• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಿಯತಮೆಯ ಲಗ್ನ ಪತ್ರಿಕೆ ನೋಡಿ ಬಾಡಿ ಬಿಲ್ಡರ್ ಆತ್ಮಹ*ತ್ಯೆ

admin by admin
February 8, 2026 - 9:57 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

RelatedPosts

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌

ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!

ADVERTISEMENT
ADVERTISEMENT

ಬೆಂಗಳೂರು: ಪ್ರೀತಿಸಿದ ಯುವತಿ ತನಗೆ ಕೈಕೊಟ್ಟು ಬೇರೆಯವನೊಂದಿಗೆ ಮದುವೆಯಾಗುತ್ತಿದ್ದಾಳೆಂಬ ಸುದ್ದಿಯನ್ನು ಸಹಿಸಲಾಗದೆ ಬೆಂಗಳೂರಿನ ಖ್ಯಾತ ಬಾಡಿ ಬಿಲ್ಡರ್ ನೇಣಿಗೆ ಶರಣಾಗಿರುವ ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

ಪ್ರಕರಣದ ವಿವರ:

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಿರಣ್ (26) ಎಂದು ಗುರುತಿಸಲಾಗಿದೆ. ಕಿರಣ್ ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು ಮತ್ತು ಬಾಡಿ ಬಿಲ್ಡಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಕಿರಣ್, ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಮುಂಬರುವ ಫೆಬ್ರವರಿ 14 ರ ‘ವ್ಯಾಲೆಂಟೈನ್ಸ್ ಡೇ’ (ಪ್ರೇಮಿಗಳ ದಿನ) ಸಂದರ್ಭದಲ್ಲಿ ತನ್ನ ಪ್ರೇಯಸಿಗೆ ವಿಶೇಷ ಉಡುಗೊರೆಯನ್ನು ನೀಡಿ ಸರ್ಪ್ರೈಸ್ ಕೊಡಲು ಕಿರಣ್ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಆದರೆ ತಾನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದ ಹುಡುಗಿ, ಬೇರೊಬ್ಬನ ಜೊತೆ ಮದುವೆಯಾಗಲು ಸಿದ್ದಳಾಗುತ್ತಿದ್ದಳು.

ಯುವತಿಯ ಮದುವೆ ಬೇರೊಬ್ಬನೊಂದಿಗೆ ನಿಶ್ಚಯವಾಗಿದ್ದು ಮಾತ್ರವಲ್ಲದೆ, ಆಕೆ ಕಿರಣ್‌ಗೆ ತನ್ನ ಮದುವೆಯ ಲಗ್ನಪತ್ರಿಕೆ ಮತ್ತು ಮದುವೆಗಾಗಿ ಖರೀದಿಸಿದ ಹೊಸ ಸೀರೆಯನ್ನು ತೋರಿಸಿದ್ದಾಳೆ. ಇದರಿಂದ ತೀವ್ರ ಮನನೊಂದಿದ್ದ ಕಿರಣ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮನನೊಂದ ಕಿರಣ್ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತನ್ನ ಮನೆಗೆ ಬಂದು ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಮಗನನ್ನು ಕಳೆದುಕೊಂಡ ಪೋಷಕರು ಈಗ ಯುವತಿಯ ಕುಟುಂಬದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮೃತ ಕಿರಣ್ ತಾಯಿಯ ಆರೋಪದಂತೆ, ಕಿರಣ್ ಪ್ರೀತಿಸುತ್ತಿದ್ದ ಯುವತಿಯ ಪೋಷಕರು ಸುಮಾರು 50 ಲಕ್ಷ ರೂಪಾಯಿ ಸಾಲ ಹೊಂದಿದ್ದರು. ಈ ವಿಚಾರ ಕಿರಣ್‌ಗೆ ತಿಳಿದಾಗ, ನಿಮ್ಮ ಎಲ್ಲಾ ಸಾಲವನ್ನು ನಾನೇ ತೀರಿಸುತ್ತೇನೆ, ನನ್ನ ಪ್ರೇಯಸಿಯನ್ನು ನನಗೆ ಕೊಟ್ಟು ಮದುವೆ ಮಾಡಿ ಎಂದು ಭರವಸೆ ನೀಡಿದ್ದನಂತೆ. ಕಳೆದ ಎಂಟು ತಿಂಗಳ ಹಿಂದೆಯೇ ಯುವತಿ ಕಿರಣ್ ಮನೆಗೆ ಬಂದು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿದ್ದಳು. ತನಗಿಂತ ಎರಡು ವರ್ಷ ದೊಡ್ಡವಳಾಗಿದ್ದರೂ ಕಿರಣ್ ಆಕೆಯನ್ನು ಮನಸ್ಪೂರ್ತಿಯಾಗಿ ಪ್ರೀತಿಸಿ ಮದುವೆಯಾಗಲು ಇಚ್ಚಿಸಿದ್ದ.

ಕಳೆದ ಒಂದು ವಾರದಲ್ಲಿ ಯುವತಿಯ ಕುಟುಂಬದವರು ಆಕೆಗೆ ಬೇರೊಬ್ಬನೊಂದಿಗೆ ಮದುವೆ ನಿಶ್ಚಯ ಮಾಡಿದ್ದರು. ಹಣ ಪಡೆದು ಈಗ ಮತ್ತೊಬ್ಬನ ಜೊತೆ ಮದುವೆಯಾಗಿ ನನ್ನ ಮಗನಿಗೆ ಮೋಸ ಮಾಡಿದ್ದಾರೆ ಎಂದು ಕಿರಣ್ ಪೋಷಕರು ಆರೋಪ ಮಾಡಿದ್ದಾರೆ.

ನಿನ್ನೆ ಸಂಜೆ ಕಿರಣ್ ತನ್ನ ತಾಯಿಯ ಬಳಿ ಹೋಗಿ ಬಿಳಿ ಹಾಳೆ (White Sheet) ಮತ್ತು ಪೆನ್ ಕೇಳಿದ್ದಾನೆ. ಮಗನ ವರ್ತನೆಯಿಂದ ಅನುಮಾನಗೊಂಡ ತಾಯಿ, ಯಾಕಪ್ಪಾ ವೈಟ್ ಪೇಪರ್ ? ಎಂದು ಪ್ರಶ್ನಿಸಿದಾಗ, ಕಿರಣ್ ಹೆದರಬೇಡಮ್ಮ, ಸುಮ್ಮನೆ ಫೈನಾನ್ಸ್ ಲೆಕ್ಕ ಬರೆಯಬೇಕು ಅಷ್ಟೇ ಎಂದು ಸುಳ್ಳು ಹೇಳಿ ಸಮಾಧಾನಪಡಿಸಿದ್ದಾನೆ. ಆದರೆ ಅದೇ ಹಾಳೆಯಲ್ಲಿ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಿರಣ್ ಬರೆದಿಟ್ಟಿರುವ ಡೆತ್ ನೋಟ್ ಈಗ ಪೊಲೀಸರ ವಶದಲಿದ್ದು, ಅದರಲ್ಲಿ ಪ್ರೀತಿಸಿದ ಯುವತಿ ಹಾಗೂ ಆಕೆಯ ಕುಟುಂಬಸ್ಥರ ಹೆಸರುಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಮಗನ ಸಾವಿಗೆ ಈ ಯುವತಿಯೇ ನೇರ ಕಾರಣ ಎಂದು ಪೋಷಕರು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (7)
    ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ
    August 15, 2026 | 0
  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
  • ಖರ್ಗೆ (2)
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌
    August 15, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
  • ಖರ್ಗೆ
    ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version