• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ.ಕೆ. ಶಿವಕುಮಾರ್ ಮೇಲಿನ ಪ್ರೀತಿಗೆ ಎಲ್ಲರೂ ಮಾತನಾಡುತ್ತಿದ್ದಾರೆ: ಡಿ.ಕೆ. ಸುರೇಶ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 18, 2025 - 8:24 pm
in Flash News, ಕರ್ನಾಟಕ
0 0
0
Add a subheading (66)

“ಡಿ.ಕೆ. ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿ ಎಂಬ ಭಾವನೆ ಎಲ್ಲರಿಗೂ ಇದೆ. ಹೀಗಾಗಿ ಎಲ್ಲರೂ ಮಾತನಾಡುತ್ತಿದ್ದಾರೆ. ಬಂಡೆ ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ ಎಂದು ಶಿವಕುಮಾರ್ ಅವರು ಆಗಾಗ್ಗೆ ಹೇಳುತ್ತಿರುತ್ತಾರೆ. ಕಲ್ಲಿಗೆ ಪೆಟ್ಟು ಬಿದ್ದಾಗಲೇ ಶಿಲೆಯಾಗಿ ಮಾರ್ಪಾಡಾಗುತ್ತದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

RelatedPosts

ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್

ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಇಂದು ಬೆಂಗಳೂರಿನಲ್ಲಿ ತುಂತುರು ಮಳೆ: ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ

63% ಭ್ರಷ್ಟಾಚಾರ BJP ಕಾಲದ್ದು: ಆರ್. ಅಶೋಕ್‌ಗೆ ಸಿಎಂ ಸಿದ್ದರಾಮಯ್ಯ ಕೌಂಟರ್

ADVERTISEMENT
ADVERTISEMENT

ನಾಲ್ಕೈದು ಸಚಿವರು ಡಿ.ಕೆ. ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ ಎಂದು ಕೇಳಿದಾಗ, “ಅದೆಲ್ಲಾ ಗೊತ್ತಿಲ್ಲಾ. ಎಲ್ಲರೂ ಸೇರಿ ಒಳ್ಳೆಯದನ್ನು ಬಯಸುತ್ತಿದ್ದು ಒಳ್ಳೆಯದೇ ಆಗುತ್ತದೆ. ಯಾರಿಗಾದರೂ ಒಳ್ಳೆಯದಾಗಬೇಕಾದರೆ ಹತ್ತಾರು ಜನರ ಪೆಟ್ಟು ಬೀಳಬೇಕು. ಅದನ್ನು ನಾವು ತಪ್ಪಾಗಿ ತಿಳಿಯಬಾರದು, ಅದನ್ನು ಪ್ರಸಾದವಾಗಿ ಸ್ವೀಕರಿಸಬೇಕು” ಎಂದು ತಿಳಿಸಿದರು.

ಪ್ರಸಾದ ಹೆಚ್ಚಾಗಿ ಸ್ವೀಕರಿಸಿದರೆ ಹೊಟ್ಟೆ ನೋವು ಬರುವುದಿಲ್ಲವೇ ಎಂದು ಮಾರ್ಮಿಕವಾಗಿ ಕೇಳಿದ ಪ್ರಶ್ನೆಗೆ, “ನಮಗೆ ಆ ರೀತಿ ಬರುವುದಿಲ್ಲ. ನಾವು ಹಳ್ಳಿಯಲ್ಲಿ ಬೆಳೆದಿದ್ದೇವೆ” ಎಂದು ಮಾರ್ಮಿಕವಾಗಿಯೇ ಉತ್ತರಿಸಿದರು.

ಆಗಿದ್ದರೆ ಶಿಲೆಯಾಗಿ ಹೊರಹೊಮ್ಮುವರೆ ಎಂದು ಕೇಳಿದಾಗ, “ಖಂಡಿತ. ಆದರೆ ಎಷ್ಟು ತಟ್ಟುತ್ತಾರೋ, ತಟ್ಟಲಿ” ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಜಣ್ಣ ಅವರಿಗೆ ಡಿ.ಕೆ. ಶಿವಕುಮಾರ್ ಅವರ ಮೇಲೆ ಗೌರವ, ಪ್ರೀತಿ ಜಾಸ್ತಿ. ಹೀಗಾಗಿ ಆ ರೀತಿ ಹೇಳಿದ್ದಾರೆ” ಎಂದರು.

ಪ್ರೀತಿ ಜಾಸ್ತಿ ಆದರೆ ಕಷ್ಟ ಆಗುತ್ತಲ್ಲವೇ ಎಂದು ಕೇಳಿದಾಗ, “ಶಿವಕುಮಾರ್ ಅವರಿಗೆ ಒಳ್ಳೆಯದಾಗಬೇಕು ಎಂದು ಬಯಸಿದಾಗ ಏನು ಮಾಡಲು ಆಗುತ್ತದೆ” ಎಂದು ಮಾರ್ಮಿಕವಾಗಿ ತಿಳಿಸಿದರು.

ರಾಜಣ್ಣ ಅವರ ಮಾತಿಗೆ ಮಿತಿ ಇಲ್ಲವೇ, ಇದರಿಂದ ಪಕ್ಷಕ್ಕೆ ಮುಜುಗರವಾಗುವುದಿಲ್ಲ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಗೊತ್ತಿಲ್ಲ, ಮುಖ್ಯಮಂತ್ರಿಗಳು ಹಾಗೂ ಎಐಸಿಸಿ ಅಧ್ಯಕ್ಷರು, ರಾಜ್ಯ ಉಸ್ತುವಾರಿ ಅವರನ್ನು ಕೇಳಿ” ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬಿದೆಯಾ ಎಂಬ ರಾಜಣ್ಣ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ಕೊಂಬಿದೆಯೇ ಇಲ್ಲವೇ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ” ಎಂದರು.

ಈ ವಿಚಾರದಲ್ಲಿ ನೀವು ಮೌನ ಅಸ್ತ್ರ ಪ್ರಯೋಗಿಸುತ್ತಿದ್ದೀರಾ ಎಂದು ಕೇಳಿದಾಗ, “ನಾವು ಮಾತನಾಡುತ್ತಿದ್ದೇವೆ. ಮೌನ ಯಾಕೆ? ನಾವು ಮಾತನಾಡುವುದನ್ನು ನಿಲ್ಲಿಸಿಲ್ಲ. ನೀವು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತಿದ್ದೇವೆ” ಎಂದರು.

ನೀವು ಬಹಳ ಸೈಲೆಂಟಾಗಿದ್ದೀರಾ ಎಂದು ಕೇಳಿದಾಗ, “ಇದು ಮಳೆ ಬರುವ ಕಾಲ ಅಲ್ಲ, ಮಳೆ ಬರಲು ಇನ್ನ ಕಾಲಾವಕಾಶವಿದೆ” ಎಂದು ತಿಳಿಸಿದರು.

ಖಾಲಿ ಇಲ್ಲದ ಹುದ್ದೆಗೆ ಈಗ ಚರ್ಚೆ ಯಾಕೆ?

ಸಿಎಂ ಬದಾವಣೆಯಾದರೆ ಶಾಸಕರ ಅಭಿಪ್ರಾಯ ಪಡೆಯಲೇಬೇಕು ಎಂಬ ಪಟ್ಟಿನ ಬಗ್ಗೆ ಕೇಳಿದಾಗ, “ಆ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ನಾಯಕರನ್ನು ಕೇಳಿ. ಈಗ ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ. ಖಾಲಿ ಇಲ್ಲದ ಸ್ಥಾನಕ್ಕೆ ಈಗ ಚರ್ಚೆ ಯಾಕೆ? ಚರ್ಚೆ ಹುಟ್ಟು ಹಾಕಿದ್ದು ಯಾರು? ನನಗೆ ಗೊತ್ತಿಲ್ಲ” ಎಂದರು.

ಪವರ್ ಶೇರಿಂಗ್ ಇಲ್ಲವೇ ಎಂದು ಕೇಳಿದಾಗ, “ನಾನು ಈ ವಿಚಾರದಿಂದ ಹೊರಗೆ ಇದ್ದೇನೆ. ನನಗೆ ಅದರ ಬಗ್ಗೆ ಗೊತ್ತಿಲ್ಲ. ನಾನ್ಯಾಕೆ ಅದರ ಬಗ್ಗೆ ಮಾತನಾಡಲಿ. ಈ ಸಿನಿಮಾದಲ್ಲಿ ಇರುವವರನ್ನು ಕೇಳಿ. ನಾನು ಈ ಸಿನಿಮಾದಲ್ಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಎಂದು ಎಐಸಿಸಿ ಪತ್ರಿಕಾ ಪ್ರಕಟಣೆ ಆಧಾರದ ಮೇಲೆ ಒತ್ತಾಯ ಮಾಡುತ್ತಿದ್ದೇವೆ ಎಂಬ ವಾದದ ಬಗ್ಗೆ ಕೇಳಿದಾಗ, “ನನಗೆ ಇದ್ಯಾವುದರ ಬಗ್ಗೆ ಗೊತ್ತಿಲ್ಲ. ಈ ಎಲ್ಲಾ ವಿಚಾರವನ್ನು ದೆಹಲಿ ನಾಯಕರ ಜತೆ ಚರ್ಚೆ ಮಾಡಬೇಕು. ನಾನು ಈ ಹಿಂದೆ ಸಂಸದನಾಗಿದ್ದೆ. ಈಗ ಕೇವಲ ಪಕ್ಷದ ಕಾರ್ಯಕರ್ತ ಮಾತ್ರ. ಪಕ್ಷದ ವರಿಷ್ಠರ ಮಟ್ಟದಲ್ಲಿ ಏನು ಚರ್ಚೆಯಾಗುತ್ತದೆ ಎಂಬುದು ಗೊತ್ತಿಲ್ಲ. ನಾನು ಆಯ್ತು, ನನ್ನ ಕೆಲಸ ಆಯ್ತು ಎಂದು ಇದ್ದೇನೆ” ಎಂದು ತಿಳಿಸಿದರು.

ದೆಹಲಿಗೆ ಹೋದಾಗ ನಾಯಕರ ಭೇಟಿ ಮಾಡುವುದು ಸಹಜ:

ಪರಮೇಶ್ವರ್ ಅವರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡುತ್ತಿರುವ ಬಗ್ಗೆ ಕೇಳಿದಾಗ, “ದೆಹಲಿಗೆ ಪರಮೇಶ್ವರ್, ಶಿವಕುಮಾರ್, ಸಿದ್ದರಾಮಯ್ಯ, ಬೇರೆ ಸಚಿವರು ಹೋಗುತ್ತಾರೆ. ದೆಹಲಿಯಲ್ಲಿ ಹತ್ತಾರು ಕೆಲಸ ಕಾರ್ಯಗಳು ಇರುತ್ತವೆ. ಕೇಂದ್ರ ಸರ್ಕಾರದ ಜತೆ ಮಾತುಕತೆ ಮಾಡುವುದಿರುತ್ತದೆ, ದೆಹಲಿಗೆ ಹೋದಾಗ, ಪಕ್ಷದ ನಾಯಕರನ್ನು ಭೇಟಿ ಮಾಡುವುದು ಸಹಜ” ಎಂದರು.

ದಲಿತ ಶಾಸಕರುಗಳ ಡಿನ್ನರ್ ಸಭೆಗೆ ಶಿವಕುಮಾರ್ ಅವರು ಬ್ರೇಕ್ ಹಾಕಿದರು, ಹೀಗಾಗಿ ಸಮಾವೇಶಕ್ಕೆ ಅನುಮತಿ ನೀಡಿ ಎಂದು ಕೇಳಿದಾಗ, “ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ನಾನು ಬಹಳ ಸಣ್ಣವನು. ಈ ಬಗ್ಗೆ ದೊಡ್ಡವರನ್ನೇ ಕೇಳಿ” ಎಂದು ತಿಳಿಸಿದರು.

ಚುನಾವಣೆಗೆ ನಿಲ್ಲುವ ಇರಾದೆ ನನ್ನದಲ್ಲ:

ಕೆಎಂಎಫ್ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೀರಾ ಎಂದು ಕೇಳಿದಾಗ, “ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಜನ ನನಗೆ ವಿಶ್ರಾಂತಿ ನೀಡಿದ್ದಾರೆ” ಎಂದು ತಿಳಿಸಿದರು.

ನೀವು ಕೂಡ ಡೈರಿಗೆ ಹಾಲು ಹಾಕುತ್ತಿದ್ದೀರಿ ಎಂದು ಕೇಳಿದಾಗ, “ನಾನು ಹೊಸತಾಗಿ ಹಾಲು ಹಾಕುತ್ತಿಲ್ಲ. ಇಲ್ಲಿಯವರೆಗೂ ನಮ್ಮ ತಾಯಿ ನನ್ನ ಹೆಸರಿನಲ್ಲಿ ಹಾಲು ಹಾಕುತ್ತಿದ್ದರು. ಈಗ ನಾನು ಅದನ್ನು ಮುಂದುವರಿಸುತ್ತಿದ್ದೇನೆ. ಹಾಲು ಉತ್ಪಾದನೆಯನ್ನು ನಾನು ಈಗ ಆರಂಭಿಸಿಲ್ಲ. ಶಿವಕುಮಾರ್ ಅವರು ಸಹಕಾರ ಸಚಿವರಾಗಿದ್ದಾಗಲೇ ಡೈರಿ ಮಾಡಲು ಮುಂದಾಗಿದ್ದೆ. ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಉದ್ದೇಶದಿಂದ ಒಂದೇ ದಿನ 40-50 ಡೈರಿ ಆರಂಭಿಸಿದ್ದೆವು. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಬಮುಲ್‌ ವತಿಯಿಂದ ಕನಕಪುರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಮೆಘಾ ಡೈರಿ ಆರಂಭಿಸಿದ್ದೇವೆ. ಆಗಾಗಾ ಹಾಲು ಉತ್ಪಾದನಾ ವಲಯದ ಆಗುಹೋಗುಗಳನ್ನು ನಾನು ಪರಿಶೀಲಿಸುತ್ತೇನೆ. ರೇಷ್ಮೆ ಹಾಗೂ ಹಾಲಿನಲ್ಲಿ ರೈತರ ಬದುಕು ಅಡಗಿದೆ. ಈ ಎರಡು ಕ್ಷೇತ್ರದ ಮೇಲೆ ನಮ್ಮ ಜಿಲ್ಲೆ ಜನ ಅವಲಂಭಿತವಾಗಿದ್ದು, ಇದಕ್ಕೆ ಅಗತ್ಯವಿರುವ ಪ್ರೋತ್ಸಾಹ, ಮಾರ್ಗದರ್ಶನಗಳನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದು, ಇದನ್ನು ಮಾಡುತ್ತಿದ್ದೇನೆ ಎಂದರೆ ಚುನಾವಣೆಗೆ ನಿಲ್ಲುತ್ತೇನೆ ಎಂಬ ಅರ್ಥವಲ್ಲ. ಚುನಾವಣೆಗೆ ನಿಲ್ಲುವ ಇರಾದೆಯೂ ನನ್ನದಲ್ಲ” ಎಂದು ಸ್ಪಷ್ಟಪಡಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 06T083351.968

BBK 12: “ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ”..ರಕ್ಷಿತಾಗೆ ಮನೆಮಂದಿ ಕ್ಲಾಸ್!

by ಶಾಲಿನಿ ಕೆ. ಡಿ
December 6, 2025 - 8:35 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ದಿನಭವಿಷ್ಯ: ಹಣ, ಆರೋಗ್ಯ, ಉದ್ಯೋಗದಲ್ಲಿ ಅವಕಾಶ ಸಿಗಲಿದೆ?

by ಶಾಲಿನಿ ಕೆ. ಡಿ
December 6, 2025 - 8:02 am
0

Untitled design 2025 12 06T071813.072

ಲೋ ಬಿಪಿ ಹೈ ಬಿಪಿಯಷ್ಟೇ ಅಪಾಯಕಾರಿ: ಇದನ್ನು ನಿಯಂತ್ರಿಸಲು ಈ ಆಹಾರಗಳನ್ನು ಪ್ರಯತ್ನಿಸಿ ನೋಡಿ

by ಶಾಲಿನಿ ಕೆ. ಡಿ
December 6, 2025 - 7:34 am
0

Untitled design 2025 12 04T070243.618

ರಾಶಿಫಲ: ಇಂದು ಈ ರಾಶಿಯವರಿಗೆ ಲಾಭದಾಯಕ ದಿನ, ಆರೋಗ್ಯ ಸಮಸ್ಯೆ ಕಾಡಬಹುದು!

by ಶಾಲಿನಿ ಕೆ. ಡಿ
December 6, 2025 - 6:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 05T190730.419
    ನಾಳೆಯಿಂದ 4 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆಗೆ ಬ್ರೇಕ್
    December 5, 2025 | 0
  • Untitled design 2025 12 04T144107.743
    ಡ್ರಗ್ಸ್ ಮಾಫಿಯಾಗೆ ಬ್ರೇಕ್: ₹18.75 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ: 10 ಮಂದಿ ಅರೆಸ್ಟ್‌
    December 4, 2025 | 0
  • Untitled design 2025 12 04T131247.703
    ಪುಟಿನ್ ಭೇಟಿಗೆ ಪ್ರತಿಪಕ್ಷ ನಾಯಕನಿಗೆ ಅವಕಾಶ ನಿರಾಕರಣೆ-ರಾಹುಲ್ ಗಾಂಧಿ ಅಸಮಾಧಾನ..!
    December 4, 2025 | 0
  • Untitled design 2025 12 04T124340.372
    ಅಕ್ರಮವಾಗಿ ರಕ್ತಚಂದನ ಸಾಗಿಸುತ್ತಿದ್ದ ನಾಲ್ವರು ಅರೆಸ್ಟ್‌: ₹1.35 ಕೋಟಿ ಮೌಲ್ಯದ ರಕ್ತಚಂದನ ವಶ
    December 4, 2025 | 0
  • Untitled design 2025 12 04T120544.549
    3ನೇ ದಿನವೂ ಇಂಡಿಗೋ ವಿಮಾನಯಾನದಲ್ಲಿ ಗೊಂದಲ: ಬೆಂಗಳೂರಿನಲ್ಲಿ 73 ವಿಮಾನ ರದ್ದು
    December 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version