• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

77ನೇ ಗಣರಾಜ್ಯೋತ್ಸವ: ರಾಜ್ಯದ ಜನರಿಗೆ ವಿಶೇಷ ಸಂದೇಶ ರವಾನಿಸಿದ ಸಿಎಂ ಸಿದ್ದರಾಮಯ್ಯ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 26, 2026 - 10:15 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 26T120135.448

ಬೆಂಗಳೂರು: ದೇಶಾದ್ಯಂತ 77ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಭಾರತದ ಸಂವಿಧಾನ ಜಾರಿಗೆ ಬಂದು 76 ವರ್ಷಗಳು ಪೂರ್ಣಗೊಂಡಿದ್ದು, ಇಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ರಾಜ್ಯದ ಜನರಿಗೆ ಶುಭಕೋರಿದ್ದಾರೆ.

ಸಂವಿಧಾನದ ಮೂಲ ಆಶಯವೇ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ, ಅಭಿವ್ಯಕ್ತಿ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಖಾತರಿಪಡಿಸುವುದು. ಇದು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುವ ಗುರಿಯನ್ನು ಹೊಂದಿದೆ. ಕರ್ನಾಟಕದಲ್ಲಿ 800 ವರ್ಷಗಳ ಹಿಂದೆಯೇ ಪ್ರಜಾಪ್ರಭುತ್ವದ ಬೀಜಾಂಕುರವಿತ್ತು. ಬಸವಣ್ಣನವರ ನೇತೃತ್ವದ ಶರಣ ಚಳವಳಿ ಮತ್ತು ಕೂಡಲಸಂಗಮದ ಅನುಭವ ಮಂಟಪವು ಪ್ರಪಂಚಕ್ಕೆ ಮಾದರಿಯಾದ ಪ್ರಜಾಪ್ರಭುತ್ವ ವ್ಯವಸ್ಥೆಯಾಗಿತ್ತು. ಇಲ್ಲಿ ಸಮಾಜದ ಕೆಳಸ್ತರದವರೂ ಚರ್ಚೆಯಲ್ಲಿ ಸಮಾನ ಅವಕಾಶ ಪಡೆದಿದ್ದರು. ಇದು ಇಂದಿನ ಪ್ರಜಾಪ್ರಭುತ್ವದ ಅಡಿಗಲ್ಲು.

RelatedPosts

2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?

BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

ADVERTISEMENT
ADVERTISEMENT

ಸಾಂಪ್ರದಾಯಿಕ ಸಮಾಜದಲ್ಲಿ ಅಲಿಖಿತ ಸಂವಿಧಾನವೊಂದು ಇತ್ತು-ಜಾತಿ, ಲಿಂಗ ಆಧಾರದಲ್ಲಿ ಅಸಮಾನತೆಯನ್ನು ಒಪ್ಪಿಕೊಂಡಿದ್ದು. ಶೂದ್ರರು, ಮಹಿಳೆಯರು, ಅಸ್ಪೃಶ್ಯರು ಸಂಪತ್ತು, ಜ್ಞಾನ ಮತ್ತು ಘನತೆಯ ಹಕ್ಕಿನಿಂದ ವಂಚಿತರಾಗಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ಮನುಷ್ಯವಿರೋಧಿ ವ್ಯವಸ್ಥೆಯನ್ನು ತಿರಸ್ಕರಿಸಿ, ಹೊಸ ಸಂವಿಧಾನವನ್ನು ರಚಿಸಿ ದೇಶಕ್ಕೆ ಅರ್ಪಿಸಿದರು. ಇದು ಆಧುನಿಕ ಪ್ರಜಾಪ್ರಭುತ್ವದ ಹುಟ್ಟಿಗೆ ಕಾರಣವಾಯಿತು.

ಸಂವಿಧಾನದ ಪ್ರಕಾರ ಎಲ್ಲರೂ ಅಭಿವೃದ್ಧಿಯ ಫಲ ಪಡೆಯಬೇಕು. ಸಾಮಾಜಿಕ ಶ್ರೇಣಿಕೃತ ವ್ಯವಸ್ಥೆಯನ್ನು ಒಡೆದು, ಸಮಾನತೆಯ ಆಧಾರದಲ್ಲಿ ಸಮಾಜ ಪುನರ್ರಚನೆ ಮಾಡಬೇಕು. ನಾಗರಿಕನ ಸ್ಥಾನಮಾನ ಅವನ ಸಾಧನೆಯಿಂದ ನಿರ್ಣಯವಾಗಬೇಕೇ ಹೊರತು ಹುಟ್ಟು ಅಥವಾ ಜಾತಿಯಿಂದಲ್ಲ.

ಅಂಬೇಡ್ಕರ್ ಅವರ ಸಂವಿಧಾನ ಅರ್ಪಣೆಯಾಗಿ ಎರಡು ಜವಾಬ್ದಾರಿಗಳನ್ನು ಒತ್ತಿ ಹೇಳಿದ ಅವರು, ರಾಜಕೀಯ ಪ್ರಜಾಪ್ರಭುತ್ವ ರಕ್ಷಣೆ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸಾಧನೆ. ರಾಜಕೀಯ ಜನತಂತ್ರದೊಂದಿಗೆ ಸಾಮಾಜಿಕ ಮತ್ತು ಆರ್ಥಿಕ ಜನತಂತ್ರವನ್ನು ಬಲಪಡಿಸಬೇಕು. ಸಾಮಾಜಿಕ ನ್ಯಾಯದ ಮೂಲಕ ಆರ್ಥಿಕ ಸಮಾನತೆ ಸಾಧಿಸಿ ದೇಶವನ್ನು ಸದೃಢಗೊಳಿಸಬೇಕು.

ನಮ್ಮ ಸರ್ಕಾರ ಸಂವಿಧಾನದ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದೆ. ಬಡತನ, ಅನಾರೋಗ್ಯ, ಅನಕ್ಷರತೆ, ಅಪೌಷ್ಟಿಕತೆ ನಿವಾರಣೆ ಮಾಡಿ ಹಸಿವು-ಭಯ-ಅನಾರೋಗ್ಯ ಮುಕ್ತ ಸಮಾಜ ನಿರ್ಮಾಣವೇ ಗುರಿ. ಸಂವಿಧಾನದ 39, 15(3), 47 ಪರಿಚ್ಛೇದಗಳು ಜೀವನ ಹಕ್ಕು, ಮಹಿಳೆಯರ-ಮಕ್ಕಳ ಸಂರಕ್ಷಣೆ, ಪೌಷ್ಟಿಕತೆ-ಆರೋಗ್ಯ ಅಭಿವೃದ್ಧಿಯನ್ನು ಒತ್ತಾಯಿಸುತ್ತವೆ.

ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಅನ್ನಭಾಗ್ಯದಿಂದ ಆಹಾರ ಭದ್ರತೆ, ಗೃಹಜ್ಯೋತಿಯಿಂದ ಇಂಧನ ಖಾತರಿ, ಗೃಹಲಕ್ಷ್ಮಿಯಿಂದ ಮಹಿಳೆಯರಿಗೆ ಮಾಸಿಕ 2000 ರೂ., ಶಕ್ತಿಯಿಂದ ಉಚಿತ ಪ್ರಯಾಣ, ಯುವನಿಧಿಯಿಂದ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಇದರಿಂದ ಹಿಂದುಳಿದ ಕುಟುಂಬಗಳು ತಿಂಗಳಿಗೆ 5-6 ಸಾವಿರ ರೂ. ಉಳಿತಾಯ ಕಾಣುತ್ತಿವೆ, ಮಧ್ಯಮ ವರ್ಗಕ್ಕೆ 25-30 ಸಾವಿರ ರೂ. ವಾರ್ಷಿಕ ಉಳಿತಾಯವಾಗುತ್ತಿದೆ. ಇದು ಶಿಕ್ಷಣ, ಆರೋಗ್ಯಕ್ಕೆ ಬಳಕೆಯಾಗುತ್ತಿದ್ದು, ಸಮಾಜದಲ್ಲಿ ಭದ್ರತೆಯ ಭಾವನೆ ಮೂಡಿದೆ.

ಸಂವಿಧಾನವನ್ನು ವಿರೋಧಿಸುವವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧರು. ಅವರು ಬಡವರು, ರೈತರು, ಕಾರ್ಮಿಕರು, ದಲಿತರ ಪರ ಕಾನೂನುಗಳನ್ನು ವಿರೋಧಿಸುತ್ತಾರೆ. ಸಂವಿಧಾನವನ್ನು ದುರ್ಬಲಗೊಳಿಸುವ ಸಂಚುಗಳ ಬಗ್ಗೆ ಎಚ್ಚರ ವಹಿಸಬೇಕು. ಸಂವಿಧಾನ ರಕ್ಷಣೆಯೇ ದೇಶ ರಕ್ಷಣೆ.

ಸರ್ಕಾರದ ಎಲ್ಲ ಯೋಜನೆಗಳ ಹಿಂದಿನ ಗುರಿ ಸಮಸಮಾಜ ನಿರ್ಮಾಣ. ಸರ್ವರಿಗೂ ಸಮಪಾಲು, ಸಮಬಾಳು. ಈ ಪ್ರಯತ್ನಕ್ಕೆ ಜನರ ಬೆಂಬಲ ಕೋರುತ್ತೇನೆ ಎಂದು ಮುಖ್ಯಮಂತ್ರಿ ಸಂದೇಶ ನೀಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 14T153932.290

ಯುಗಾದಿ-ರಂಜಾನ್ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್: ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
March 14, 2026 - 3:40 pm
0

Untitled design 2026 03 14T144412.938

ವಯಸ್ಸು 44 ಆದ್ರೂ ಅನುಷ್ಕಾ ಶೆಟ್ಟಿ ಇನ್ನೂ ಸಿಂಗಲ್ ! ಉದ್ಯಮಿಯ ಜೊತೆ ಸ್ವೀಟಿ ಮದುವೆ..?

by ಯಶಸ್ವಿನಿ ಎಂ
March 14, 2026 - 2:54 pm
0

Untitled design 2026 03 14T143244.985

ಮತ್ತೆ ರಾಜಮೌಳಿ ಅಡ್ಡಾಗೆ ಕಿಚ್ಚ.. ವಾರಣಾಸಿಯಲ್ಲಿ ಬಾದ್ ಷಾ..!!

by ಯಶಸ್ವಿನಿ ಎಂ
March 14, 2026 - 2:36 pm
0

Untitled design 2026 03 14T133638.160

ಡಾರ್ಕ್ ಸರ್ಕಲ್ ಹಾಗೂ ಮೊಡವೆಗೆ ಇಲ್ಲಿದೆ ನೋಡಿ ಸುಲಭ ಮನೆ ಮದ್ದು

by ಯಶಸ್ವಿನಿ ಎಂ
March 14, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T123938.508
    2 ಸಾವಿರ ಹಡಗುಗಳಿಂದ ಭೀಕರ ಯುದ್ಧಕ್ಕೆ ತಯಾರಿ ನಡೆಸ್ತಿದ್ಯಾ ಚೀನಾ..?
    March 14, 2026 | 0
  • Untitled design 2026 03 14T121850.427
    BREAKING: ದ.ಕೊರಿಯಾ ಮೇಲೆ ಉತ್ತರ ಕೊರಿಯಾ ದಾಳಿ: ಬರೋಬ್ಬರಿ 10 ಬ್ಯಾಲೆಸ್ಟಿಕ್ ಮಿಸೈಲ್‌ಗಳಿಂದ ದಾಳಿ
    March 14, 2026 | 0
  • Untitled design 2026 03 14T115922.573
    ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!
    March 14, 2026 | 0
  • Untitled design 2026 03 14T113827.828
    ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ
    March 14, 2026 | 0
  • Untitled design 2026 03 14T112125.415
    ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version