ಧರ್ಮಸ್ಥಳ ಬುರುಡೆ ಕೇಸ್: ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಸಮೀರ್‌ ವಿರುದ್ಧ ಚಿನ್ನಯ್ಯ ದೂರು

Untitled design 2025 12 20T115819.689

ಮಂಗಳೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಣೆದಿದ್ದ ಎಂದು ಆರೋಪವಿರುವ “ಬುರುಡೆ ಗ್ಯಾಂಗ್”‌ನಲ್ಲಿ ಈಗ ದೊಡ್ಡ ಬಿರುಕು ಮೂಡಿದೆ. ಇದೀಗ ಪ್ರಕರಣದ ಪ್ರಮುಖ ಆರೋಪಿ ಹಾಗೂ ‘ಮಾಸ್ಕ್ ಮ್ಯಾನ್’ ಎಂದೇ ಖ್ಯಾತರಾಗಿರುವ ಚಿನ್ನಯ್ಯ (Chinnaiah) ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿಬಿದ್ದಿದ್ದಾರೆ.

ಕೇವಲ ಎರಡು ದಿನಗಳ ಹಿಂದಷ್ಟೇ ಶಿವಮೊಗ್ಗ ಜಿಲ್ಲೆಯ ಸೋಗಾನೆ ಸಮೀಪದ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದ ಚಿನ್ನಯ್ಯ, ಬಿಡುಗಡೆಗೊಂಡ ತಕ್ಷಣವೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಬುರುಡೆ ಗ್ಯಾಂಗ್‌ನ ಪ್ರಮುಖ ಸದಸ್ಯರ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ್ದಾರೆ.

ಯಾರ ವಿರುದ್ಧ ದೂರು?

ಚಿನ್ನಯ್ಯ ಅವರು ಸಲ್ಲಿಸಿರುವ ದೂರಿನಲ್ಲಿ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಸಮೀರ್ ಎಂ.ಡಿ (Sameer MD) ಈ ಐವರು ತನ್ನ ಹಾಗೂ ತನ್ನ ಪತ್ನಿಯ ಜೀವಕ್ಕೆ ಅಪಾಯ ಉಂಟುಮಾಡಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ನನಗೂ, ನನ್ನ ಪತ್ನಿಗೂ ಜೀವ ಬೆದರಿಕೆ ಇದೆ’

ದೂರಿನಲ್ಲಿ ಚಿನ್ನಯ್ಯ ಅವರು, “ನಾನು ಜೈಲಿನಿಂದ ಬಿಡುಗಡೆಯಾದ ಬಳಿಕ, ಬುರುಡೆ ಗ್ಯಾಂಗ್‌ನ ಕೆಲವು ಸದಸ್ಯರಿಂದ  ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ನನ್ನ ಮೇಲೆ ಅಥವಾ ನನ್ನ ಪತ್ನಿಯ ಮೇಲೆ ದಾಳಿ ನಡೆಯುವ ಆತಂಕವಿದೆ. ಆದ್ದರಿಂದ ನಮಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದೂರು ಅರ್ಜಿಯನ್ನು ಅಧಿಕೃತವಾಗಿ ಸ್ವೀಕರಿಸಿದ್ದು, ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸರು ದೂರು ಸ್ವೀಕರಿಸಿದ್ದು, ಕಾನೂನುಬದ್ಧವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಗತ್ಯವಿದ್ದರೆ ಚಿನ್ನಯ್ಯ ಹಾಗೂ ಅವರ ಪತ್ನಿಗೆ ರಕ್ಷಣೆ ಒದಗಿಸುವ ಕುರಿತು ಮೇಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.

ಧರ್ಮಸ್ಥಳ ಬುರುಡೆ ಕೇಸ್‌: ಆರೋಪಿ ಚಿನ್ನಯ್ಯನಿಗೆ ಬಿಗ್‌ ರಿಲೀಫ್‌

ಮಂಗಳೂರು: ಕರ್ನಾಟಕದಾದ್ಯಂತ ಆತಂಕ ಮತ್ತು ಆಘಾತ ಮೂಡಿಸಿದ್ದ ಧರ್ಮಸ್ಥಳದ ಭಯಾನಕ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ಮುಖ್ಯ ಆರೋಪಿ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಆದೇಶದೊಂದಿಗೆ ನಾಳೆಯೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಚಿನ್ನಯ್ಯ ಬಿಡುಗಡೆಯಾಗುವ ಸಾಧ್ಯತೆ ದೆ.

ಧರ್ಮಸ್ಥಳದ ಕಾಡುಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಮೃತದೇಹಗಳನ್ನು ಗುಪ್ತವಾಗಿ ಹೂತಿಟ್ಟಿದ್ದಾರೆಂಬ ಆರೋಪ ಎದುರಿಸುತ್ತಿದ್ದ ಚಿನ್ನಯ್ಯ ಅವರನ್ನು ಸೆಪ್ಟೆಂಬರ್ ತಿಂಗಳಲ್ಲಿ ಬಂಧಿಸಲಾಗಿತ್ತು.

ಜಾಮೀನು ಅರ್ಜಿ ವಿಚಾರಣೆಯಲ್ಲಿ ನ್ಯಾಯಾಲಯ ಹಲವು ಅಂಶಗಳನ್ನು ಪರಿಗಣಿಸಿದೆ. ಚಿನ್ನಯ್ಯ ಅವರ ವಯಸ್ಸು, ಆರೋಗ್ಯ ಸ್ಥಿತಿ, ಜೈಲಿನಲ್ಲಿದ್ದ ಅವಧಿ ಮತ್ತು ತನಿಖೆಯಲ್ಲಿ ಸಹಕಾರ ನೀಡುತ್ತಿರುವುದು ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೋರ್ಟ್ ಜಾಮೀನು ನೀಡಿದೆ. ಆದರೆ ಇದು ಸಾಧಾರಣ ಜಾಮೀನಲ್ಲ. ಒಟ್ಟು 12 ಕಟ್ಟುನಿಟ್ಟಾದ ಷರತ್ತುಗಳನ್ನು ವಿಧಿಸಲಾಗಿದೆ.

ಮುಖ್ಯ ಷರತ್ತುಗಳು

ಈ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದಾಗಲಿದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

 

Exit mobile version