• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 9, 2025 - 6:08 pm
in Flash News, ಕರ್ನಾಟಕ
0 0
0
Befunky collage 2025 03 09t180733.868

“ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿವಿಮಾತು ಹೇಳಿದರು.

ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ ಕಟ್ಟಡ, ಆಡಳಿತ ಕಟ್ಟಡ ಹಾಗೂ ಸಾಯಿಬಾಬಾ ಮಂದಿರವನ್ನು ಭಾನುವಾರದಂದು ಲೋಕಾರ್ಪಣೆ ಮಾಡಿ ಡಿಸಿಎಂ ಮಾತನಾಡಿದರು.

RelatedPosts

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ADVERTISEMENT
ADVERTISEMENT

“ದಳ,‌ ಬಿಜೆಪಿ,ಕಾಂಗ್ರೆಸ್, ರೈತ ಸಂಘ – ಹೀಗೆ ಯಾವುದೇ ಪಕ್ಷದ ರಾಜಕಾರಣಿಗಳನ್ನು ನಿಮ್ಮ ಶಿಕ್ಷಣ ಸಂಸ್ಥೆಯ ಒಳಗೆ ಸೇರಿಸಬೇಡಿ. ಶಾಲಾ ಶುಲ್ಕ ಕಡಿಮೆ ಮಾಡಿ ಎನ್ನುವ ಶಿಫಾರಸ್ಸು ತರುವುದರಿಂದ ಶಾಲೆಗಳನ್ನು ನಡೆಸಲು ಆಗುವುದಿಲ್ಲ. ಪೋಷಕರು ಸಹಕರಿಸಿದರೆ ಮಾತ್ರ ಸಂಸ್ಥೆ ಬೆಳೆಯುತ್ತದೆ. ಇಲ್ಲದಿದ್ದರೆ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದರು.

“ಮಕ್ಕಳು ಗ್ಲೋಬಲ್ ಮಟ್ಟಕ್ಕೆ ಸ್ಪರ್ಧಿಸಬೇಕು. ನೀವು ಎಲ್ಲಿ ಓದಿದ್ದೀರಿ ಎಂದು ಯಾರೂ ಕೇಳುವುದಿಲ್ಲ. ಆದರೆ ನಿಮ್ಮ ಅಂಕ ಮತ್ತು ಕೌಶಲಗಳನ್ನು ಕೇಳುತ್ತಾರೆ. ಅದಕ್ಕೆ ಶಿಕ್ಷಣವು ಮಕ್ಕಳಲ್ಲಿ ಭವಿಷ್ಯದ ಬಗ್ಗೆ ಭರವಸೆ ಮೂಡಿಸಬೇಕು” ಎಂದು ಹೇಳಿದರು.

“ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಲಾಗುವುದು. ಸಿಎಸ್ ಆರ್ ಹಣ ಬಳಸಿ ಈಗಾಗಲೇ ರಾಜ್ಯದಲ್ಲಿ 30 ಶಾಲೆಗಳ ಕಾರ್ಯಾರಂಭ ಮಾಡಲಾಗಿದೆ. ನನ್ನ ಕ್ಷೇತ್ರದಲ್ಲಿ ಟೊಯೋಟೊ, ಪ್ರೆಸ್ಟೀಜ್ ಕಂಪೆನಿಗಳ ಸಹಯೋಗದಲ್ಲಿ 5-6 ಕೆಪಿಎಸ್ ಶಾಲೆಗಳಿಗೆ ಶಂಕುಸ್ಥಾಪನೆ ಮಾಡಿದ್ದೇನೆ. ಇಡೀ ರಾಜ್ಯದಾದ್ಯಂತ 2 ಸಾವಿರ ಶಾಲೆಗಳ ನಿರ್ಮಾಣ ಮಾಡುವುದು ನಮ್ಮ ಗುರಿ” ಎಂದರು.

“ಶಿಕ್ಷಣವನ್ನು ಒಂದಷ್ಟು ಜನ ವ್ಯಾಪಾರೀಕರಣ ಮಾಡಿದ್ದಾರೆ.‌ ಜಾಗತಿಕ ಮಟ್ಟದಲ್ಲಿ ಮಕ್ಕಳು ಸ್ಪರ್ದಿಸಬೇಕು ಎನ್ನುವ ಮನೋಭಾವನೆ ಬೆಳೆದಿದೆ. ಮಕ್ಕಳು ಸಹ ಬಹಳ ತೀಕ್ಷ್ಣವಾಗಿ ಯೋಚನೆ ಮಾಡುತ್ತಾರೆ. ಮೊಬೈಲ್‌ ಹಾಗೂ ಕಂಪ್ಯೂಟರ್ ಮೂಲಕ ಬೆರಳ ತುದಿಯಲ್ಲಿ ಎಲ್ಲವೂ ಸಿಕ್ಕಿಬಿಡುತ್ತದೆ” ಎಂದು ಹೇಳಿದರು.

“ಭೀಷ್ಮ ಧರ್ಮರಾಯನಿಗೆ ಒಂದು ಮಾತನ್ನು ಹೇಳುತ್ತಾನೆ. ಮನುಷ್ಯ ಹುಟ್ಟುವಾಗ ನಾಲ್ಕು ಋಣದಲ್ಲಿ ಹುಟ್ಟುತ್ತಾನೆ. ತಂದೆ ತಾಯಿ, ಗುರು, ದೇವರು ಹಾಗೂ ಸಮಾಜದ ಋಣದಲ್ಲಿ ಹುಟ್ಟುತ್ತಾನೆ. ಈ ಋಣಗಳನ್ನು ಧರ್ಮದಿಂದ ತೀರಿಸಬೇಕು ಎಂದು‌. ಈ ನಾಲ್ಕು ಋಣಗಳನ್ನು ಬಿ.ಎಂ ವಿದ್ಯಾಸಂಸ್ಥೆಯನ್ನು ಕಟ್ಟಿರುವ ರಾಮಕೃಷ್ಣ ಅವರು ತೀರಿಸಿದ್ದಾರೆ. ಇದು ಅವರ ಬಾಳಿನಲ್ಲಿ ಐತಿಹಾಸಿಕವಾದ ದಿನ” ಎಂದು ಹೇಳಿದರು.

“ರಾಮಕೃಷ್ಣ ಅವರು ನನ್ನೊಂದಿಗೆ ಕೆಲಸ ಮಾಡುತ್ತಿದ್ದರು. ಅವರು ನನ್ನ ಮಿತ್ರರು. ಆದ ಕಾರಣ ನಾನು ಈ ಸಂಸ್ಥೆಯ ಬೆನ್ನೆಲುಬಾಗಿ ಇದ್ದೇನೆ ಎಂದು ಧೈರ್ಯ ತುಂಬಲು ಬಂದಿದ್ದೇನೆ” ಎಂದರು.

“ರಾಮಕೃಷ್ಣ ಅವರು ಇದೇ ಬಂಡವಾಳವನ್ನು ಬೆಂಗಳೂರಿನಲ್ಲಿ ಹಾಕಿದ್ದರೇ ಶಾಲೆ ಇನ್ನೂ ಚೆನ್ನಾಗಿ ಬೆಳೆಯುತ್ತಿತ್ತು. ಆದರೆ ಗ್ರಾಮೀಣ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕು ಎಂದು ಇಲ್ಲಿ ಪ್ರಾರಂಭ ಮಾಡಿದ್ದಾರೆ. ನಮ್ಮ ಶಿಕ್ಷಣ ಸಂಸ್ಥೆಯಿಂದ ಪರಿಣಿತರನ್ನು ಕರೆಸಿ ಇಲ್ಲಿನ ಸಿಬ್ಬಂದಿಗೆ ಆಡಳಿತಾತ್ಮಕ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇನೆ” ಎಂದು ಭರವಸೆ ನೀಡಿದರು.

“ಈ ಶಾಲೆಯಲ್ಲಿ ವರ್ಷಕ್ಕೆ 45 ಸಾವಿರ ಶುಲ್ಕವಿಟ್ಟಿದ್ದಾರೆ. ಇದರಿಂದ ಶಿಕ್ಷಕರಿಗೆ ಸಂಬಳ ನೀಡಲು ಕಷ್ಟವಾಗುತ್ತದೆ. ಉತ್ತಮ ಗುಣಮಟ್ಟದ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಿ. ಏಕೆಂದರೆ ಈಗ ಯಾರೂ ಸಹ ಯಾವುದರಲ್ಲಿಯೂ ಕಡಿಮೆಯಿಲ್ಲ. ಮಂಡ್ಯ ಜಿಲ್ಲೆ ಫಲಿತಾಂಶದಲ್ಲಿ 17 ನೇ ಸ್ಥಾನಕ್ಕೆ ಕುಸಿದಿದೆ.‌ ಇದನ್ನು ಮೇಲಕ್ಕೆ ಎತ್ತುವ ಕೆಲಸ ಮಾಡಬೇಕು. ಅದಕ್ಕೆ ಉತ್ತಮ ಶಾಲೆಗಳ ಅಗತ್ಯವಿದೆ” ಎಂದರು.

“ಶಂಕರೇಗೌಡರು, ನಾಗೇಗೌಡರು, ಮಾದೇಗೌಡರು, ಮಂಚೇಗೌಡರು, ಎಸ್.ಎಂ.ಕೃಷ್ಣ ಅವರು ಮಂಡ್ಯದಲ್ಲಿ ಅತ್ಯುತ್ತಮ ವಿದ್ಯಾಸಂಸ್ಥೆಗಳನ್ನು ಕಟ್ಟಿದ್ದಾರೆ. ಇದೇ ಮಾದರಿಯಲ್ಲಿ ಸ್ನೇಹಿತ ರಾಮಕೃಷ್ಣ ಅವರು ಶಾಲೆ ನಿರ್ಮಾಣ ಮಾಡಿದ್ದಾರೆ‌. ಪೋಷಕರು ಶಾಲಾ ಶುಲ್ಕದಲ್ಲಿ ಹೆಚ್ಚು ರಿಯಾಯಿತಿ ಕೇಳದೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಬೇಕು” ಎಂದರು.

“ಶಿಕ್ಷಣ ಸಂಸ್ಥೆಯನ್ನು ಕಟ್ಟುವುದು ಸುಲಭದ ಕೆಲಸವಲ್ಲ‌. ಬಡ್ಡಿಗೆ ಸಾಲ ತೆಗೆದುಕೊಂಡರೆ ಸಾಲ ತೀರುವುದೇ ಇಲ್ಲ. ಬಡ್ಡಿ ಓಡುತ್ತಲೇ ಇರುತ್ತದೆ. ಸಂಸ್ಥೆ ನಡೆಸುವುದು ಕಷ್ಟ. ಆದರೂ ಸಮಾಜದ ಋಣ ತೀರಿಸಬೇಕು ಎಂದು ಸಮಾಜಮುಖಿ ಕೆಲಸ ಮಾಡಿದ್ದಾರೆ. ನನಗೂ ಶಿಕ್ಷಣ ಕ್ಷೇತ್ರದಲ್ಲಿ 25 ವರ್ಷಗಳ ಅನುಭವವಿದೆ. ಈ ಸಂಸ್ಥೆಗೂ ತಕ್ಕ ನೆರವು ನೀಡುತ್ತೇನೆ” ಎಂದು ಹೇಳಿದರು.

“ನನಗೂ ಶಿಕ್ಷಣಕ್ಕೂ ಅವಿನಾಭಾವ ಸಂಬಂಧ. ನಾನು ಪದವೀಧರನಾಗಿದ್ದು 2007- 08 ರಲ್ಲಿ. ಏಕೆಂದರೆ ನನ್ನ ಮಕ್ಕಳು ಬೆಳೆದು ದೊಡ್ಡವರಾದಾಗ ನನ್ನನ್ನು ಓದು ಎಂದು ಹೇಳುತ್ತೀಯಾ ನೀನೇ ಓದಿಲ್ಲ ಎನ್ನುತ್ತಾರೆ ಎನ್ನುವ ಕಾರಣಕ್ಕೆ ತಡವಾಗಿಯಾದರೂ ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ಪದವಿ ಪಡೆದೆ. ನನಗೆ ಯಾವ ಹುದ್ದೆ ಸಿಕ್ಕಾಗಲೂ ಅಷ್ಟೊಂದು ಸಂತೋಷವಾಗಿರಲಿಲ್ಲ” ಎಂದು ಹೇಳಿದರು.

ನೀರಿನಲ್ಲಿ ನೆನೆಯದ, ಅಗ್ನಿಯಲ್ಲಿ ಸುಡದ ಗುಪ್ತ ನಿಧಿ ಎಂದರೆ ಅದು ವಿದ್ಯೆ. ನೀವು ಕಲಿಯುವ ವಿದ್ಯೆಯನ್ನು ಬೇರೆ ಯಾರೂ ಕಸಿಯಲು ಸಾಧ್ಯವಿಲ್ಲ. ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದಷ್ಟೇ ನಮ್ಮ ಉದ್ದೇಶ” ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

Sir

ಕರ್ನಾಟಕದಲ್ಲಿ SIR ಜಾರಿ: ನಕಲಿ ಮತದಾರರ ವಿರುದ್ಧ ECI ಬೃಹತ್ ಕಾರ್ಯಾಚರಣೆ

by ಪವಿತ್ರಾ ಗಣಪತಿ
May 14, 2026 - 4:25 pm
0

ಕಾರು

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ

by ಪವಿತ್ರಾ ಗಣಪತಿ
May 14, 2026 - 3:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version