• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 19, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಗತ್ಯ ವಸ್ತುಗಳ ಬೆಲೆ ಏರಿಕೆ, GST ಮೂಲಕ ಜನರ ಜೇಬಿಗೆ ಬಿಜೆಪಿ ಕತ್ತರಿ

ಕಾಂಗ್ರೆಸ್ ಬಡವರಿಗೆ ನೆರವು ನೀಡಿದರೆ, ಬಿಜೆಪಿ ಶ್ರೀಮಂತರ ಸಾಲ ಮನ್ನಾ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 1, 2025 - 11:10 pm
in ಕರ್ನಾಟಕ
0 0
0
Film 2025 05 01t231011.327

“ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಬೆಲೆ ಏರಿಕೆ ವಿರುದ್ಧ ಹಾಗೂ ಸಂವಿಧಾನ ರಕ್ಷಣೆಗೆ ಹುಬ್ಬಳ್ಳಿಯ ಗಿರಿನಿಚಾಳ ಮೈದಾನದಲ್ಲಿ ಗುರುವಾರ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

RelatedPosts

ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಇಂದಿನಿಂದ ತಗ್ಗಲಿದೆ ಮಳೆ: ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

ಗೋವಾಗೆ ಕರೆದೊಯ್ದು ಪ್ರೇಯಸಿಯ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ

ಜಾತಿಗಣತಿ ವಿರುದ್ಧ ತೈಲೇಶ್ವರ ಮಠದ ಪೂರ್ಣನಂದ ಪುರಿ ಮಹಾಸ್ವಾಮೀಜಿ ಕೆಂಡ

ADVERTISEMENT
ADVERTISEMENT

“ಕಾರ್ಮಿಕರ ದಿನದಂದು ಕಾರ್ಮಿಕ ಸಚಿವರ ಜಿಲ್ಲೆಯಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ದೇಶಕ್ಕೆ ದೊಡ್ಡ ಸಂದೇಶ ರವಾನೆಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಜನರ ಆದಾಯ ಪಾತಾಳಕ್ಕೆ ಕುಸಿಯುತ್ತಿದೆ. ಇದಕ್ಕೆ ಕೊನೆಯಾಡಲು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಆದೇಶದಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಯಿತು. ಆದರೆ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಅವರು ಆಕ್ರೋಶ ಪ್ರಾರಂಭಿಸಿದ ದಿನವೇ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ಮಾಡಿದೆ. ಇದರಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾಣುವಂತಾಗಿದೆ” ಎಂದು ತಿಳಿಸಿದರು.

“ನಿಮ್ಮೆಲ್ಲರ ಆಶೀರ್ವಾದದಿಂದ 136 ಸ್ಥಾನಗಳೊಂದಿಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿತು ನಂತರ 2 ಪಕ್ಷೇತರ ಶಾಸಕರ ಬೆಂಬಲ ಹಾಗೂ 2 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಸುಪುತ್ರರನ್ನು ಮಣಿಸಿ ನಮಗೆ 140 ಸ್ಥಾನಗಳನ್ನು ಜನ ಕೊಟ್ಟಿದ್ದಾರೆ. ಆಮೂಲಕ ದೇಶಕ್ಕೆ ಸಂದೇಶ ರವಾನಿಸಿದ್ದಾರೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದೇ ತಿಂಗಳು 20ಕ್ಕೆ ನಿಮ್ಮ ಸರ್ಕಾರಕ್ಕೆ ಎರಡು ವರ್ಷ ಪೂರ್ಣವಾಗಲಿದೆ. ಈ ಸಂಭ್ರಮಾಚರಣೆ ಪ್ರಯುಕ್ತ ವಿಜಯನಗರದಲ್ಲಿ ದೊಡ್ಡ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಹೈಕಮಾಂಡ್ ನಾಯಕರಿಗೂ ಆಹ್ವಾನ ನೀಡಿದ್ದೇವೆ” ಎಂದರು.

“ಕಾರ್ಮಿಕ ದಿನಾಚರಣೆ ಅಂಗವಾಗಿ ಪಕ್ಷದ ಪ್ರಣಾಳಿಕೆಯಂತೆ ಗುರುವಾರದಂದು ಪೌರಕಾರ್ಮಿಕರನ್ನು ಖಾಯಂ ಮಾಡಿ 12,696 ಜನರಿಗೆ ಪ್ರಮಾಣಪತ್ರ ನೀಡಿದ್ದೇವೆ. ಬಿಜೆಪಿ ಸರ್ಕಾರ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಬಡವರಿಗಾಗಿ, ಜನಸಾಮಾನ್ಯರಿಗಾಗಿ ಇಂತಹ ಒಂದೇ ಒಂದು ಕಾರ್ಯಕ್ರಮ ನೀಡಲಿಲ್ಲ. ಬಿಜೆಪಿ ಆಡಳಿತದಲ್ಲಿ ದೊಡ್ಡ ಉದ್ಯಮಿದಾರರು, ಕಾರ್ಖಾನೆ ಮಾಲೀಕರ, ಶ್ರೀಮಂತರ ಸಾವಿರಾರು ಕೋಟಿ ಹಣವನ್ನು ಮನ್ನಾ ಮಾಡುತ್ತಿದ್ದಾರೆ. ನಾವು ಜನರ ಬದುಕು ಕಟ್ಟಲು ವರ್ಷಕ್ಕೆ 52 ಸಾವಿರ ಕೋಟಿ ಮೀಸಲಿಡುತ್ತಿದ್ದೇವೆ. ಆಮೂಲಕ ಬಿಜೆಪಿ ಸರ್ಕಾರ ಶ್ರೀಮಂತರಿಗೆ ನೆರವು ನೀಡುತ್ತಿದ್ದರೆ, ನಿಮ್ಮ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವಾಗುತ್ತಿದೆ. ಉಚಿತವಾಗಿ ವಿದ್ಯುತ್, ಮಹಿಳೆಯರಿಗೆ ತಿಂಗಳಿಗೆ 2 ಸಾವಿರ, ಮಹಿಳೆಯರಿಗೆ ಉಚಿತ ಬಸ್ ಸಾರಿಗೆ, 10 ಕೆ.ಜಿ ಅಕ್ಕಿ, ನಿರುದ್ಯೋಗಿಗಳಿಗೆ ಭತ್ಯೆ ನೀಡಲಾಗುತ್ತಿದೆ. ಇದು ಬೆಲೆ ಏರಿಕೆ ವಿರುದ್ಧ ರಾಹುಲ್ ಗಾಂಧಿ ಅವರು ಪಾದಯಾತ್ರೆ ಮಾಡಿದ ಪ್ರಯೋಜನ” ಎಂದು ತಿಳಿಸಿದರು.

“ಬಿಜೆಪಿ ಆಡಳಿತದಲ್ಲಿ ಎಲ್ಲಾ ವಸ್ತುಗಳ ದರ ಏರಿಕೆಯಾಗುತ್ತಿದೆ. ಚಿನ್ನದ ಬೆಲೆ ಏರಿಕೆಯಿಂದ ಬಡವರು ಮಾಂಗಲ್ಯ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಯುಪಿಎ ಅವಧಿಯಲ್ಲಿ 10 ಗ್ರಾಂ ಚಿನ್ನಕ್ಕೆ 28 ಸಾವಿರ ಇತ್ತು, ಈಗ ಅದು 98 ಸಾವಿರಕ್ಕೆ ತಲುಪಿದೆ. ಬೆಳ್ಳಿ ಕೆ.ಜಿಗೆ 43 ಸಾವಿರದಿಂದ 94 ಸಾವಿರಕ್ಕೆ ಏರಿದೆ. ಕಾಂಗ್ರೆಸ್ ಅವಧಿಯಲ್ಲಿ 1 ಡಾಲರ್ ಮೊತ್ತ 58 ರೂಪಾಯಿ ಇತ್ತು, ಈಗ ಅದು 84 ರೂಪಾಯಿಗೆ ಏರಿದೆ. ಸಿಮೆಂಟ್ 268ರಿಂದ 410, ಕಬ್ಬಿಣ 39 ಸಾವಿರದಿಂದ 73 ಸಾವಿರಕ್ಕೆ ಏರಿದೆ. ಇದರಿಂದಾಗಿ ಬಡವರು ಮನೆ ಕಟ್ಟುವುದು ಅಸಾಧ್ಯವಾಗಿದೆ. ನಮ್ಮ ಸರ್ಕಾರ ಬಡವರಿಗೆ ಆಶ್ರಯ ಅಥವಾ ಇತರೆ ಯೋಜನೆಗಳ ಮೂಲಕ ಬಡವರಿಗೆ ಮನೆ ಕಟ್ಟಿ ಕೊಟ್ಟರೆ, ನಾವು ಕೇಂದ್ರ ಸರ್ಕಾರಕ್ಕೆ ಶೇ 18 ಜಿಎಸ್ಟಿ ಪಾವತಿಸಬೇಕು. ಕೇಂದ್ರ ಸರ್ಕಾರ ವಸತಿ ಯೋಜನೆಗೆ ಕೇವಲ ರೂ.1 ಲಕ್ಷ ಮಾತ್ರ ನೀಡುತ್ತದೆ. ಜಿಎಸ್ ಟಿ ಮೂಲಕ ಅದನ್ನು ವಾಪಸ್ ಕಿತ್ತುಕೊಳ್ಳುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

“ಜಿಎಸ್ಟಿ, ಬೆಲೆ ಏರಿಕೆ ಸೇರಿದಂತೆ ವಿವಿಧ ರೀತಿಯಲ್ಲಿ ಕೇಂದ್ರ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಬಿಜೆಪಿಯ ಈ ಬೆಲೆ ಏರಿಕೆಯಿಂದ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಕಂಡಿದೆ. ನಮ್ಮ ಸರ್ಕಾರ ರೈತರು, ಹಾಲು ಉತ್ಪಾದಕರಿಗೆ ನೆರವು ನೀಡಲು, ಹಾಲಿನ ಬೆಲೆಯಲ್ಲಿ 4 ರೂಪಾಯಿ ಹೆಚ್ಚಿಸಿದರೆ ಅದರ ವಿರುದ್ಧ ಬಿಜೆಪಿ ಜನಾಕ್ರೋಶ ಪ್ರತಿಭಟನೆ ಮಾಡುತ್ತಿದ್ದಾರೆ. ಆಮೂಲಕ ತಮ್ಮ ರೈತ ವಿರೋಧಿ ನೀತಿ ಪ್ರದರ್ಶಿಸುತ್ತಿದ್ದಾರೆ. ಅವರ ಜನಾಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಇರಬೇಕು. ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಮಾಡಲು ಸಾಧ್ಯವಿಲ್ಲ. ಬಿಜೆಪಿ ಹಾಗೂ ದಳದ ಪ್ರತಿಭಟನೆಯಲ್ಲಿ 2 ಸಾವಿರ ಜನರೂ ಇರುತ್ತಿರಲಿಲ್ಲ. ಆದರೆ ನಮ್ಮ ಪ್ರತಿಭಟನಾ ಸಮಾವೇಶದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಸಾವಿರಾರು ಜನ ಸೇರಿದ್ದೀರಿ” ಎಂದು ತಿಳಿಸಿದರು.

“ಸಚಿವ ಸಂತೋಷ್ ಲಾಡ್ ಅವರು ಕಾರ್ಮಿಕರ ಕಲ್ಯಾಣಕ್ಕೆ ಅನೇಕ ಯೋಜನೆ ರೂಪಿಸಿದ್ದಾರೆ, ಹೆಚ್.ಕೆ. ಪಾಟೀಲ್ ಅವರು ಪ್ರವಾಸೋದ್ಯಮ ಇಲಾಖೆಯಲ್ಲಿ ಅನೇಕ ಕ್ರಮ ಕೈಗೊಂಡಿದ್ದಾರೆ, ಲೋಕೋಪಯೋಗಿ ಇಲಾಖೆಯಿಂದ ಹೊಸ ರಸ್ತೆಗಳನ್ನು ಮಾಡಲಾಗುತ್ತಿದೆ. ನೀರಾವರಿ ಇಲಾಖೆಯಿಂದ 22 ಸಾವಿರ ಕೋಟಿ ಹಣ ನೀಡಲಾಗಿದೆ. ಮಹದಾಯಿ ಯೋಜನೆ ವಿಚಾರವಾಗಿ ಬಿಜೆಪಿ ನಾಯಕರು ಇದೇ ಧಾರವಾಡದಲ್ಲಿ ಸಂಭ್ರಮಾಚರಣೆ ಮಾಡಿದರು. ಆದರೂ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ಯಾಕೆ ಕೊಡಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಕೇಳಬಯಸುತ್ತೇನೆ. ನಮ್ಮ ಸರ್ಕಾರ ಈ ಯೋಜನೆ ಜಾರಿ ಮಾಡಲು ಟೆಂಡರ್ ಕರೆದಿದೆ. ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಬಳಿ ಒತ್ತಾಯ ಮಾಡಿದ್ದು, ಕೃಷ್ಣ ನದಿ ನೀರು ಬಳಕೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರು ಇದೇ ತಿಂಗಳು 7ರಂದು ಸಭೆ ನಿಗದಿ ಮಾಡಿದ್ದಾರೆ. ಇದು ನಮ್ಮ ಬದ್ಧತೆ. ಬಡವರಿಗೆ ಸಹಾಯ ಮಾಡಬೇಕು, ರೈತರಿಗೆ ಉಚಿತ ವಿದ್ಯುತ್ ಸೇರಿದಂತೆ ರೈತರಿಗಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಎಲ್ಲಾ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವ ಕಾರ್ಯಕ್ರಮ ನೀಡುತ್ತಾ ಬಂದಿದೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ” ಎಂದು ಹೇಳಿದರು.

“ಇಂದು ನಾವೆಲ್ಲರೂ ಸೇರಿ ಸಂವಿಧಾನ ರಕ್ಷಣೆ ಮಾಡಬೇಕಿದೆ. ಈ ದೇಶದ ಐಕ್ಯತೆ, ಸಮಗ್ರತೆ ಶಾಂತಿ ಕಾಪಾಡಬೇಕು ಎಂದು ನಾವು ಈ ಹೋರಾಟ ಮಾಡುತ್ತಿದ್ದೇವೆ. ಮೊನ್ನೆ ಬೆಳಗಾವಿಯಲ್ಲಿ ನಡೆದ ಸಮಾವೇಶದ ವೇಳೆ ಬಿಜೆಪಿ ಕಾರ್ಯಕರ್ತರು ಗದ್ದಲ ಸೃಷ್ಟಿಸಲು ಪ್ರಯತ್ನಿಸಿದರು. ನಮ್ಮ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರೆ ಮುಂದೆ ರಾಜ್ಯದಲ್ಲಿ ನೀವು ಯಾವುದೇ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡುತ್ತೇನೆ” ಎಂದರು.

“2028ರಲ್ಲಿ ನೀವೆಲ್ಲರು ಮತ್ತೆ ಆಶೀರ್ವದಿಸಿ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದು ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು” ಎಂದು ತಿಳಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 19t153411.848

ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

by ಶಾಲಿನಿ ಕೆ. ಡಿ
June 19, 2025 - 3:38 pm
0

Add a heading (35)

‘ಡ್ರೀಮ್ ಥಿಯೇಟರ್‌’‌ನಲ್ಲಿ ಶಿವಣ್ಣ-ಡಾಲಿ ನ್ಯೂ ‘ಆಪರೇಷನ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 19, 2025 - 2:53 pm
0

Add a heading (34)

ಮರದ ಕೊಂಬೆ ಬಿದ್ದು ಆಸ್ಪತ್ರೆಗೆ ಸೇರಿದ್ದ ಅಕ್ಷಯ್‌ ಸಾವು

by ಸಾಬಣ್ಣ ಎಚ್. ನಂದಿಹಳ್ಳಿ
June 19, 2025 - 2:42 pm
0

Add a heading (33)

ಗೃಹಲಕ್ಷ್ಮಿ ಯೋಜನೆಯಲ್ಲಿ ಪರಿಷ್ಕರಣೆ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ!

by ಸಾಬಣ್ಣ ಎಚ್. ನಂದಿಹಳ್ಳಿ
June 19, 2025 - 2:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 19t153411.848
    ಮುಸ್ಲಿಂ ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ
    June 19, 2025 | 0
  • Untitled design (40)
    ರಾಜ್ಯದಲ್ಲಿ ಇಂದಿನಿಂದ ತಗ್ಗಲಿದೆ ಮಳೆ: ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್
    June 19, 2025 | 0
  • Untitled design 2025 06 18t223448.486
    ಗೋವಾಗೆ ಕರೆದೊಯ್ದು ಪ್ರೇಯಸಿಯ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ
    June 18, 2025 | 0
  • Untitled design 2025 06 18t170533.207
    ಜಾತಿಗಣತಿ ವಿರುದ್ಧ ತೈಲೇಶ್ವರ ಮಠದ ಪೂರ್ಣನಂದ ಪುರಿ ಮಹಾಸ್ವಾಮೀಜಿ ಕೆಂಡ
    June 18, 2025 | 0
  • Web 2025 06 18t141935.858
    ವಾಹನ ಸವಾರರಿಗೆ ಗುಡ್​ನ್ಯೂಸ್: ಹೆದ್ದಾರಿ ಟೋಲ್ ತೊಂದರೆಗೆ ಗುಡ್‌ಬೈ..!
    June 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version