• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘’ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ’’

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 30, 2025 - 9:00 pm
in ಕರ್ನಾಟಕ
0 0
0
Film 2025 04 30t205943.148

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ.

ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ.

RelatedPosts

ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಅವಿರೋಧ ಆಯ್ಕೆ: ಚುನಾವಣೆ ಇಲ್ಲದೆ ಮೇಲ್ಮನೆಗೆ ಎಂಟ್ರಿ!

ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಬಂಧನ

ಸಿಎಂ ಡಿಕೆಶಿಗೆ ಯಾವುದೇ ರಾಜಕೀಯ ಕಂಟಕ ಇಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

ADVERTISEMENT
ADVERTISEMENT

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ.

ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು.

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ.

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ.

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನುಬಲವಾಗಿ ನಂಬಿದವನು.

ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ದಿ ಹೇಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.

ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ.

ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 11T190930.558

ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ

by ಶಾಲಿನಿ ಕೆ. ಡಿ
June 11, 2026 - 7:12 pm
0

Untitled design 2026 06 11T185127.442

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 11, 2026 - 6:54 pm
0

Untitled design 2026 06 11T184155.463

ಟಗರು ಶಿವ ಗ್ಯಾಂಗ್‌ಸ್ಟರ್ ಮೂವಿಗೆ R. ಚಂದ್ರು ಗುಟುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 11, 2026 - 6:38 pm
0

Untitled design 2026 06 11T175852.158

ರಾಜ್ಯಸಭಾ ಚುನಾವಣೆ: ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿ ಅವಿರೋಧ ಆಯ್ಕೆ, ರಾಜಸ್ಥಾನದಲ್ಲಿ ‘ಕೈ’ಗೆ 1 ಸ್ಥಾನ

by ಶಾಲಿನಿ ಕೆ. ಡಿ
June 11, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 11T190930.558
    ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
    June 11, 2026 | 0
  • Untitled design 2026 06 11T172804.693
    ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಅವಿರೋಧ ಆಯ್ಕೆ: ಚುನಾವಣೆ ಇಲ್ಲದೆ ಮೇಲ್ಮನೆಗೆ ಎಂಟ್ರಿ!
    June 11, 2026 | 0
  • Untitled design 2026 06 11T165122.461
    ತಾಯಿಗೆ ಮಗಳ ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಆರೋಪಿ ಬಂಧನ
    June 11, 2026 | 0
  • Untitled design 2026 06 11T143603.740
    ಸಿಎಂ ಡಿಕೆಶಿಗೆ ಯಾವುದೇ ರಾಜಕೀಯ ಕಂಟಕ ಇಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
    June 11, 2026 | 0
  • Untitled design 2026 06 11T134936.700
    ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ
    June 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version