• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕತೆಗೆ ಕಂಟಕ: ಸಬ್ಸಿಡಿ ಕಡಿತಕ್ಕೆ ಸಲಹೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2025 - 10:34 pm
in ಕರ್ನಾಟಕ
0 0
0
Untitled design (64)

ಬೆಂಗಳೂರು, ಆಗಸ್ಟ್ 20, 2025: ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿವೆ ಎಂದು ರಾಜ್ಯ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿ ತಿಳಿಸಿದೆ. ಈ ಯೋಜನೆಗಳಿಂದ ರಾಜಸ್ವ ಕೊರತೆಯಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಕಡಿಮೆಯಾಗಿದೆ. 2023-24ನೇ ಸಾಲಿನಲ್ಲಿ 9,271 ಕೋಟಿ ರೂ. ರಾಜಸ್ವ ಕೊರತೆ ಮತ್ತು 65,522 ಕೋಟಿ ರೂ. ವಿತ್ತೀಯ ಕೊರತೆ ದಾಖಲಾಗಿದೆ. ಇದರಿಂದ ಸರ್ಕಾರ 84,334 ಕೋಟಿ ರೂ. ಸಾಲ ಮಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ 63,000 ಕೋಟಿ ರೂ. ನಿವ್ವಳ ಸಾಲ ಪಡೆಯಲಾಗಿದೆ ಎಂದು ಸಿಎಜಿ ವರದಿ ತಿಳಿಸಿದೆ.

2022-23ಕ್ಕೆ ಹೋಲಿಸಿದರೆ 2023-24ರಲ್ಲಿ ರಾಜಸ್ವ ಕೊರತೆ 9,271 ಕೋಟಿ ರೂ.ಗೆ ಏರಿಕೆಯಾಗಿದೆ. ಒಟ್ಟಾರೆ ಸಾಲದ ಮೊತ್ತ ಕಳೆದ ವರ್ಷಕ್ಕಿಂತ 37,000 ಕೋಟಿ ರೂ. ಹೆಚ್ಚಾಗಿದೆ. ಗೃಹ ಲಕ್ಷ್ಮೀ ಯೋಜನೆಗೆ 16,964 ಕೋಟಿ, ಗೃಹ ಜ್ಯೋತಿಗೆ 8,900 ಕೋಟಿ, ಅನ್ನಭಾಗ್ಯಕ್ಕೆ 7,384 ಕೋಟಿ, ಶಕ್ತಿ ಯೋಜನೆಗೆ 3,200 ಕೋಟಿ ಮತ್ತು ಯುವನಿಧಿಗೆ 88 ಕೋಟಿ ರೂ. ಸಾಲ ಮಾಡಲಾಗಿದೆ. ಒಟ್ಟು ರಾಜಸ್ವ ವೆಚ್ಚದಲ್ಲಿ ಗ್ಯಾರಂಟಿ ಯೋಜನೆಗಳ ಪಾಲು ಶೇ.15 ರಷ್ಟಿದೆ. ಈ ಯೋಜನೆಗಳಿಂದ ವಿತ್ತೀಯ ಕೊರತೆ 46,623 ಕೋಟಿಯಿಂದ 65,522 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

RelatedPosts

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್

ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?

ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ

ADVERTISEMENT
ADVERTISEMENT
ಇತರ ಇಲಾಖೆಗಳಲ್ಲಿ ನಷ್ಟ

ಅಬಕಾರಿ ಇಲಾಖೆಯಲ್ಲಿ KSDLC ಮದ್ಯ ಆಮದು ಲೈಸೆನ್ಸ್ ಇಲ್ಲದಿರುವುದರಿಂದ ಸರ್ಕಾರಕ್ಕೆ ಆದಾಯ ನಷ್ಟವಾಗಿದೆ. ಮುದ್ರಾಂಕ ಇಲಾಖೆಯಲ್ಲಿ 44 ಕೋಟಿ ರೂ. ನಷ್ಟ, ಸಾರಿಗೆ ಇಲಾಖೆಯ ಖಾಸಗಿ ಸೇವೆಗಳಿಂದ 1.87 ಕೋಟಿ ರೂ. ತೆರಿಗೆ ನಷ್ಟವಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ 9 ಕಚೇರಿಗಳಲ್ಲಿ ಕೊಳಚೆ ಶುದ್ಧೀಕರಣ ಘಟಕಗಳ ಸ್ಥಾಪನೆಯಾಗಿಲ್ಲ. ಒಪ್ಪಿಗೆ ಇಲ್ಲದೆ ಕಾರ್ಯನಿರ್ವಹಿಸುವ ಆಸ್ಪತ್ರೆಗಳನ್ನೂ ಗಮನಿಸಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆದಾರರು ಖಾತೆಗಳನ್ನು ತಮ್ಮ ಹೆಸರಿನಲ್ಲಿ ತೆರೆದಿದ್ದು, ಗುತ್ತಿಗೆ ನವೀಕರಣವಿಲ್ಲದೆ 1,559 ಕೋಟಿ ರೂ. ನಷ್ಟವಾಗಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿಯ 5.27 ಕೋಟಿ ರೂ. ಜಮೆ ಪತ್ತೆಯಾಗಿಲ್ಲ. ಸೇವಾಸಿಂಧು ಪೋರ್ಟಲ್‌ನಲ್ಲಿ ಕಾರ್ಮಿಕರ ನೋಂದಣಿಯ ಪರಿಶೀಲನೆಯಿಲ್ಲದಿರುವುದು ಮತ್ತು ಕೊಳಚೆ ಅಭಿವೃದ್ಧಿ ಮಂಡಳಿಯ ವಸತಿ ಯೋಜನೆಯಲ್ಲಿ ಫಲಾನುಭವಿಗಳ ನೈಜತೆ ಕೊರತೆಯಿದೆ.

ಸಬ್ಸಿಡಿ ಕಡಿತಕ್ಕೆ ಸಲಹೆ

ಸಿಎಜಿ ವರದಿಯ ಪ್ರಕಾರ, 64 ಇಲಾಖೆಗಳು ಮತ್ತು ಸರ್ಕಾರಿ ಕಂಪನಿಗಳಿಂದ 15,549 ಕೋಟಿ ರೂ. ಬಡ್ಡಿ ಸಂದಾಯವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಖರ್ಚು ವೇಗವಾಗಿ ಹೆಚ್ಚಾಗಿದ್ದು, ರಾಜಸ್ವ ಕೊರತೆಗೆ ಕಾರಣವಾಗಿದೆ. 2004-05 ಮತ್ತು ಕೊವಿಡ್ ಸಂದರ್ಭವನ್ನು ಹೊರತುಪಡಿಸಿ, ಇಂತಹ ಆರ್ಥಿಕ ಒತ್ತಡ ಇಲ್ಲ. ಹೀಗಾಗಿ, ಸಬ್ಸಿಡಿ ಕಡಿಮೆ ಮಾಡಲು ಸಿಎಜಿ ಸಲಹೆ ನೀಡಿದೆ. ಎಜಿ ಅಶೋಕ್ ಸಿನ್ಹಾ ಅವರು, ಗ್ಯಾರಂಟಿ ಯೋಜನೆಗಳು ಭವಿಷ್ಯದ ಆರ್ಥಿಕ ನಿರೀಕ್ಷೆಗಳಿಗೆ ಹಾನಿಕಾರಕ ಎಂದು ಎಚ್ಚರಿಕೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಲು ನೆರವಾದವು. ಆದರೆ, ಈ ಯೋಜನೆಗಳಿಂದ ರಾಜ್ಯದ ಆರ್ಥಿಕತೆಯ ಮೇಲೆ ಒತ್ತಡ ಹೆಚ್ಚಾಗಿದೆ. ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ಯೋಜನೆಗಳನ್ನು ಟೀಕಿಸಿದರೆ, ಆಡಳಿತ ಪಕ್ಷದ ಕೆಲ ನಾಯಕರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಕೂಡ ಅಭಿವೃದ್ಧಿಗೆ ಹಣದ ಕೊರತೆಯ ಬಗ್ಗೆ ಬೇಸರಗೊಂಡಿದ್ದಾರೆ. ಗ್ಯಾರಂಟಿಗಳಿಂದ ಮೂಲಸೌಕರ್ಯ ಕಾಮಗಾರಿಗಳು ಕುಂಠಿತವಾಗಿವೆ ಎಂದು ವಿಪಕ್ಷಗಳು ಆರೋಪಿಸಿವೆ. ಆದರೆ, ಕಾಂಗ್ರೆಸ್ ನಾಯಕರು ಗ್ಯಾರಂಟಿಗಳಿಂದ ಬಡವರಿಗೆ ಅನುಕೂಲವಾಗಿದೆ ಎಂದು ವಾದಿಸಿದ್ದಾರೆ.

2023-24ರಲ್ಲಿ ರಾಜ್ಯದ ಆದಾಯ ಶೇ.1.86ರಷ್ಟು ಹೆಚ್ಚಿದರೆ, ಖರ್ಚು ಶೇ.12.54ರಷ್ಟು ಏರಿಕೆಯಾಗಿದೆ. ಗ್ಯಾರಂಟಿ ಯೋಜನೆಗಳಿಂದ ಆದಾಯಕ್ಕೆ ಹೊಡೆತ ಬಿದ್ದಿದೆ. ಈ ಯೋಜನೆಗಳಿಗೆ ಹಣ ಒದಗಿಸಲು ಸಾಲದ ಮೊರೆ ಹೋಗಿರುವ ಸರ್ಕಾರ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಕಡಿತಗೊಳಿಸಿದೆ. ಇದರಿಂದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮೂಲಸೌಕರ್ಯ ಕಾಮಗಾರಿಗಳು ಸ್ಥಗಿತಗೊಂಡಿವೆ. ಸಿಎಜಿ ವರದಿಯು ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲಿಸಿ, ಸಬ್ಸಿಡಿಗಳನ್ನು ಕಡಿಮೆ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • ಪ್ರೊಟೆಸ್ಟ್ ಗೆ (8)
    ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್
    July 22, 2026 | 0
  • ಪ್ರೊಟೆಸ್ಟ್ ಗೆ (7)
    ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?
    July 22, 2026 | 0
  • ಪ್ರೊಟೆಸ್ಟ್ ಗೆ (5)
    ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ
    July 22, 2026 | 0
  • ಪ್ರೊಟೆಸ್ಟ್ ಗೆ (4)
    ಸೌಜನ್ಯ ಅ*ತ್ಯಾಚಾರ-ಕೊ*ಲೆ ಕೇಸ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version