• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಧರ್ಮಸ್ಥಳ ಪ್ರಕರಣ: ಕೋರ್ಟ್ ಆದೇಶ ಉಲ್ಲಂಘನೆಗೆ ಹೈಕೋರ್ಟ್ ತರಾಟೆ

ತಡೆಯಾಜ್ಞೆ ಉಲ್ಲಂಘನೆ: ಕುಡ್ಲ ರ‍್ಯಾಂಪೇಜ್ ಅರ್ಜಿಗೆ ಹೈಕೋರ್ಟ್ ಛೀಮಾರಿ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 30, 2025 - 1:51 pm
in ಕರ್ನಾಟಕ
0 0
0
Untitled design (71)

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ (Dharmasthala Burial Case), ಬೆಂಗಳೂರು ನಗರ ಸಿವಿಲ್ ಕೋರ್ಟ್ ಜುಲೈ 18ರಂದು ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದ ಆಡಳಿತಗಾರರ ಕುಟುಂಬ ಮತ್ತು ದೇವಸ್ಥಾನದ ವಿರುದ್ಧ “ಮಾನಹಾನಿಕರ ವಿಷಯ”ವನ್ನು ಪ್ರಕಟಿಸದಂತೆ 390 ಮಾಧ್ಯಮ ಸಂಸ್ಥೆಗಳಿಗೆ ಏಕಪಕ್ಷೀಯ ತಡೆಯಾಜ್ಞೆಯನ್ನು ವಿಧಿಸಿತ್ತು. ಆದರೆ, ಈ ಆದೇಶವನ್ನು ಕೆಲವು ಮಾಧ್ಯಮಗಳು ಪದೇ ಪದೇ ಉಲ್ಲಂಘಿಸಿವೆ ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠವು ನಿನ್ನೆ (ಜುಲೈ 29) ಕಿಡಿಕಾರಿತು.

ಕುಡ್ಲ ರ‍್ಯಾಂಪೇಜ್ ಎಂಬ ಯೂಟ್ಯೂಬ್ ಚಾನಲ್‌ನ ಮುಖ್ಯ ಸಂಪಾದಕ ಅಜಯ್ ಬಿನ್ ರಾಮಕೃಷ್ಣ ಪೂಜಾರಿ (32) ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಪೀಠವು, “ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವವರ ಅರ್ಜಿಯನ್ನು ಪರಿಗಣಿಸಬೇಕೆಂದು ನೀವು ಹೇಗೆ ಭಾವಿಸುತ್ತೀರಿ? ತಡೆಯಾಜ್ಞೆ ಇದ್ದರೂ ಚಾನಲ್‌ಗಳನ್ನು ತೆರೆಯುತ್ತಿರುವಿರಿ,” ಎಂದು ಕುಡ್ಲ ರ‍್ಯಾಂಪೇಜ್‌ನ ವಕೀಲ ಎ. ವೇಲನ್ ಅವರನ್ನು ಪ್ರಶ್ನಿಸಿತು. ಈ ಅರ್ಜಿಯ ಕಾನೂನುಬದ್ಧತೆಯ ಕುರಿತು ತೀರ್ಪನ್ನು ಆಗಸ್ಟ್ 1ರೊಳಗೆ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿತು.

RelatedPosts

ಬೆಂಗಳೂರಿನ ಹಳದಿ ಮೆಟ್ರೋ ಮಾರ್ಗ ನಾಳೆಯಿಂದ ಸೇವೆ ಲಭ್ಯ: ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಧಾನಿ ಮೋದಿ ಆಗಮನ ಹಿನ್ನೆಲೆ 35 ಕ್ಕೂ ಅಧಿಕ ಬೀದಿ ನಾಯಿಗಳನ್ನು ಸೆರೆ ಹಿಡಿದ ಬಿಬಿಎಂಪಿ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ: ಮೋದಿ ಆಗಮನ ಹಿನ್ನೆಲೆ ಈ ಮಾರ್ಗದ ಮೆಟ್ರೋ ಬಂದ್

ADVERTISEMENT
ADVERTISEMENT

ವೇಲನ್ ಅವರು, “ಈ ತಡೆಯಾಜ್ಞೆಯು ಸಂವಿಧಾನದ 19(1)(ಎ)ನೇ ವಿಧಿಯಡಿ ಮಾಧ್ಯಮದ ಮಾತಿನ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ. ಇದು ಸಾರ್ವಜನಿಕ ಹಿತಾಸಕ್ತಿಯ ಪತ್ರಿಕೋದ್ಯಮದ ಮೇಲೆ ‘ಚಿಲ್ಲಿಂಗ್ ಎಫೆಕ್ಟ್’ ಉಂಟುಮಾಡುವ ಪೂರ್ವನಿರ್ಬಂಧವಾಗಿದೆ,” ಎಂದು ವಾದಿಸಿದರು. ಈ ಪ್ರಕರಣದಲ್ಲಿ ಮಾಧ್ಯಮ ವರದಿಗಳು ರಾಜ್ಯ ಸರ್ಕಾರವನ್ನು ವಿಶೇಷ ತನಿಖಾ ತಂಡ (SIT) ರಚಿಸಲು ಪ್ರೇರೇಪಿಸಿತು ಎಂದು ಅವರು ಒತ್ತಿ ಹೇಳಿದರು. ಆದರೆ, ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರ ಪರ ವಕೀಲ ಉದಯ್ ಹೊಳ್ಳ, “ಮಾನಹಾನಿಯು ಸಂವಿಧಾನದ 21ನೇ ವಿಧಿಯಡಿ ವ್ಯಕ್ತಿಯ ಘನತೆಯ ಹಕ್ಕನ್ನು ಕಸಿದುಕೊಳ್ಳುತ್ತದೆ. ಸುಪ್ರೀಂ ಕೋರ್ಟ್ ತೀರ್ಪುಗಳ ಆಧಾರದ ಮೇಲೆ ಈ ತಡೆಯಾಜ್ಞೆಯನ್ನು ವಿಧಿಸಲಾಗಿದೆ,” ಎಂದು ವಾದಿಸಿದರು.

ಧರ್ಮಸ್ಥಳದಲ್ಲಿ 1995ರಿಂದ 2014ರವರೆಗೆ ನೂರಾರು ಮಹಿಳೆಯರು ಮತ್ತು ಮಕ್ಕಳ ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರಿದ 48 ವರ್ಷದ ದಲಿತ ಸ್ವಚ್ಛತಾ ಕಾರ್ಮಿಕನ ಹೇಳಿಕೆಯಿಂದ ಈ ಪ್ರಕರಣ ಆರಂಭವಾಯಿತು. ಈತನ ಗುರುತನ್ನು ಕೋರ್ಟ್ ರಕ್ಷಣೆಯಡಿ ಗೌಪ್ಯವಾಗಿಡಲಾಗಿದೆ. ಜುಲೈ 11ರಂದು ಬೆಳ್ತಂಗಡಿಯ ಕೋರ್ಟ್‌ನಲ್ಲಿ ಈತನ ಹೇಳಿಕೆಯನ್ನು ದಾಖಲಿಸಲಾಯಿತು. ಈತ 13 ಸ್ಥಳಗಳನ್ನು ಗುರುತಿಸಿದ್ದು, SIT ನೇತೃತ್ವದಲ್ಲಿ ನೇತ್ರಾವತಿ ನದಿಯ ದಡದಲ್ಲಿ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ಜುಲೈ 29ರಿಂದ ಆರಂಭವಾಗಿದೆ. ಆದರೆ, ಮೊದಲ ದಿನದ ಶೋಧದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಕಾಡು ಸಂರಕ್ಷಿತ ಪ್ರದೇಶವಾದ ಕಾರಣ, ಯಂತ್ರಗಳ ಬಳಕೆ ಸೀಮಿತವಾಗಿದ್ದು, ಇಂದು ಸಹ ಮಾನವ ಶ್ರಮದಿಂದಲೇ ಶೋಧ ಕಾರ್ಯ ನಡೆಯುತ್ತಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 08 10t101405.047

ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಪೂರ್ಣ ವಿವರ

by ಶಾಲಿನಿ ಕೆ. ಡಿ
August 10, 2025 - 10:20 am
0

Untitled design 2025 08 10t095513.819

ವೀಕೆಂಡ್‌ನಲ್ಲಿ ಗೋಲ್ಡ್‌ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ

by ಶಾಲಿನಿ ಕೆ. ಡಿ
August 10, 2025 - 10:03 am
0

Untitled design 2025 08 10t093753.917

ಬೆಂಗಳೂರಿನ ಹಳದಿ ಮೆಟ್ರೋ ಮಾರ್ಗ ನಾಳೆಯಿಂದ ಸೇವೆ ಲಭ್ಯ: ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
August 10, 2025 - 9:43 am
0

Untitled design 2025 08 10t085117.913

ಪ್ರಧಾನಿ ಮೋದಿ ಆಗಮನ ಹಿನ್ನೆಲೆ 35 ಕ್ಕೂ ಅಧಿಕ ಬೀದಿ ನಾಯಿಗಳನ್ನು ಸೆರೆ ಹಿಡಿದ ಬಿಬಿಎಂಪಿ

by ಶಾಲಿನಿ ಕೆ. ಡಿ
August 10, 2025 - 8:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 10t093753.917
    ಬೆಂಗಳೂರಿನ ಹಳದಿ ಮೆಟ್ರೋ ಮಾರ್ಗ ನಾಳೆಯಿಂದ ಸೇವೆ ಲಭ್ಯ: ಇಲ್ಲಿದೆ ಸಂಪೂರ್ಣ ಮಾಹಿತಿ
    August 10, 2025 | 0
  • Untitled design 2025 08 10t085117.913
    ಪ್ರಧಾನಿ ಮೋದಿ ಆಗಮನ ಹಿನ್ನೆಲೆ 35 ಕ್ಕೂ ಅಧಿಕ ಬೀದಿ ನಾಯಿಗಳನ್ನು ಸೆರೆ ಹಿಡಿದ ಬಿಬಿಎಂಪಿ
    August 10, 2025 | 0
  • Untitled design 2025 08 10t083657.866
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    August 10, 2025 | 0
  • Untitled design 2025 08 10t074700.848
    ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ: ಮೋದಿ ಆಗಮನ ಹಿನ್ನೆಲೆ ಈ ಮಾರ್ಗದ ಮೆಟ್ರೋ ಬಂದ್
    August 10, 2025 | 0
  • Untitled design 2025 08 10t071218.863
    ಇಂದು ಸಿಲಿಕಾನ್ ಸಿಟಿಯಲ್ಲಿ ಹಳದಿ ಮೆಟ್ರೋ, 3 ವಂದೇ ಭಾರತ್ ರೈಲು ಸಂಚಾರಕ್ಕೆ ಮೋದಿ ಚಾಲನೆ
    August 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version