ಬೆಂಗಳೂರು: ಬೆಂಗಳೂರಿನ ಆನೇಕಲ್ನಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರವೀಣ್ ಗೌಡ ಬೇಲೂರು ಎಂಬುವವರು ಫೇಸ್ಬುಕ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ತನಗೆ ಆದ ಕಿರುಕುಳ ಹಾಗೂ ಮಾನಸಿಕ ಒತ್ತಡವನ್ನು ವಿವರಿಸಿ ನಂತರ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೂ ಮೊದಲು ವಿಡಿಯೋದಲ್ಲಿ ರೆಕಾರ್ಡ್ ಮಾಡಿದ್ದು, ಕಳೆದ ಎರಡು ತಿಂಗಳಿಂದ ನಿರಂತರ ಮಾನಸಿಕ ಹಿಂಸೆ ಅನುಭವಿಸುತ್ತಿರುವುದಾಗಿ ಹಾಗೂ ಹಲವರು ತನ್ನನ್ನು ತೀವ್ರವಾಗಿ ಕಿರುಕುಳ ನೀಡುತ್ತಿರುವುದಾಗಿ ಪ್ರವೀಣ್ ಗೌಡ ಹೇಳಿದ್ದಾರೆ. ಈ ಕಾರಣದಿಂದ ಮನಸ್ಸು ಬೇಸತ್ತು ಆತ್ಮಹತ್ಯೆ ಮಾಡುವ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ. ತಮ್ಮ ಸಾವಿಗೆ ಕಾರಣರಾಗಿರುವವರ ಹೆಸರುಗಳನ್ನೂ ವಿಡಿಯೋದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.
ಆರೋಪಿತರ ಹೆಸರಿನ ಪಟ್ಟಿ
ಪ್ರವೀಣ್ ರವರು ವಿಡಿಯೋದಲ್ಲಿ, ಸಮಂದೂರು ಕಿರಣ್, ಗೋಕುಲ್ ಫ್ಯಾಷನ್ನ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ ಸೇರಿದಂತೆ ಹಲವು ಜನರು ತಮ್ಮನ್ನು ಕಿರುಕುಳ ನೀಡುತ್ತಿದ್ದವರು ಎಂದು ಆರೋಪಿಸಿದ್ದಾರೆ. ” ಕಿರಣ್ ನನ್ನು ಮಾತ್ರ ದಯವಿಟ್ಟು ಬಿಡಬೇಡಿ,” ಎಂದು ಹೇಳಿದ್ದಾನೆ.
ಕಿರಣ್ ವಿರುದ್ಧ ಗಂಭೀರ ಆರೋಪ
ಕಿರಣ್ ಅನೇಕ ಮಹಿಳೆಯರಿಗೆ ಫೋನ್ ಮಾಡಿ ಅವಮಾನ ಹಾಗೂ ಕಿರುಕುಳ ನೀಡುತ್ತಿದ್ದನು.ಕಿರಣ್ ಮಾಡುವ ಇಂತಹ ಕೆಲಸಗಳೆಲ್ಲ ನನ್ನ ಮೇಲೆ ಬಂದಿವೆ ಎಂದು ವಿಡಿಯೋ ರೆಕಾರ್ಡ್ ನಲ್ಲಿ ಹೇಳಿದ್ದಾರೆ.
ಇದರಿಂದ ಮನನೊಂದು ಆನೇಕಲ್ ಪಟ್ಟಣದ ಎಸ್.ವಿ.ಎಂ. ಶಾಲೆಯ ಬಳಿಯಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ತಕ್ಷಣವೇ ಪೊಲೀಸರು ಧಾವಿಸಿ ಪ್ರಕರಣದ ಪರಿಶೀಲನೆ ನಡೆಸಿದ್ದು, ಸ್ಥಳದಿಂದ ವಿಡಿಯೋ ಮೆಸೇಜ್ ಹಾಗೂ ಇತರ ಸಾಕ್ಷ್ಯಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಪ್ರೀತಿಸಿದ ಶಿಕ್ಷಕಿ ಕೈಕೊಟ್ಟಿದ್ದಕ್ಕೆ ಆ*ತ್ಮಹ*ತ್ಯೆ ಮಾಡಿಕೊಂಡ ಶಿಕ್ಷಕ
ಬೆಂಗಳೂರು: ಪ್ರೀತಿಸಿದ ಶಿಕ್ಷಕಿ ಕೈಕೊಟ್ಟ ಕಾರಣ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಾಕಳಿ ಗ್ರಾಮದಲ್ಲಿ ನಡೆದಿದೆ. ಅಕ್ರಮ ಪ್ರೇಮ ಸಂಬಂಧದ ಸಂಕಷ್ಟದ ಮಧ್ಯೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಟ್ಯೂಷನ್ ಸೆಂಟರ್ ನಡೆಸುತ್ತಿದ್ದ 35 ವರ್ಷದ ಶಿಕ್ಷಕ ಆನಂದ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಶಿಕ್ಷಕ ಆನಂದ, ವಿವಾಹಿತ ಶಿಕ್ಷಕಿ ಹೇಮಲತಾರೊಂದಿಗೆ ಕಳೆದ 8 ವರ್ಷಗಳಿಂದ ಅಕ್ರಮ ಪ್ರೇಮ ಸಂಬಂಧದಲ್ಲಿದ್ದರು ಎನ್ನಲಾಗಿದೆ. ಇಬ್ಬರೂ ಸೇರಿ ಮಾಕಳಿಯಲ್ಲಿ ಟ್ಯೂಷನ್ ಸೆಂಟರ್ ಆರಂಭಿಸಿದ್ದರು. ಆದರೆ ಇತ್ತೀಚೆಗೆ ಹೇಮಲತಾ ಮತ್ತೊಬ್ಬನಾದ ನಿರಂಜನ್ ಜೊತೆಗೆ ಹೆಚ್ಚಿನ ಒಡನಾಟ ಹೊಂದಿದ್ದರಿಂದ ಇವರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ.
ಆನಂದ ಟ್ಯೂಷನ್ ಸೆಂಟರ್ ಹಣವಷ್ಟೇ ಅಲ್ಲದೆ, ತನ್ನ ಮನೆಯಿಂದಲೂ ಸುಮಾರು 5 ಲಕ್ಷ ರೂ. ನೀಡಿದ್ದರಾಗಿ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಗಲಾಟೆ ಶುರುವಾಗಿ, ಹೇಮಲತಾ ತನ್ನ ಪತಿ ತಿಮ್ಮಯ್ಯಗೆ ವಿಷಯ ತಿಳಿಸಿ ಬೆದರಿಕೆ ನೀಡಿದ್ದಾರಂತೆ.
ಡೆತ್ ನೋಟ್, ವಾಟ್ಸಪ್ ಸ್ಟೇಟಸ್ ಮೂಲಕ ಹೇಮಲತಾಳ ಮೇಲಿನ ಆರೋಪ
ಆನಂದ ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದು, ವಾಟ್ಸಪ್ ಸ್ಟೇಟಸ್ನಲ್ಲೂ ಹೇಮಲತಾಳ ಕಿರುಕುಳದ ಬಗ್ಗೆ ಮಾಹಿತಿ ಹಾಕಿದ್ದಾನೆ. ಮಾಕಳಿಯ ಟ್ಯೂಷನ್ ಸೆಂಟರ್ನಲ್ಲಿ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಕೊಡಲಾಗಿದೆ.
ಹೇಮಲತಾ ವಿರುದ್ಧ ಪ್ರಕರಣ ದಾಖಲು
ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 108B ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತ ಶಿಕ್ಷಕಿ ಹೇಮಲತಾರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುತ್ತಿದೆ.