ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

Untitled design 2026 02 23T192135.953

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಕಾಲದ ಕನಸಾಗಿದ್ದ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಬೇಡಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ಘೋಷಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಸಿಎಂ ಈ ಸಿಹಿಸುದ್ದಿ ನೀಡಿದ್ದು, ಬಜೆಟ್‌ ಕುರಿತು ತೀವ್ರ ಕುತೂಹಲ ಮೂಡಿಸಿದೆ.

ಸಿಎಂ ನೀಡಿದ ಭರವಸೆ ಏನು ?

ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೂ ಮುನ್ನವೇ ಉತ್ತರ ಕನ್ನಡ ಜಿಲ್ಲೆಗೆ ದೊಡ್ಡ ಕೊಡುಗೆ ನೀಡುವುದಾಗಿ ಸಿಎಂ ಸುಳಿವು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಾರಿಯ ಬಜೆಟ್‌ನಲ್ಲಿ ಖಂಡಿತವಾಗಿ ಮಂಜೂರು ಮಾಡುತ್ತೇನೆ. ಜಿಲ್ಲೆಯ ಜನತೆ ತುರ್ತು ಚಿಕಿತ್ಸೆಗಾಗಿ ಉಡುಪಿ ಅಥವಾ ಮಂಗಳೂರಿಗೆ ಹೋಗುವುದನ್ನು ತಪ್ಪಿಸುವುದು ನಮ್ಮ ಗುರಿ ಎಂದು ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಕಾರವಾರದಲ್ಲಿ ಅತ್ಯಾಧುನಿಕ ಕ್ಯಾನ್ಸರ್ ಚಿಕಿತ್ಸಾ ಘಟಕ (Cancer Unit) ಒಂದನ್ನು ಸ್ಥಾಪಿಸುವುದಾಗಿ ಅವರು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯಿಲ್ಲದೆ ಅಪಘಾತ ಹಾಗೂ ತುರ್ತು ಸಂದರ್ಭಗಳಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದರು. ಇದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ದೀರ್ಘಕಾಲದಿಂದ ಅಭಿಯಾನಗಳೂ ನಡೆಯುತ್ತಿತ್ತು. ಈಗ ಸಿಎಂ ಸಿದ್ದರಾಮಯ್ಯ ಅವರ ಈ ಘೋಷಣೆಯು ಜಿಲ್ಲೆಯ ಜನರಿಗೆ ದೊಡ್ಡ ಮಟ್ಟದ ನೆಮ್ಮದಿ ತಂದಿದೆ. ಬಜೆಟ್‌ನಲ್ಲಿ ಅಧಿಕೃತವಾಗಿ ಹಣ ಬಿಡುಗಡೆಯಾದಲ್ಲಿ, ಈ ಭಾಗದ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯಾಗಲಿದೆ.

 

Exit mobile version