಧತೆ:

ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿನಯ್ ಸೋಮಯ್ಯ ಅವರಿಗೆ ನ್ಯಾಯ ಕೊಡಿಸುವ ಹೆಸರಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು ಕುಶಾಲನಗರ ಡಿವೈಎಸ್ಪಿ ಕಚೇರಿ ಎದುರು ಪಾರ್ಥಿವ ಶರೀರವನ್ನು ಇಟ್ಟುಕೊಂಡು ಪ್ರತಿಭಟನೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಹಾಗೂ ಇತರ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ.

ಪೊಲೀಸ್ ಬಂದೋಬಸ್ತ್

ಈ ಬೃಹತ್ ಪ್ರತಿಭಟನೆಗೆ ಕೊಡಗು ಜಿಲ್ಲಾಡಳಿತ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಕುಶಾಲನಗರದ ವಿವಿಧ ಭಾಗಗಳಲ್ಲಿ 500ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೊಡಗು ಜಿಲ್ಲೆಯ ಎಸ್‌ಪಿ ಕೆ. ರಾಮರಾಜನ್ ಹಾಗೂ ಮೈಸೂರು ಡಿಸಿಪಿ ಸುಂದರ್ ರಾಜ್ ಸ್ಥಳಕ್ಕೆ ಆಗಮಿಸಿ ವಾತಾವರಣವನ್ನು ಹತ್ತಿಕ್ಕುವಲ್ಲಿ ತೊಡಗಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version