• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ನೀಡಿ: ಹೈಕೋರ್ಟ್ ಮೊರೆ ಹೋದ ದರ್ಶನ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 7, 2026 - 2:37 pm
in ಕರ್ನಾಟಕ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (82)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾ ಕೈದಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು, ವಿಚಾರಣೆ ವೇಳೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ನೀಡದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿ, ಮುಂದಿನ ವಿಚಾರಣಾ ದಿನಗಳಂದು ತಮ್ಮನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಜೈಲು ಅಧಿಕಾರಿಗಳು ಹಾಗೂ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ದರ್ಶನ್ ಸಲ್ಲಿಸಿರುವ ಅರ್ಜಿಯಲ್ಲಿ, ಕ್ರಿಮಿನಲ್ ಕಾನೂನಿನ ಮೂಲಭೂತ ತತ್ವಗಳ ಪ್ರಕಾರ ಆರೋಪಿಯ ಸಮಕ್ಷಮದಲ್ಲೇ ಸಾಕ್ಷಿಗಳ ವಿಚಾರಣೆ ನಡೆಯಬೇಕು ಎಂದು ವಾದಿಸಲಾಗಿದೆ. ಪ್ರಕರಣದ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿರುವ ಸಂದರ್ಭದಲ್ಲಿ ತಾಂತ್ರಿಕ ದೋಷಗಳಿಂದಾಗಿ ವಿಡಿಯೋ ಪ್ರಸಾರದಲ್ಲಿ ಆಗಾಗ ವ್ಯತ್ಯಯ ಉಂಟಾಗುತ್ತಿದೆ. ಹೀಗಾಗಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಸಮರ್ಪಕವಾಗಿ ಗಮನಿಸಲು ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

RelatedPosts

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ

ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ

ADVERTISEMENT
ADVERTISEMENT

ಪ್ರಮುಖ ಸಾಕ್ಷಿಗಳ ವಿಚಾರಣೆ ಹಾಗೂ ಪಾಟಿಸವಾಲು ನಡೆಯುತ್ತಿರುವ ಈ ಹಂತದಲ್ಲಿ ಆರೋಪಿಯ ಖುದ್ದು ಹಾಜರಿ ಅತ್ಯಗತ್ಯವಾಗಿದೆ. ಸಾಕ್ಷಿಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ವಿಚಾರಣೆಯ ಸಂದರ್ಭದಲ್ಲಿ ವಕೀಲರಿಗೆ ಅಗತ್ಯ ಸೂಚನೆಗಳನ್ನು ನೀಡಲು ತಮ್ಮನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರುಪಡಿಸಬೇಕು ಎಂದು ದರ್ಶನ್ ಕೋರಿದ್ದಾರೆ.

ಅಲ್ಲದೆ, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಘಟನೆ 2024ರ ಜುಲೈ 1ಕ್ಕೂ ಮುನ್ನ ನಡೆದಿರುವುದರಿಂದ ಹಳೆಯ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ)ಯ ನಿಯಮಗಳೇ ಅನ್ವಯವಾಗುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯ ಸಮಕ್ಷಮದಲ್ಲಿ ಸಾಕ್ಷ್ಯ ದಾಖಲಿಸುವುದು ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ, 2026ರ ಆಗಸ್ಟ್ 17ರಂದು ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ 2024ರ ಜೂನ್ 9ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಹಾಗೂ ಸಾಕ್ಷ್ಯನಾಶ ಆರೋಪದಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಜೂನ್ 11ರಂದು ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತನಿಖೆ ಪೂರ್ಣಗೊಳಿಸಿದ ಪೊಲೀಸರು ಒಟ್ಟು 17 ಆರೋಪಿಗಳ ವಿರುದ್ಧ 2024ರ ಸೆಪ್ಟೆಂಬರ್ 2ರಂದು ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ನಂತರ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ಸುಪ್ರೀಂ ಕೋರ್ಟ್ ಆ ಜಾಮೀನನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ದರ್ಶನ್ ಅವರು 2025ರ ಆಗಸ್ಟ್ 15ರಂದು ಮತ್ತೆ ಶರಣಾಗಿದ್ದರು. ಅಂದಿನಿಂದ ಅವರು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಕರಣದ ವಿಚಾರಣೆ 2025ರ ಡಿಸೆಂಬರ್ 17ರಂದು ಆರಂಭವಾಗಿದ್ದು, ಇದುವರೆಗೆ ಪ್ರಾಸಿಕ್ಯೂಷನ್ ಪರವಾಗಿ 24 ಸಾಕ್ಷಿಗಳ ವಿಚಾರಣೆ ನಡೆದಿದೆ. ಈ ಹಂತದಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ ವೇಳೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ದರ್ಶನ್ ಅವರು 2026ರ ಮೇ 22ರಂದು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವುದೇ ಪರಿಣಾಮಕಾರಿ ಎಂದು ಪ್ರಾಸಿಕ್ಯೂಷನ್ ಆಕ್ಷೇಪಿಸಿತ್ತು. ಎರಡೂ ಕಡೆಯ ವಾದಗಳನ್ನು ಆಲಿಸಿದ ನಗರದ 58ನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸಷನ್ಸ್ ನ್ಯಾಯಾಲಯವು ಆಗಸ್ಟ್ 17ರಂದು ದರ್ಶನ್ ಅವರ ಮನವಿಯನ್ನು ತಿರಸ್ಕರಿಸಿತ್ತು. ಇದೀಗ ಈ ಆದೇಶವನ್ನು ಪ್ರಶ್ನಿಸಿ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (3)

ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!

by ಕವಿತಾ
September 8, 2026 - 4:53 pm
0

ನಾಲ್ಕು ದಿನಕ್ಕೆ 150ಕೋಟಿ.. (2)

ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ 23 ವರ್ಷದ ಯುವಕ ಬಲಿ

by ಕವಿತಾ
September 8, 2026 - 4:31 pm
0

ನಾಲ್ಕು ದಿನಕ್ಕೆ 150ಕೋಟಿ.. (1)

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

by ಕವಿತಾ
September 8, 2026 - 4:17 pm
0

ನಾಲ್ಕು ದಿನಕ್ಕೆ 150ಕೋಟಿ..

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 8, 2026 - 4:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (1)
    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ
    September 8, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
  • ಚಿಂತೆ ಕಾಡಬಹುದು.! (12)
    ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version