• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಕಲ ಸಿದ್ಧತೆ, ಹೈಟೆಕ್ ಭದ್ರತೆ: 4.5 ಕೋಟಿ ವೆಚ್ಚದಲ್ಲಿ ಚಿನ್ನಸ್ವಾಮಿ ಮೈದಾನಕ್ಕೆ ಎಐ ಕಣ್ಗಾವಲು

admin by admin
January 20, 2026 - 11:20 pm
in Flash News, ಕರ್ನಾಟಕ, ಕ್ರೀಡೆ
0 0
0
Untitled design 2026 01 20T231653.021

RelatedPosts

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ

ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

ADVERTISEMENT
ADVERTISEMENT

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ ಬೆನ್ನಲ್ಲೇ, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಕಳೆದ ಬಾರಿ ಸಂಭವಿಸಿದಕಾಲ್ತುಳಿತ ದುರಂತದಿಂದ ಎಚ್ಚೆತ್ತಿರುವ ಆಡಳಿತ ಮಂಡಳಿ, ಈ ಬಾರಿ ಸುರಕ್ಷತೆಗೆ ಮೊದಲ ಆದ್ಯತೆ ನೀಡಿದೆ.

ಸುರಕ್ಷತೆಗಾಗಿ ಕೈಗೊಂಡ ಪ್ರಮುಖ ಕ್ರಮಗಳು:
  • ವಿಶಾಲವಾದ ಪ್ರವೇಶ ದ್ವಾರ: ಈ ಹಿಂದೆ ಕಾಲ್ತುಳಿತ ನಡೆದಿದ್ದ ಗೇಟ್ ನಂ. 18 ಮತ್ತು 19ರ ಬಳಿಯ ಸಣ್ಣ ಗೋಡೆಗಳನ್ನು ಒಡೆದು ಹಾಕಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನಕ್ಕೆ ಯಾವುದೇ ಅಡ್ಡಿಯಾಗದಂತೆ ವಿಶಾಲವಾದ ಜಾಗ ಮತ್ತು ಬೃಹತ್ ಗೇಟ್‌ಗಳನ್ನು ನಿರ್ಮಿಸಲಾಗುತ್ತಿದೆ.

  • 350 AI ಕ್ಯಾಮೆರಾಗಳ ಕಣ್ಗಾವಲು: ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಪ್ರತಿಯೊಬ್ಬರ ಮೇಲೆ ನಿಗಾ ಇಡಲು ಸುಮಾರು 4.5 ಕೋಟಿ ರೂಪಾಯಿ ವೆಚ್ಚದಲ್ಲಿ 350 ಅತ್ಯಾಧುನಿಕ ಎಐ (ಕೃತಕ ಬುದ್ಧಿಮತ್ತೆ) ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ.

  • ಖಾಸಗಿ ಭದ್ರತಾ ಪಡೆ: ಕೇವಲ ಪೊಲೀಸರ ಮೇಲೆ ಅವಲಂಬಿತವಾಗದೆ, ಆರ್‌ಸಿಬಿ ಫ್ರಾಂಚೈಸಿಯೇ ತನ್ನದೇ ಆದ ವಿಶೇಷ ಭದ್ರತಾ ಸಿಬ್ಬಂದಿಯನ್ನು ಜನದಟ್ಟಣೆ ನಿರ್ವಹಣೆಗಾಗಿ ನಿಯೋಜಿಸುತ್ತಿದೆ.

ಷರತ್ತುಬದ್ಧ ಅನುಮತಿ:

ಕಾಲ್ತುಳಿತ ದುರಂತದ ನಂತರ ಪಂದ್ಯಗಳ ಆಯೋಜನೆಗೆ ವಿಧಿಸಲಾಗಿದ್ದ ನಿಷೇಧವನ್ನು ಸರ್ಕಾರ ತೆರವುಗೊಳಿಸಿದೆ. ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯುವ ಸಾಧ್ಯತೆಗಳಿದ್ದು, ಕೆಎಸ್‌ಸಿಎ (KSCA) ಅಗ್ನಿಶಾಮಕ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗಳಿಗೆ ಸುರಕ್ಷತಾ ವರದಿಯನ್ನು ಸಲ್ಲಿಸಿದೆ.

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್ ? ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಕೆಎಸ್‌ಸಿಎಗೆ ಪೊಲೀಸ್ ಖಡಕ್ ಸೂಚನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳು ನಡೆಯುತ್ತವೆಯೇ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಗಬೇಕಿದೆ. ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳನ್ನು ಪುನರಾರಂಭಿಸುವ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಪದಾಧಿಕಾರಿಗಳು ಮತ್ತು ಬೆಂಗಳೂರು ನಗರ ಪೊಲೀಸರ ನಡುವೆ ಮಹತ್ವದ ಸಭೆ ನಡೆದಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮತ್ತು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕ್ರೀಡಾಂಗಣದ ಭದ್ರತೆ ಮತ್ತು ಪ್ರೇಕ್ಷಕರ ಸುರಕ್ಷತೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯ ನಂತರ ಮಾತನಾಡಿದ ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ, ಗೃಹ ಸಚಿವರು ರಚಿಸಿರುವ ವಿಶೇಷ ಸಮಿತಿಯು ನೀಡಿರುವ ಮಾರ್ಗಸೂಚಿಗಳ ಅನ್ವಯ ಕ್ರೀಡಾಂಗಣದಲ್ಲಿ ಬದಲಾವಣೆಗಳನ್ನು ಮಾಡಬೇಕಿದೆ. ಎಲ್ಲಾ ಲೋಪದೋಷಗಳನ್ನು ಸರಿಪಡಿಸಿದ ನಂತರವಷ್ಟೇ ಗೃಹ ಸಚಿವರು ಮತ್ತು ಸಮಿತಿಯು ಪಂದ್ಯಗಳ ಆಯೋಜನೆಗೆ ಒಪ್ಪಿಗೆ ನೀಡುತ್ತಾರೆ ಎಂದು ತಿಳಿಸಿದ್ದಾರೆ.

ಕಳೆದ ಜೂನ್‌ನಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಈ ಭಿಕರ ಘಟನೆಯ ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಸ್ಟೇಡಿಯಂನಲ್ಲಿರುವ ಗೇಟ್‌ಗಳು ಕಿರಿದಾಗಿದ್ದು, ತುರ್ತು ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸುವುದು ಕಷ್ಟಕರವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮುಖ್ಯವಾಗಿ, ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಂತಹವರು ಮೈದಾನಕ್ಕೆ ಬರುವಾಗ ಹೊರಭಾಗದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸುತ್ತಾರೆ. ಗೇಟ್ ಅಗಲೀಕರಣ ಮತ್ತು ಜನದಟ್ಟಣೆ ನಿರ್ವಹಣೆಗೆ ಪೂರಕವಾದ ಮೂಲಸೌಕರ್ಯಗಳನ್ನು ವೃದ್ಧಿಸದ ಹೊರತು ಪಂದ್ಯಗಳಿಗೆ ಅನುಮತಿ ನೀಡುವುದು ಅಸಾಧ್ಯ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಮಹಿಳಾ ವಿಶ್ವಕಪ್ ಪಂದ್ಯಗಳ ಆಯೋಜನೆಯೂ ಸುರಕ್ಷತಾ ಕಾರಣಗಳಿಂದ ಕೈತಪ್ಪಿ ಹೋಗಿತ್ತು. ಹೀಗಾಗಿ, ಪ್ರೇಕ್ಷಕರಿಲ್ಲದೆಯೇ (Closed doors) ಪಂದ್ಯಗಳನ್ನು ಆಯೋಜಿಸಲು ವೆಂಕಟೇಶ್ ಪ್ರಸಾದ್ ಅವರು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದರು. ಆದರೆ, ಸದ್ಯಕ್ಕೆ ಪಂದ್ಯಗಳನ್ನು ನಗರದ ಹೊರವಲಯದ ಕ್ರೀಡಾಂಗಣಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಹಬ್ಬ ಮತ್ತೆ ಮರಳಬೇಕಾದರೆ ಕೆಎಸ್‌ಸಿಎ ಸಮಿತಿಯ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲೇಬೇಕಿದೆ ಎಂದು ಸಭೆ ಬಳಿಕ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕ್ರಿಕೆಟ್‌ ಅಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದು, ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಪಂದ್ಯ ನೋಡಲು ಕಾತುರರಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version