ಧರ್ಮಸ್ಥಳ ವಿರುದ್ಧ ಅಪಪ್ರಚಾರ: ಯೂಟ್ಯೂಬರ್‌ಗಳ ಮೇಲೆ ಇಡಿಗೆ ದೂರು

Untitled design (51)

ಮಂಗಳೂರು: ಧರ್ಮಸ್ಥಳದ ಬಗ್ಗೆ ಸೋಶಿಯಲ್ ಮೀಡಿಯಾ ಮತ್ತು ಯೂಟ್ಯೂಬ್‌ನಲ್ಲಿ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ, ಕೆಲವು ಯೂಟ್ಯೂಬರ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ಸಲ್ಲಿಸಲಾಗಿದೆ. ಈ ದೂರು ಹಿಂದೂ ಧರ್ಮದ ನಂಬಿಕೆಗಳಿಗೆ ಹಾನಿಯುಂಟುಮಾಡುತ್ತಿರುವ ಅಪಪ್ರಚಾರದ ಹಿನ್ನೆಲೆಯಲ್ಲಿ ನೀಡಲಾಗಿದ್ದು, ವಿದೇಶಿ ಫಂಡಿಂಗ್‌ನ ಆರೋಪವೂ ಕೇಳಿಬರುತ್ತಿದೆ. ಹಿಂದೂ ಮುಖಂಡ ಮತ್ತು ಭಜರಂಗದಳದ ಹೋರಾಟಗಾರ ತೇಜಸ್ ಗೌಡ ಅವರು ಬೆಂಗಳೂರಿನ ಇಡಿ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಅಲ್ಲದೇ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೂ ಸಹ ದೂರು ನೀಡಿರುವುದಾಗಿ ತಿಳಿದುಬಂದಿದೆ.

ಧರ್ಮಸ್ಥಳದ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಕೆಲವು ಯೂಟ್ಯೂಬರ್‌ಗಳು ಈ ಕ್ಷೇತ್ರದ ಬಗ್ಗೆ ತಪ್ಪು ಮಾಹಿತಿ ಹಬ್ಬಿಸುತ್ತಿದ್ದಾರೆ. ಅಪಪ್ರಚಾರದ ಮೂಲಕ ಧರ್ಮಸ್ಥಳದ ಆಡಳಿತ, ದೇವಸ್ಥಾನದ ಆಚರಣೆಗಳು ಮತ್ತು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಕೆಟ್ಟದಾಗಿ ಬಿಂಬಿಸುತ್ತಿದ್ದಾರೆ ಎಂಬ ಆರೋಪವಿದೆ. ಈ ರೀತಿಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದರಿಂದ, ಭಕ್ತರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಹಿಂದೂ ಸಮುದಾಯದಲ್ಲಿ ಆಕ್ರೋಶ ಹೆಚ್ಚಾಗಿದ್ದು, ಕಾನೂನು ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ತೇಜಸ್ ಗೌಡ ಅವರು ತಮ್ಮ ದೂರಿನಲ್ಲಿ ಕೆಲವು ನಿರ್ದಿಷ್ಟ ಯೂಟ್ಯೂಬರ್‌ಗಳನ್ನು ಗುರುತಿಸಿದ್ದಾರೆ. ಅವರಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದು, ಅವರ ವಿಡಿಯೋಗಳು ಹಿಂದೂ ಧರ್ಮದ ವಿರುದ್ಧ ಆರೋಪಗಳನ್ನು ಮಾಡುತ್ತಿವೆ ಎಂದು ಹೇಳಲಾಗಿದೆ. ಈ ಯೂಟ್ಯೂಬರ್‌ಗಳಿಗೆ ವಿದೇಶದಿಂದ ಅಕ್ರಮ ಹಣದ ಸಿಗುತ್ತಿದೆ ಎಂಬ ಮಾಹಿತಿ ಇದ್ದು, ಇದು ದೇಶದ ಆಂತರಿಕ ಭದ್ರತೆಗೆ ಧಕ್ಕೆಯಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿದೇಶಿ ಫಂಡಿಂಗ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಅಪಪ್ರಚಾರ ನಡೆಸುವುದು ಒಂದು ದೊಡ್ಡ ಸಂಚು ಎಂದು ತೇಜಸ್ ಗೌಡ ಅಭಿಪ್ರಾಯಪಟ್ಟಿದ್ದಾರೆ. ಇದು ಕೇವಲ ಧರ್ಮಸ್ಥಳದ ಬಗ್ಗೆಯಲ್ಲದೇ, ಇಡೀ ಹಿಂದೂ ಸಮುದಾಯದ ನಂಬಿಕೆಗಳನ್ನು ಕೆಡವುವ ಪ್ರಯತ್ನ ಎಂದು ಅವರು ಹೇಳಿದ್ದಾರೆ.

ಈ ದೂರು ಸಲ್ಲಿಸುವ ಮೂಲಕ ತೇಜಸ್ ಗೌಡ ಅವರು ಹಿಂದೂ ಪರ ಹೋರಾಟದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ. ಭಜರಂಗದಳದ ಸಕ್ರಿಯ ಸದಸ್ಯರಾಗಿರುವ ಅವರು ಹಿಂದೂ ಧರ್ಮದ ರಕ್ಷಣೆಗಾಗಿ ಹಲವು ಹೋರಾಟಗಳನ್ನು ನಡೆಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಬ್ಬುತ್ತಿರುವ ತಪ್ಪು ಮಾಹಿತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರ ಮತ್ತು ಏಜೆನ್ಸಿಗಳನ್ನು ಒತ್ತಾಯಿಸುತ್ತಿದ್ದಾರೆ. ಇಡಿ ಮತ್ತು ಎನ್‌ಐಎಯಂತಹ ಸಂಸ್ಥೆಗಳು ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

Exit mobile version