• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಾಮರಾಜನಗರಕ್ಕೆ ಅಂಟಿದ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ಸರ್ಕಾರ ಬದ್ಧ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 24, 2025 - 6:30 pm
in Flash News, ಕರ್ನಾಟಕ, ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
Untitled design 2025 04 24t182927.357

ಚಾಮರಾಜನಗರ, ಏ.24: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ತಮ್ಮ ಇಲಾಖೆ ವತಿಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

RelatedPosts

ipl 2026; ಡೆಲ್ಲಿ ಪಂದ್ಯಕ್ಕೂ ಸಾಲ್ಟ್ ಅಲಭ್ಯ: ದಿನೇಶ್‌ ಕಾರ್ತಿಕ್‌ ಸ್ಪಷ್ಟನೆ

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಂಧಾನಕ್ಕೆ ಸಿದ್ಧ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ

KL ರಾಹುಲ್ ಅಬ್ಬರದ ಬ್ಯಾಟಿಂಗ್‌ಗೆ ಆತಿಯಾ ಶೆಟ್ಟಿ ಫಿದಾ: ‘ಹುಚ್ಚುತನದ ಅದ್ಭುತ ಪ್ರದರ್ಶನ’ ಎಂದ ಪತ್ನಿ

ಹಾರ್ಮುಜ್ ಜಲಸಂಧಿ ಬಂದ್: ರಸಗೊಬ್ಬರ ಕೊರತೆಯಿಂದ ಹಸಿವಿನ ಬಿಕ್ಕಟ್ಟು ವಿಶ್ವಸಂಸ್ಥೆ ಎಚ್ಚರಿಕೆ!

ADVERTISEMENT
ADVERTISEMENT

“ಸಾಲಿಗ್ರಾಮ ಮತ್ತು ತಗಡೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ 82 ಕೋಟಿ ರೂ. ನೀಡಲಾಗಿದೆ. ಕೊಳ್ಳೆಗಾಲದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 85 ಕೋಟಿ ನೀಡಲಾಗಿದೆ. ಹನೂರು ತಾಲೂಕಿನಲ್ಲಿ ಪ್ರಜಾಸೌಧಕ್ಕೆ 8.60 ಕೋಟಿ ರೂ. ನೀಡಲಾಗಿದೆ. ಬುಡಕಟ್ಟು ಜನರಿಗೆ ವಿದ್ಯುತ್ ಒದಗಿಸಿಕೊಡಲು 50 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಆಮೆಕೆರೆ ಅರಣ್ಯ ಪ್ರದೇಶದಲ್ಲಿದ್ದ ಸುಮಾರು 100 ರೈತರಿಗೆ 9.75 ಕೋಟಿ ನೀಡಿ ಅವರನ್ನು ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ. ಮೈಸೂರಿನಲ್ಲಿ ಪಾಲಿಟೆಕ್ನಿಕ್ ಕಟ್ಟಡ ನಿರ್ಮಾಣಕ್ಕೆ 70 ಕೋಟಿ ನೀಡಲಾಗಿದೆ. ಮಂಡ್ಯದ ಮಳವಳ್ಳಿಯಲ್ಲಿ ಕುಂತೂರು ಹಾಗೂ ಇತರೆ ಕೆರೆಗಳನ್ನು ತುಂಬಿಸಲು ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 28 ಕೋಟಿ ನೀಡಲಾಗಿದೆ” ಎಂದು ಹೇಳಿದರು.

“ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಹಾಗೂ ಕಡೂರು ತಾಲೂಕಿನ 25 ಕೆರೆಗಳನ್ನು ತುಂಬಿಸಲು 98 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಪಾಂಡವಪುರ ತಾಲೂಕಿನಲ್ಲಿ ಬಳಕಟ್ಟ ಏತ ನೀರಾವರಿ ಯೋಜನೆಗೆ 29 ಕೋಟಿ ನೀಡಲಾಗಿದೆ. ವರುಣ ಕ್ಷೇತ್ರದಲ್ಲಿ 15 ಕೋಟಿ ವೆಚ್ಚದಲ್ಲಿ ಅಂತರ್ಜಲ ಮರುಪೂರಣ ಯೋಜನೆಗಾಗಿ ಚೆಕ್ ಡ್ಯಾಂ ಮಾಡಲು ಯೋಜನೆ ರೂಪಿಸಲಾಗಿದೆ. ವರುಣಾ ಕ್ಷೇತ್ರದ ಕೆಲವು ಗ್ರಾಮಗಳ ಏತ ನೀರಾವರಿಗೆ 41 ಕೋಟಿ ವೆಚ್ಚಕ್ಕೆ ಆಡಳಿತ ಅನುಮೋದನೆ ನೀಡಲಾಗಿದೆ. ಹೆಗ್ಗಡದೇವನ ಕೋಟೆಯಲ್ಲಿ 25 ಕೋಟಿ ಮೊತ್ತದ ಪಿಕ್ ಅಪ್ ಕಾಲುವೆ, ಪಿರಿಯಾಪಟ್ಟಣ ತಾಲೂಕಿನಲ್ಲಿ 12 ಕೋಟಿ ಮೊತ್ತದ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ” ಎಂದರು.

“ಕೆ.ಆರ್ ನಗರ ಹಾಗೂ ಸಾಲಿಗ್ರಾಮದಲ್ಲಿ ಕೆರೆಗಳಿಗೆ ನೀರು ತುಂಬಿಸಲು ಏತ ನೀರಾವರಿಗೆ 50 ಕೋಟಿ ನೀಡಲಾಗಿದೆ. ಶ್ರೀರಂಗಪಟ್ಟಣದ ಅರಕೆರೆ ಗ್ರಾಮದ ಬಳಿ ಕಾವೇರಿ ನದಿಯಿಂದ 12 ಕೆರೆ ತುಂಬಿಸಲು 35 ಕೋಟಿ ಅನುದಾನ ನೀಡಲಾಗಿದೆ. ಮದ್ದೂರಿನಲ್ಲಿ ಶಿಂಷಾ ನದಿಗೆ ಅಡ್ಡಲಾಗಿ ಸೇತುವೆ ಹಾಗೂ ಬ್ಯಾರೇಜ್ ಡ್ಯಾಂ ನಿರ್ಮಾಣಕ್ಕೆ 30 ಕೋಟಿ, ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಕೃಷಿ ಸೇತುವೆ ಹಾಗೂ ಚೆಕ್ ಡ್ಯಾಂ ನಿರ್ಮಾಣಕ್ಕೆ 25 ಕೋಟಿ ಮಂಜೂರು ಮಾಡಲಾಗಿದೆ” ಎಂದು ಹೇಳಿದರು.

“ಚಾಮರಾಜನಗರ ಹೊಂಗನೂರು ಕೆರೆಗೆ 14 ಕೋಟಿ, ಅಮಚವಾಡಿ ಕೆರೆಗೆ 11 ಕೋಟಿ, ಮಾಲಂಗಿ ಗ್ರಾಮದ ಬಳಿ ಕಾವೇರಿ ಮೂರನೇ ಹಂತದ ಕುಡಿಯುವ ನೀರಿನ ಯೋಜನೆಗೆ 150 ಕೋಟಿ, ದಳವಾಯಿ ಕೆರೆಯಲ್ಲಿ 3 ಎಂಎಲ್ ಡಿ ಕುಡಿಯುವ ನೀರಿನ ಘಟಕಕ್ಕೆ 18 ಕೋಟಿ ನೀಡಲಾಗಿದೆ. ಬೆಂಗಳೂರಿನಂತೆ ಮೈಸೂರು ನಗರದಲ್ಲಿ 391 ಕೋಟಿ ಮೊತ್ತದ ಯೋಜನೆಯಲ್ಲಿ ರಸ್ತೆಗಳ ವೈಟ್ ಟ್ಯಾಪಿಂಗ್ ಮಾಡಲು ತೀರ್ಮಾನ ಮಾಡಲಾಗಿದೆ. ಕೊಳ್ಳೆಗಾಲದಲ್ಲಿ ಮಡಿಗುಂಡಿ ಬಳಿ ಸುವರ್ಣಾವತಿ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಾಣಕ್ಕೆ 15 ಕೋಟಿ ಮಾಡಲಾಗಿದೆ. ರೇಷ್ಮೇ ಇಲಾಖೆಯಿಂದ ಪರಿಶಿಷ್ಟರಿಗೆ ಸಹಾಯ ಮಾಡಲು 15 ಕೋಟಿ ನೀಡಲಾಗಿದೆ” ಎಂದರು.

ಕಾವೇರಿ ಆರತಿಗೆ 92 ಕೋಟಿ ಮೀಸಲು

“ಹಾರಂಗಿ ಜಲಾಶಯಕ್ಕೆ ಬರುವ ಪಿರಿಯಾಪಟ್ಟಣ ಏತ ನೀರಾವರಿ ಕಾಲುವೆಗೆ 198 ಕೋಟಿ ಮೊತ್ತ ಮಂಜೂರು ಮಾಡಲಾಗಿದೆ. ಚಿಕ್ಕನಂದಿ ಏತ ನೀರಾವರಿ ಯೋಜನೆಗೆ 103 ಕೋಟಿ ನೀಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಚಾಮರಾಜನಗರ ಬಲದಂಡೆ ನಾಲೆಗೆ 15 ಕೋಟಿ ನೀಡಲಾಗಿದೆ. ರಾಮಸಮುದ್ರ ನಾಲೆಗೆ 43 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಬಿದರಹಳ್ಳಿ ಪಿಕ್ ಅಪ್ ನಾಲೆ 42 ಕೋಟಿ, ಹಾರೋಹಳ್ಳಿ ಕೆಳಮಟ್ಟದ ನಾಲೆ ಅಭಿವೃದ್ಧಿಗೆ 42 ಕೋಟಿ, ಕಬಿನಿ ಬಲದಂಡೆ ನಾಲೆ ಯೋಜನೆಗೆ 24 ಕೋಟಿ, ಸುವರ್ಣಾವತಿ ಜಲಾಶಯಕ್ಕೆ 24 ಕೋಟಿ, ಸುವರ್ಣಾವತಿ ಭಾಗದ ಕೆರೆ ತುಂಬಿಸಲು 70 ಕೋಟಿ, ಗುಂಡಕಲ್ ವ್ಯಾಪ್ತಿಯ ಸರಣಿ ಕೆರೆಗಳಿಗೆ 50 ಕೋಟಿ, ಟಿ.ನರಸಿಪುರ ಹಾಗೂ ಮಳವಳ್ಳಿ ತಾಲೂಕಿಗೆ ಬರುವ ನಾಲೆಗಳಿಗೆ 91 ಕೋಟಿ, ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ಮಾಡಲು 92 ಕೋಟಿ ಮೀಸಲಿಡಲು ಅನುಮೋದನೆ ನೀಡಲಾಗಿದೆ” ಎಂದು ತಿಳಿಸಿದರು.

“ಚಾಮರಾಜನಗರ ಆಕ್ಸಿಜನ್ ದುರಂತ ಕುಟುಂಬ ಸದಸ್ಯರಿಗೆ ಇನ್ನು ಕೆಲಸ ಸಿಕ್ಕಿಲ್ಲ ಎಂದು ಕೇಳಿದಾಗ, “ಈ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ನಾವು ಮಾತು ಕೊಟ್ಟಿದ್ದೆವು. ಕೆಲವರಿಗೆ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಕೆಲಸ ನೀಡಲಾಗಿದೆ. ಇನ್ನು ಕೆಲವರಿಗೆ ನೀಡಬೇಕಾಗಿದೆ. ಇದಕ್ಕೆ ಶಾಶ್ವತ ಪರಿಹಾರ ನೀಡಬೇಕಿದ್ದು, ಪ್ರತಿಯೊಬ್ಬರ ವಿದ್ಯಾರ್ಹತೆ ಹಾಗೂ ಇತರೆ ವಿಚಾರಗಳ ಪರಿಶೀಲನೆ ಮಾಡುತ್ತಿದ್ದೇವೆ. ನಮಗೆ ಇದು ಆದ್ಯತೆಯ ವಿಚಾರ. ಇಂದು ನ್ಯಾ.ಕುನ್ಹಾ ಅವರ ಎರಡನೇ ವರದಿಯನ್ನು ಸ್ವೀಕರಿಸಲಾಗಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಇದಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಈ ವಿಚಾರವೂ ಅದರೊಳಗೆ ಬರುತ್ತದೆ. ವೈದ್ಯಕೀಯ ಶಿಕ್ಷಣ ಸಚಿವರಿಗೆ ಹೇಳಿ ಇಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿನಲ್ಲಿ ಸ್ಥಳೀಯ ಮೆಡಿಕಲ್ ಕಾಲೇಜುಗಳಲ್ಲಿ ಹೇಗೆ ಉದ್ಯೋಗ ನೀಡಬಹುದು ಎಂದು ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಉತ್ತರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 26T191734.962

ipl 2026; ಡೆಲ್ಲಿ ಪಂದ್ಯಕ್ಕೂ ಸಾಲ್ಟ್ ಅಲಭ್ಯ: ದಿನೇಶ್‌ ಕಾರ್ತಿಕ್‌ ಸ್ಪಷ್ಟನೆ

by ಶಾಲಿನಿ ಕೆ. ಡಿ
April 26, 2026 - 10:13 pm
0

Untitled design 2026 04 26T190654.691

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಂಧಾನಕ್ಕೆ ಸಿದ್ಧ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ

by ಶಾಲಿನಿ ಕೆ. ಡಿ
April 26, 2026 - 9:10 pm
0

Untitled design 2026 04 26T185615.185

KL ರಾಹುಲ್ ಅಬ್ಬರದ ಬ್ಯಾಟಿಂಗ್‌ಗೆ ಆತಿಯಾ ಶೆಟ್ಟಿ ಫಿದಾ: ‘ಹುಚ್ಚುತನದ ಅದ್ಭುತ ಪ್ರದರ್ಶನ’ ಎಂದ ಪತ್ನಿ

by ಶಾಲಿನಿ ಕೆ. ಡಿ
April 26, 2026 - 8:10 pm
0

Untitled design 2026 04 26T184523.658

ಹಾರ್ಮುಜ್ ಜಲಸಂಧಿ ಬಂದ್: ರಸಗೊಬ್ಬರ ಕೊರತೆಯಿಂದ ಹಸಿವಿನ ಬಿಕ್ಕಟ್ಟು ವಿಶ್ವಸಂಸ್ಥೆ ಎಚ್ಚರಿಕೆ!

by ಶಾಲಿನಿ ಕೆ. ಡಿ
April 26, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T191734.962
    ipl 2026; ಡೆಲ್ಲಿ ಪಂದ್ಯಕ್ಕೂ ಸಾಲ್ಟ್ ಅಲಭ್ಯ: ದಿನೇಶ್‌ ಕಾರ್ತಿಕ್‌ ಸ್ಪಷ್ಟನೆ
    April 26, 2026 | 0
  • Untitled design 2026 04 26T190654.691
    ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಂಧಾನಕ್ಕೆ ಸಿದ್ಧ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ
    April 26, 2026 | 0
  • Untitled design 2026 04 26T185615.185
    KL ರಾಹುಲ್ ಅಬ್ಬರದ ಬ್ಯಾಟಿಂಗ್‌ಗೆ ಆತಿಯಾ ಶೆಟ್ಟಿ ಫಿದಾ: ‘ಹುಚ್ಚುತನದ ಅದ್ಭುತ ಪ್ರದರ್ಶನ’ ಎಂದ ಪತ್ನಿ
    April 26, 2026 | 0
  • Untitled design 2026 04 26T184523.658
    ಹಾರ್ಮುಜ್ ಜಲಸಂಧಿ ಬಂದ್: ರಸಗೊಬ್ಬರ ಕೊರತೆಯಿಂದ ಹಸಿವಿನ ಬಿಕ್ಕಟ್ಟು ವಿಶ್ವಸಂಸ್ಥೆ ಎಚ್ಚರಿಕೆ!
    April 26, 2026 | 0
  • Untitled design 2026 04 26T183139.220
    IPL 2026: ಎಂಎಸ್‌ ಧೋನಿ, ಸುರೇಶ್ ರೈನಾ ದಾಖಲೆ ಮುರಿದ ಸಂಜು ಸ್ಯಾಮ್ಸನ್
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version