• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾತಿ ಗಣತಿ ವರದಿಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

ಸಿದ್ದರಾಮಯ್ಯ ಅವರಿಂದ ಸಿದ್ದರಾಮಯ್ಯ ಅವರಿಗಾಗಿ ಸಿದ್ದರಾಮಯ್ಯನವರೇ ಮಾಡಿಕೊಂಡ ವರದಿ..! ಅಂಕಿ ಅಂಶಗಳ ತೇಲಿಬಿಟ್ಟು ಟೆಸ್ಟ್ ರನ್ ಮಾಡುತ್ತಿದ್ದಾರೆ. ಕಾಂತರಾಜು ವರದಿಗೆ ₹150 ಕೋಟಿ ಖರ್ಚಾಗಿದೆ, ಆ ಹಣ ಹೇಗೆ ಖರ್ಚಾಯಿತು? ತನಿಖೆ ಆಗಲಿ

admin by admin
April 14, 2025 - 6:51 pm
in Flash News, ಕರ್ನಾಟಕ
0 0
0
Whatsapp image 2025 04 14 at 5.54.28 pm

ಜಾತಿ ಗಣತಿ ವರದಿಯು ಸಿದ್ದರಾಮಯ್ಯ ಅವರಿಂದ ಸಿದ್ದರಾಮಯ್ಯ ಅವರಿಗಾಗಿ ಸಿದ್ದರಾಮಯ್ಯನವರೇ ಮಾಡಿಕೊಂಡ ವರದಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ಸೋರಿಕೆ ಆಗಿರುವ ಈ ವರದಿಯಲ್ಲಿ ಇವೆ ಎನ್ನಲಾದ ಅಂಕಿ ಅಂಶಗಳನ್ನು ಒಮ್ಮೆ ನೋಡಿದರೆ ಈ ವರದಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಕ್ಷೇಮಕ್ಕಾಗಿ ತಯಾರು ಮಾಡಿಸಿಕೊಂಡಿರುವ ವರದಿ ಎಂದು ವಾಗ್ದಾಳಿ ನಡೆಸಿದರು.

RelatedPosts

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆ.19ರವರೆಗೆ 220ನೇ ಫಲಪುಷ್ಪ ಪ್ರದರ್ಶನ

ಇಂದಿನ ಹವಾಮಾನ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

ADVERTISEMENT
ADVERTISEMENT

ನಮ್ಮ ರಾಜ್ಯದಲ್ಲಿ ಏಳು ಕೋಟಿ ಕನ್ನಡಿಗರು ಇದ್ದಾರೆ. ಸಮೀಕ್ಷೆ ನಡೆಸಿದವರು ಎಷ್ಟು ಮನೆಗಳಿಗೆ ಹೋಗಿದ್ದಾರೆ ಎಂಬ ದಾಖಲೆಗಳು ಇರಬೇಕು. ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು ಆಗಿರುವ ನಮ್ಮ ತಂದೆಯ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ಅದೇ ರೀತಿ ನಮ್ಮ ಅಜ್ಜ, ಈ ದೇಶದ ಮಾಜಿ ಪ್ರಧಾನಿಗಳು. ಅವರ ಮನೆಗೂ ಯಾರೂ ಭೇಟಿ ಕೊಟ್ಟು ಸಮೀಕ್ಷೆ ಮಾಡಿಲ್ಲ. ಇಂಥ ಅಸಂಖ್ಯಾತ ಉದಾಹರಣೆಗಳನ್ನು ಕೊಡಬಲ್ಲೆ. ನನಗೆ ಗಣತಿ ನಡೆದಿರುವ ಬಗ್ಗೆಯೇ ಅನುಮಾನವಿದೆ. ಗಣತಿ ವೈಜ್ಞಾನಿಕವಾಗಿ, ಪ್ರತಿಯೊಂದು ಕುಟುಂಬದ ಮನೆ ಬಾಗಿಲಿಗೆ ಹೋಗಿ ಮಾಡಬೇಕಿತ್ತು. ಆ ರೀತಿ ಆಗಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ಜಾತಿ ಗಣತಿ ನೆಪದಲ್ಲಿ ಸಿದ್ದರಾಮಯ್ಯ ಟೆಸ್ಟ್ ರನ್ ಮಾಡ್ತಿದ್ದಾರೆ!

ಜಾತಿ ಗಣತಿ ವರದಿಯವು ಎನ್ನಲಾದ ಕೆಲ ಅಂಕಿ-ಅಂಶ ಸೋರಿಕೆಯಾಗಿದೆ. ಎಲ್ಲಾ ಪತ್ರಿಕೆ, ಸುದ್ದಿವಾಹಿನಿಗಳು ಆ ಅಂಕಿ ಅಂಶಗಳು ಬಿತ್ತರವಾಗಿತ್ತಿವೆ. ಈ ಅಂಕಿ ಅಂಶಗಳನ್ನು ಹೊರ ಹಾಕಿರುವವರು ಅಥವಾ ಸೋರಿಕೆ ಮಾಡಿದವರು ಯಾರು? ವರದಿ ಅಧಿಕೃತವಾಗಿ ಇನ್ನೂ ಬಹಿರಂಗ ಆಗಿಲ್ಲ. ಅಂಕಿ ಅಂಶಗಳು ಎಲ್ಲಾ ಕಡೆ ತೇಲಾಡುತ್ತಿವೆ. ಆದರೆ, ಇದು ಅನಧಿಕೃತ ಮಾಹಿತಿ. ಊಹಾಪೋಹದ ಅಂಕಿ ಅಂಶಗಳು. ಇದು ಸರ್ಕಾರದ ಕಡೆಯಿಂದಲೇ ಸೋರಿಕೆ ಆಗಿರುವ ಅನಧಿಕೃತ ಅಂಕಿ ಅಂಶಗಳು ಎನ್ನುವುದು ನನ್ನ ಅಭಿಪ್ರಾಯ. ಸಾರ್ವಜನಿಕ ವಲಯದಲ್ಲಿ ಯಾವ ರೀತಿ ಚರ್ಚೆ ಬರಬಹುದೆಂದು ನೋಡೋಣ ಎಂದು ಸಿದ್ದರಾಮಯ್ಯ ಅವರು ಟೆಸ್ಟ್ ರನ್ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಗಣತಿಗೆ ₹150 ಕೋಟಿ ಖರ್ಚಾಗಿದೆ ಸರಿ, ತನಿಖೆ ನಡೆಸಿ:

ಕಾಂತರಾಜು ಆಯೋಗದ ವರದಿಗೆ ₹150 ಕೋಟಿ ಖರ್ಚು ಮಾಡಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಆಯೋಗ ಯಾರ ಮನೆಗೂ ಹೋಗಿ ಸಮೀಕ್ಷೆ ಮಾಡಿಲ್ಲ ಎಂದು ಜನರೇ ಹೇಳುತ್ತಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಸೃಷ್ಟಿಯಾದ ವರದಿ ಇದು. ಹಾಗಾದರೆ, ಇಷ್ಟು ಮೊತ್ತವನ್ನು ಎಲ್ಲಿ ಖರ್ಚು ಮಾಡಿದ್ದಾರೆ. ಯಾರ ಮನೆಗೆ ಹೋಗಿದ್ದಾರೆ? ಯಾಕೆ ಇಷ್ಟು ಹಣ ಖರ್ಚು ಮಾಡಿದ್ದಾರೆ? ಲೆಕ್ಕ ಬೇಕಲ್ಲವೇ? ಇದರ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಜನರ ಕಲ್ಯಾಣಕ್ಕಾಗಿ ಜಾತಿ ಗಣತಿ ನಡೆಯಬೇಕು

ಜಾತಿಗಣತಿ ಆಗಬೇಕಿರೋದು ಆರ್ಥಿಕವಾಗಿ, ಶೈಕ್ಷಣಿಕ, ಸಮಾನತೆ ಜಾತಿಗಣತಿ ಆಗಬೇಕಿತ್ತು. ಅದರೆ ಜಾತಿಗಣತಿ ಒಂದು ದಶಕದ ಹಿಂದೆಯೇ ಕಾಂತರಾಜು ಸಮಿತಿಯನ್ನ ರಚನೆ ಮಾಡಿ ಅವರ ಮೂಲಕ ಸರ್ವೇ ಮಾಡಲು ತೆಗೆದುಕೊಂಡು ತೀರ್ಮಾನ ಇದು ಎಂದು ನಿಖಿಲ್ ಅವರು ತಿಳಿಸಿದರು.

ಜಾತಿ ಗಣತಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಕೆಲ ಸಚಿವರು ಅಸಮಾಧಾನ ಹೊರ ಹಾಕಿದ್ದಾರೆ. ಹಾಗಾಗಿ ಎಲ್ಲಿಯವರೆಗೆ ವರದಿ ಹೊರಗೆ ಬಂದಿಲ್ಲ. ಅಲ್ಲಿಯವರೆಗೆ ನಾವು ಚರ್ಚೆ ಮಾಡೋಕೆ ಆಗಲ್ಲ. ಒಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ರಾಜಕೀಯ ಅಸ್ತಿತ್ವಕ್ಕಾಗಿ ಜಾತಿಗಣತಿ ಮಂಡಿಸುವುದಕ್ಕೆ ಮುಂದಾಗಿದ್ದಾರಾ ಎಂಬ ಅನುಮಾನಗಳು ಚರ್ಚೆ ನಡೆಯುತ್ತಿದೆ ಎಂದರು.

ಒಂದು ಸಮುದಾಯ ಮೆಚ್ಚಿಸುವುದಕ್ಕೆ ಗಣತಿ

ಒಂದು ಸಮುದಾಯ ಮೆಚ್ಚಿಸುವುದಕ್ಕೆ ಮತ್ತು ತಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕೆ ಜಾತಿ ಗಣತಿ ಮಂಡಿಸುತ್ತಿದ್ದಾರೆ. ಒಂದು ಸಲ ಅಂಕಿ ಅಂಶಗಳ ಹೊರ ಹಾಕಲಿ. ಜಾತಿ ಗಣತಿ ಮಾಡಿರುವುದರಲ್ಲಿ ಸ್ಪಷ್ಟತೆ, ಪಾರದರ್ಶಕ ಇಲ್ಲದಿದ್ದರೆ. ನಾವು ಮರುಪರಿಶೀಲನೆಗೆ ಒತ್ತಡ ಹಾಕ್ತೀವಿ. ಪಾರದರ್ಶಕ ಇದೆ, ವೈಜ್ಞಾನಿಕವಾಗಿ ಇದೆ ಸಾರ್ವಜನಿಕ ವಲಯದಲ್ಲಿ ಇಡಲಿ ಎಂದು ಆಗ್ರಹಿಸಿದರು.

ಸರ್ಕಾರ ಅಂಕಿ ಅಂಶಗಳ ಬಿಡುಗಡೆ ಮಾಡಿ ಟೆಸ್ಟ್ ರನ್ ಮಾಡ್ತಾ ಇರಬಹುದು. ಇದು ಅನಧಿಕೃತ ಮಾಹಿತಿನೇ ಎಲ್ಲರಿಗೂ ಆತಂಕ ಇದೆ. ಜೆಡಿಎಸ್ ಅಲ್ಲ, ಎಲ್ಲರಿಗೂ ಆತಂಕ ಇದೆ, ಅನುಮಾನ ಇದೆ ಹಲವಾರು ಸಮುದಾಯಗಳಲ್ಲಿ ಹಾಗೂ ಸ್ವಾಮೀಜಿಗಳಲ್ಲಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಹುಬ್ಬಳ್ಳಿ ಪ್ರಕರಣ ತಲೆ ತಗ್ಗಿಸುವ ಘಟನೆ ಎನ್ ಕೌಂಟರ್ ಮಾಡಿದ್ದು ಸರಿ ಎಂದ ನಿಖಿಲ್.ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪಾತಕಿಯನ್ನು ಎನ್ ಕೌಂಟರ್ ಮಾಡಿದ್ದು ಸರಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಈ ಘಟನೆ ಅತ್ಯಂತ ಹೇಯ. ಮನುಕುಲವೇ ತಲೆ ತಗ್ಗಿಸುವ ಇಂಥ ಘಟನೆಗಳು ಪದೇ ಪದೆ ನಡೆಯುತ್ತಿವೆ. ಹುಬ್ಬಳ್ಳಿ ಪ್ರಕರಣದಲ್ಲಿ ಶೂಟ್ ಔಟ್ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಎರಡು ವರ್ಷಗಳಿಂದ ಅನೇಕ ಘಟನೆಗಳು ನಡೆಯುತ್ತಿವೆ. ಇಂತಹ ಪ್ರಕರಣಗಳು ನಡೆಯದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕಳೆದ ಎರಡು ವರ್ಷದ ಕಾಂಗ್ರೆಸ್ ಸರ್ಕಾರದಲ್ಲಿ ಅರಾಜಕತೆ ಮಿತಿಮೀರಿದೆ. ಮಹಿಳೆಯರು, ಮಕ್ಕಳು, ಜನಸಾಮಾನ್ಯರ ರಕ್ಷಣೆ, ಸುರಕ್ಷತೆ ಬಗ್ಗೆ ಕಾಳಜಿ ಇಲ್ಲವಾಗಿದೆ. ರಾಜ್ಯದಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಕೊಲೆ, ದರೋಡೆ, ಹಲ್ಲೆಯಂತಹ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರಿಗೆ ಅಸುರಕ್ಷತೆಯ ಭಯ ಕಾಡುತ್ತಿದೆ ಎಂದು ಕಿಡಿಕಾರಿದರು.

ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಜವರಾಯಿ ಗೌಡ, ಮಾಜಿ ಶಾಸಕ ಡಾ. ಕೆ.ಅನ್ನದಾನಿ, ಮಾಜಿ ಎಂಎಲ್ಸಿ ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ರಶ್ಮಿ ರಾಮೇಗೌಡ ಮುಂತಾದವರು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (24)

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

by ದಿಶಾ ಕೆ. ಎಸ್.
August 6, 2026 - 9:56 am
0

ಬಲಿಷ್ಠ (22)

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

by ದಿಶಾ ಕೆ. ಎಸ್.
August 6, 2026 - 8:27 am
0

ಬಲಿಷ್ಠ (21)

ಚಿನ್ನದ ದರದಲ್ಲಿ ಅಲ್ಪ ಏರಿಕೆ: 10 ಗ್ರಾಂಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

by ದಿಶಾ ಕೆ. ಎಸ್.
August 6, 2026 - 8:10 am
0

9

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆ.19ರವರೆಗೆ 220ನೇ ಫಲಪುಷ್ಪ ಪ್ರದರ್ಶನ

by ದಿಶಾ ಕೆ. ಎಸ್.
August 6, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version