• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಾಮರಾಜನಗರ ಆಕ್ಸಿಜನ್ ದುರಂತ, ಬಿ.ಎ.ಪಾಟೀಲ್ ವರದಿ ತಿರಸ್ಕಾರ: ಡಿ.ಕೆ.ಶಿವಕುಮಾರ್!

ನೋಟಿಸ್‌‌ಗೆ ಉತ್ತರಿಸದ 29 ಜನ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ!

admin by admin
March 27, 2025 - 12:11 pm
in Flash News, ಕರ್ನಾಟಕ, ಚಾಮರಾಜನಗರ
0 0
0
Film (76)

“ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್‌ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಮಾಧ್ಯಮದವರನ್ನು ಉದ್ದೇಶಿಸಿ ವಿಧಾನಸೌಧದಲ್ಲಿ ಬುಧವಾರ ಮಾತನಾಡಿದರು.

RelatedPosts

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!

ADVERTISEMENT
ADVERTISEMENT

“ಚಾಮರಾಜನಗರ ದುರಂತ ನಡೆದ ವೇಳೆ ನಾನು ಹಾಗೂ ಸಿದ್ದರಾಮಯ್ಯ ಅವರು ಸ್ಥಳಕ್ಕೆ ತೆರಳಿ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಿದ್ದೆವು. ಮೃತರ ಕುಟುಂಬವರ್ಗದವರನ್ನು ಸಹ ಭೇಟಿ ಮಾಡಲಾಗಿತ್ತು. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಯಾರ್ಯಾರ ತಪ್ಪಿದೆ ಎಂದು ಹೇಳಿದ್ದರು” ಎಂದರು.

ವರದಿಯಲ್ಲಿ ಕುನ್ಹಾ ಅವರು ಹೆಸರಿಸಿರುವ ಹಿಂದಿನ ಆರೋಗ್ಯ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ಎಂದು ಕೇಳಿದಾಗ, “ಕೋವಿಡ್ ಅಕ್ರಮಗಳ ಬಗ್ಗೆ ಮೈಕೆಲ್ ಕುನ್ಹಾ ಅವರು ಅತ್ಯಂತ ಸಮಗ್ರವಾಗಿ ವರದಿಯನ್ನು ನೀಡಿದ್ದಾರೆ. ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕಾಗುತ್ತದೆ. ಇದರಲ್ಲಿ ಕಾನೂನು ಸಂಬಂಧಿತ, ಕ್ರಿಮಿನಲ್ ಸಂಬಂಧಿತ ವಿಚಾರಗಳನ್ನು ಗಮನಿಸಲು ಸಹಾಯ ತೆಗೆದುಕೊಳ್ಳಲಾಗುತ್ತಿದೆ” ಎಂದರು.

“ಸುಮಾರು 29 ಜನ ಅಧಿಕಾರಿಗಳು ಸಮಿತಿ ನೀಡಿರುವ ನೋಟಿಸ್ ಗೆ ಉತ್ತರ ನೀಡಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಕುನ್ಹಾ ಅವರು ವರದಿಯಲ್ಲಿ ಅನೇಕ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದರ ಬಗ್ಗೆ ನಮಗೂ ಅರಿವಿದೆ. ಸೂಕ್ತಕಾಲದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

15 ದಿನಗಳಿಗೊಮ್ಮೆ ಸಭೆ, ಸಮಿತಿಗೆ ಹಿರಿಯ ಅಧಿಕಾರಿಗಳ ನೇಮಕ

“ಮುಂದಿನ ದಿನಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಉಪಸಮಿತಿ ಸಭೆ ನಡೆಸಬೇಕು ಎನ್ನುವ ತೀರ್ಮಾನಕ್ಕೆ ಬರಲಾಗಿದೆ. ಅಧಿಕಾರಿಗಳ ಕೊರತೆ ಇರುವ ಕಾರಣಕ್ಕೆ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಸಮಿತಿಗೆ ನೇಮಕ ಮಾಡಿ ಅವರಿಗೂ ಕೆಲವು ಜವಾಬ್ದಾರಿಗಳನ್ನು ನೀಡಬೇಕು ಎಂದು ತೀರ್ಮಾನ ಮಾಡಲಾಗಿದೆ” ಎಂದರು.

“ಆರೋಗ್ಯ ಇಲಾಖೆ ನಡೆಸುವುದು ಪ್ರತಿ ದಿನವೂ ಸವಾಲಿನಿಂದ ಕೂಡಿರುವ ಕೆಲಸ. ಇಲಾಖೆ ಅಡಿಯಲ್ಲಿ 70 ಮೆಡಿಕಲ್ ಕಾಲೇಜುಗಳು ಬರುತ್ತವೆ. ದಿನವು ಹೊಸ ಸವಾಲುಗಳು ಎದುರಾಗುತ್ತವೆ‌. ಆದ ಕಾರಣ ಒಂದಷ್ಟು ಜವಾಬ್ದಾರಿಗಳನ್ನು ಹಿರಿಯ ಅಧಿಕಾರಿಗಳಿಗೆ ನೀಡಲಾಗುವುದು” ಎಂದು ಹೇಳಿದರು.

ಸಂಪುಟ ಉಪ ಸಮಿತಿಯಿಂದ ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ

ಕೋವಿಡ್ ಸಮಯದಲ್ಲಿ ಖರೀದಿ ಮಾಡಿದ ಅನೇಕ ವೈದ್ಯಕೀಯ ಉಪಕರಣಗಳು ಕೆಲಸ ಮಾಡುತ್ತಿಲ್ಲ. ಅಲ್ಲದೇ ದಿನಾಂಕ ಮುಗಿದಿರುವ ಅನೇಕ ಔಷಧಿಗಳ ಬಗ್ಗೆ ಕೇಳಿದಾಗ, “ನ್ಯಾ‌.ಕುನ್ಹಾ ಅವರ ವರದಿಯಲ್ಲಿ ಅನೇಕ ವಿಚಾರಗಳಿವೆ. ಆದರೂ ಸಮಿತಿಯವರು ಇದೆಲ್ಲವನ್ನು ನೇರವಾಗಿ ನೋಡಿ ಪ್ರಮಾಣಿಸಬೇಕು, ನಮಗೂ ಇದು ಅರ್ಥವಾಗಬೇಕು. ಇಡೀ ಸಮಿತಿಯ ಸದಸ್ಯರು ಔಷಧಿಗಳು, ಉಪಕರಣಗಳನ್ನು ವೀಕ್ಷಣೆ ಮಾಡುತ್ತಾರೆ. ಅನೇಕ ಕಡೆ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿಲ್ಲ ಎಂದು ಹೇಳಲಾಗಿದೆ. ಹಾಗಾದರೆ ಅದು ಏನಾಗಿದೆ ಎಂದು ಪರಿಶೀಲನೆ ಮಾಡುತ್ತೇವೆ. ಒಂದಷ್ಟನ್ನು ಉಗ್ರಾಣಗಳಿಗೆ, ಜಿಲ್ಲಾ ಕೇಂದ್ರಗಳಿಗೆ ಕಳಿಸಲಾಗಿದೆ ಎನ್ನುವ ಮಾಹಿತಿಯಿದೆ. ಅದಕ್ಕೆ ಸಮಿತಿಯವರು ಜಿಲ್ಲಾ ಕೇಂದ್ರಗಳ ಆಸ್ಪತ್ರೆಗಳಲ್ಲಿ, ಬೆಂಗಳೂರಿನಲ್ಲೂ ಪರಿಶೀಲನೆ ನಡೆಸುತ್ತದೆ” ಎಂದರು.

ನಾನು ಕಾಂಗ್ರೆಸ್ ಪಕ್ಷದ ವಕ್ತಾರ

ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಕಾಂಗ್ರೆಸ್ ಪಕ್ಷದ ವಕ್ತಾರ. ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ ಅವರ ಬಳಿ ಈ ಬಗ್ಗೆ ಚರ್ಚೆ ಮಾಡಿದರೆ ಒಳ್ಳೆಯದು. ದೇಶ, ರಾಜ್ಯ, ವೈಯಕ್ತಿಕ ವಿಚಾರಗಳಿಗೆ ಭೇಟಿಯಾಗಿದ್ದರೋ ತಿಳಿದಿಲ್ಲ. ಇದರ ಬಗ್ಗೆ ಅವರನ್ನೇ ಕೇಳಿದರೆ ಬಹಳ ಉತ್ತಮ” ಎಂದರು.

ಯತ್ನಾಳ್ ಉಚ್ಚಾಟನೆ ಬಿಜೆಪಿ ಆಂತರಿಕ ವಿಚಾರ

ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ಬಗ್ಗೆ ಕೇಳಿದಾಗ, “ಬಿಜೆಪಿಯ ಆಂತರಿಕ ವಿಚಾರಗಳನ್ನು ನಾನು ಏಕೆ ಮಾತನಾಡಲಿ? ಅವರ ಪಕ್ಷದ ಮುತ್ತು ರತ್ನಗಳನ್ನು ಇಟ್ಟುಕೊಳ್ಳಲಿ ಅಥವಾ ಆಚೆಯಾದರೂ ಬಿಸಾಡಲಿ” ಎಂದು‌ ಕುಟುಕಿದರು.

ಯತ್ನಾಳ್ ಅವರು ನಮ್ಮಲ್ಲಿ ಇದ್ದಿದ್ದರೆ ಇಷ್ಟೊತ್ತಿಗಾಗಲೇ ನಾನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, “ಒಂದಷ್ಟು ಜನ ಶೋಭೆಗೆ ಎಂದು ಓಲೆ, ಮೂಗುತಿ, ಹಣೆಗೆ ಕುಂಕುಮ ಇಟ್ಟುಕೊಳ್ಳುತ್ತಾರೆ. ಅದೇ ರೀತಿ ಒಂದಷ್ಟು ಜನ ಪಕ್ಷದಲ್ಲಿ ಇದ್ದರೆ ಒಳ್ಳೆಯದು” ಎಂದು ಮಾರ್ಮಿಕವಾಗಿ ನುಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version