• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರಾವಳಿ ಭಾಗವನ್ನು ಅಭಿವೃದ್ಧಿ ಮಾಡಿ ಮತ್ತೆ ಇತಿಹಾಸ ಸೃಷ್ಟಿಸೋಣ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2025 - 5:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 05 10t170819.817

ಮಂಗಳೂರು: “ಕರಾವಳಿ ಭಾಗದ ಜನ ಪ್ರತಿಭಾವಂತರು, ಬುದ್ಧಿವಂತರು. ಇವರು ಇಲ್ಲೇ ಉದ್ಯೋಗ ಮಾಡುವ ವಾತಾವರಣ ನಿರ್ಮಿಸಬೇಕು. ಇಲ್ಲಿ ಮತ್ತೆ ಶಾಂತಿ ನೆಲೆಸಬೇಕು. ಜನರಲ್ಲಿ ಸಹೋದರತ್ವ ಭಾವನೆ ಮೂಡಿಸಬೇಕು. ಅಭಿವೃದ್ಧಿ ಕೆಲಸಗಳ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಮಂಗಳೂರಿನ ಬಂಗ್ರ ಕೂಳೂರುನಲ್ಲಿ ಶನಿವಾರ ನಡೆದ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ 2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

RelatedPosts

“ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

ADVERTISEMENT
ADVERTISEMENT

“ಇಪ್ಪತ್ತೈದು ವರ್ಷದ ಹಿಂದೆ ಎಸ್ ಎಂ.ಕೃಷ್ಣ ಅವರ ಸಂಪುಟದಲ್ಲಿ ಸಹಕಾರ ಮಂತ್ರಿಯಾಗಿದ್ದ ವೇಳೆ ಈ ಕಾರ್ಯಕ್ರಮದ ಜ್ಯೋತಿ ಬೆಳಗಿಸಿದ್ದೆ. ಅಂದು ಹಚ್ಚಿದ ಹಣತೆ ಲಕ್ಷಾಂತರ ಮಹಿಳೆಯರ ಬಾಳಿನಲ್ಲಿ ಬೆಳಕು ತಂದಿದೆ, ಇನ್ನೂ ಉರಿಯುತ್ತಲೇ ಇದೆ. ʼಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನಸಂಪದಂ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ’ ಎಂಬಂತೆ ಎಲ್ಲರಿಗೂ ಮಂಗಳವಾಗಲಿ, ಶುಭವಾಗಲಿ, ಆರೋಗ್ಯವಂತರಾಗಲಿ, ಐಶ್ವರ್ಯವಂತರಾಗಲಿ, ನೆಮ್ಮದಿಯಿಂದ ಬದುಕಲಿ ಎಂದು ಈ ಜ್ಯೋತಿಯನ್ನು ಮತ್ತೆ ನಾವೆಲ್ಲ ಬೆಳಗಿದ್ದೇವೆ” ಎಂದು ಹೇಳಿದರು.

“ಹೆಣ್ಣು ಕುಟುಂಬದ ಕಣ್ಣು. ಅವರಿಗೆ ಆರ್ಥಿಕ ಶಕ್ತಿ ನೀಡಬೇಕು ಎಂದು ಕೃಷ್ಣ ಅವರ ಸರ್ಕಾರದಲ್ಲಿ ಸ್ತ್ರೀ ಶಕ್ತಿ ಕಾರ್ಯಕ್ರಮ ರೂಪಿಸಿದ್ದೆವು. ರಾಜೇಂದ್ರ ಕುಮಾರ್‌ ಅವರು ಯಾವುದೇ ರಾಜಕೀಯ ಸ್ಥಾನಮಾನದ ನಿರೀಕ್ಷೆ ಇಲ್ಲದೆ ಕರಾವಳಿ ಕ್ಷೇತ್ರದಲ್ಲಿ ಸಹಕಾರಿ ಧುರೀಣರಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಜನರ- ತಾಯಂದಿರ ಸೇವೆ ಮಾಡಬೇಕು. ಎಲ್ಲರಿಗೂ ಆರ್ಥಿಕವಾಗಿ ಶಕ್ತಿ ಕೊಡಬೇಕೆಂದು ನವೋದಯ ಚಾರಿಟೇಬಲ್‌ ಟ್ರಸ್ಟ್‌ ಸ್ಥಾಪಿಸಿದರು” ಎಂದರು.

“ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ. ಪದುಮನಾಭನ ಪಾದ ಭಜನೆ ಪರಮಸುಖವಯ್ಯ ಎಂಬ ಪುರಂದರ ದಾಸರ ಪದಗಳಂತೆ, ಇಷ್ಟು ಜನಸಾಗರದ ತಾಯಂದಿರ ಆಶೀರ್ವಾದ ಪಡೆಯಲು ಈ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ಬಂಗಾರದ ಬೆಲೆ ಕೊಳ್ಳುವವನಿಗೆ ಹಾಗೂ ಮಾರುವವನಿಗೆ ಮಾತ್ರ ಗೊತ್ತು. ಅದೇರೀತಿ ಯಾವ ಕುಟುಂಬ ಬದುಕುತ್ತದೆ, ಯಾವ ಸಂಸಾರ ಬದುಕುತ್ತದೆ, ಇಡೀ ಜೀವನ ಶಾಶ್ವತವಾಗಿ ಉಳಿಯುತ್ತದೆ ಅವರಿಗೆ ಮಾತ್ರ ಹೆಣ್ಣುಮಕ್ಕಳ ಬೆಲೆ ಗೊತ್ತು. ಹೆಣ್ಣುಮಕ್ಕಳ ತ್ಯಾಗ ಅರಿಯಬೇಕು. ಆ ಕುಟುಂಬದ ಶಕ್ತಿಯಾಗಬೇಕು” ಎಂದು ಬಣ್ಣಿಸಿದರು.

“ಲಕ್ಷಾಂತರ ತಾಯಂದಿರು ತಮ್ಮ ಕುಟುಂಬಗಳನ್ನು ಬೆಳೆಸಿ, ದೇಶದ ಆಸ್ತಿಯಾಗಿ ಉಳಿದುಕೊಂಡಿದ್ದಾರೆ. ಇದೇ ನಾರಿ ಶಕ್ತಿ. ನಮ್ಮಲ್ಲಿ ಆಹ್ವಾನ ಪತ್ರಿಕೆ ನೀಡುವಾಗ ಶ್ರೀಮತಿ- ಶ್ರೀ ಎಂದು ಬರೆದಿದ್ದರು. ಶಿವನನ್ನು ಪಾರ್ವತಿ ಪರಮೇಶ್ವರ, ಶ್ರೀನಿವಾಸನನ್ನು ಲಕ್ಷ್ಮೀ- ವೆಂಕಟೇಶ್ವರ ಎನ್ನುತ್ತೇವೆ. ಗಣೇಶನ ಹಬ್ಬಕ್ಕೂ ಮುಂಚೆ ಗೌರಿ ಹಬ್ಬ ಮಾಡುತ್ತೇವೆ, ಭೂಮಿಗೆ ಮಾತೃಭೂಮಿ ಎನ್ನುತ್ತೇವೆ; ಭಾಷೆಗೆ ಮಾತೃಭಾಷೆ ಎನ್ನುತ್ತೇವೆ. ಹೀಗೆ ಮಹಿಳೆಯರಿಗೆ ಆದ್ಯತೆ ನೀಡುವುದು ನಮ್ಮ ಸಂಸ್ಕೃತಿ” ಎಂದರು.

“ನಾನು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನನ್ನ ರಾಜಕೀಯ ಜೀವನ ಆರಂಭಿಸಿದ್ದೆ. ನಂತರ ನಾನು ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕನಾಗಿ, ಸಹಕಾರಿ ಸಚಿವನಾಗಿ ಈಗ ಉಪಮುಖ್ಯಮಂತ್ರಿಯಾಗಿ ಜನರ ಮುಂದೆ ನಿಂತಿದ್ದೇನೆ” ಎಂದು ಹೇಳಿದರು.

“ಪ್ರಯತ್ನಗಳು ವಿಫಲ ಆಗಬಹುದು, ಆದರೆ ಪ್ರಾರ್ಥನೆ ವಿಫಲವಾಗಲ್ಲ. ಪ್ರಾರ್ಥನೆ ಸಲ್ಲಿಸಲು ಎಂದೇ‌ ಕರಾವಳಿ ಪ್ರದೇಶಕ್ಕೆ ಬರುತ್ತೇವ ಸಂತೋಷ ಆಗುತ್ತದೆ. ಈ ಭಾಗದ ಕಟೀಲು, ಧರ್ಮಸ್ಥಳ, ಸುಬ್ರಹ್ಮಣ್ಯದಂಥ ಶಕ್ತಿ ತಾಣವಾಗಿದೆ. ಈ ಪ್ರದೇಶ ಯಾವುದರಲ್ಲೂ ಕಮ್ಮಿ ಇಲ್ಲ, ಶಿಕ್ಷಣ, ಧಾರ್ಮಿಕತೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಇಲ್ಲಿ ಪ್ರಗತಿ ಸಾಧಿಸಲಾಗಿದೆ” ಎಂದರು.

“ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದಾರೆ, ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನ ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ ಜನ ಹೆಚ್ಚು ಬುದ್ಧಿವಂತರು, ವಿದ್ಯಾವಂತರು. ಅತಿಹೆಚ್ಚು ವಿದ್ಯಾವಂತರನ್ನು ಕೊಟ್ಟ ಜಿಲ್ಲೆ ಇದು. ದೇಶದಲ್ಲಿ ಅತಿ ಹೆಚ್ಚು ಬ್ಯಾಂಕುಗಳನ್ನು ಕೊಟ್ಟ ಪುಣ್ಯಭೂಮಿ ಇದು. ಈ ಪರಂಪರೆಯನ್ನು ನೀವು ಉಳಿಸಿಕೊಳ್ಳಬೇಕು” ಎಂದು ತಿಳಿಸಿದರು.

“ಈ ಭಾಗದ ಪ್ರತಿಭಾವಂತರು ಉದ್ಯೋಗಕ್ಕಾಗಿ ಹೊರದೇಶಕ್ಕೆ ಹೋಗುತ್ತಿದ್ದಾರೆ. ವಿದ್ಯಾವಂತ ಯುವಕರು ನಾಡಿನ ಶಕ್ತಿ. ಅವರು ವಿದ್ಯೆ ಪಡೆದು, ಇಲ್ಲೇ ಉದ್ಯೋಗ ಮಾಡುವಂತಾಗಲು ನನ್ನೆಲ್ಲ ಶಾಸಕ ಮಿತ್ರರು ಶ್ರಮಿಸಬೇಕು ಎಂದು ತಿಳಿಸಿದ್ದೇನೆ” ಎಂದರು.

“ಈ ಭೂಮಿಯಲ್ಲಿ ಶಾಂತಿ ನೆಲೆಸ ಬೇಕು. ಎಲ್ಲಾ ಧರ್ಮದವರು ಸಹೋದರ ಭಾವನೆಯಲ್ಲಿ ಬದುಕಬೇಕು. ಧರ್ಮ ಯಾವುದಾದರೇನು ತತ್ವ ಒಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ; ದೇವನೊಬ್ಬ ನಾಮ ಹಲವು. ಅಮ್ಮನ ನೆನಪು ಪ್ರೀತಿಯ ಮೂಲ. ಗುರುವಿನ ನೆನಪು ಜ್ಞಾನದ ಮೂಲ. ಈ ದೇವರ ನೆನಪು ಭಕ್ತಿಯ ಮೂಲ. ಈ ಮೂರರ ನೆನಪು ಮನುಷ್ಯತ್ವಕ್ಕೆ ಮೂಲ. ಮನುಷ್ಯತ್ವ ಮೋಕ್ಷಕ್ಕೆ ಮೂಲ. ಎಲ್ಲರಲ್ಲೂ ಮನುಷ್ಯತ್ವ ಕಾಣಬೇಕು. ತಾಯಂದಿರಿಗೆ ಒಳ್ಳೇದಾಗಬೇಕು, ಆರ್ಥಿಕವಾಗಿ ಶಕ್ತಿ ಕೊಡಬೇಕು. ಹಾಗಿದ್ದಾಗ ಕುಟುಂಬಕ್ಕೆ ಆರ್ಥಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ಕೊಡುತ್ತಾರೆಂದು ರಾಜೇಂದ್ರಕುಮಾರ್‌ ಅವರೂ ನಂಬಿದ್ದಾರೆ” ಎಂದು ತಿಳಿಸಿದರು.

“ಒಬ್ಬನಿಗೆ ಮೀನು ಕೊಟ್ಟರೆ ಒಂದು ಹೊತ್ತು ಊಟಕ್ಕೆ, ಅದೇ ಮೀನುಗಾರಿಕೆ ಕಲಿಸಿದರೆ ಅವನ ಜೀವನಕ್ಕೆ ನೆರವಾಗುತ್ತದೆ ಎಂದು ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್‌ ಯೂನಿಸ್‌ ಹೇಳಿದ್ದರು. ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಅವಕಾಶ ಸಿಕ್ಕಾಗ ಜನರ ಸೇವೆ ಮಾಡಬೇಕು” ಎಂದು ಸಲಹೆ ನೀಡಿದರು.

“ನನಗೆ ಮಹಿಳೆಯರು ಮತ್ತು ಯುವಕರ ಮೇಲೆ ಹೆಚ್ಚಿನ ನಂಬಿಕೆ. ಇವರ ಮೇಲೆ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಈ ಭಾಗದಲ್ಲಿ ಮಹಿಳೆಯರು ಕುಟುಂಬಕ್ಕಾಗಿ ಪಡೆದ ಸಾಲವನ್ನು ಗೃಹಲಕ್ಷ್ಮಿಯಿಂದ ಹಣದಿಂದ ತೀರಿಸುತ್ತಿದ್ದಾರೆ. ಶಕ್ತಿಯಿಂದ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ, 2೦೦ ಯೂನಿಟ್‌ ವರೆಗೂ ಉಚಿತ ವಿದ್ಯುತ್‌, 10 ಕೆ.ಜಿ. ಅಕ್ಕಿ ಕೊಡುತ್ತಿದ್ದೇವೆ. ಕೊಟ್ಟ ಅವಕಾಶದಲ್ಲಿ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ ಬದ್ಧರಾಗಿದ್ದೇವೆ” ಎಂದು ತಿಳಿಸಿದರು.

“ಬ್ಯಾಂಕ್‌ನಲ್ಲಿ ದುಡ್ಡಿದ್ದರೆ ಏನೂ ಪ್ರಯೋಜನ ಇಲ್ಲ. ದುಡ್ಡು- ಬ್ಲಡ್‌ ಎರಡೂ ಜಂಗಮ ಸ್ವರೂಪಿಯಾಗಿರಬೇಕು ಎಂದು ಸಾಯಿಬಾಬಾ ಅವರು ಹೇಳಿದ್ದರು. ಎರಡೂ ಒಂದೇ ಕಡೆ ಇದ್ದರೆ ಸಮಸ್ಯೆ ಹೆಚ್ಚು. ಹಣ ಹರಿದಾಡುತ್ತಿದ್ದರೆ ಆರ್ಥಿಕವಾಗಿ, ದೇಹದಲ್ಲಿ ರಕ್ತ ಚೆನ್ನಾಗಿ ಹರಿದಾಡುತ್ತಿದ್ದರೆ ಆರೋಗ್ಯವಾಗಿರುತ್ತೇವೆ. ಇದೇ ಸಹಕಾರಿ ತತ್ವದ ಮೂಲ. ನಾವೆಲ್ಲರೂ ಒಗ್ಗಟ್ಟಾಗಿ ಈ ಜಿಲ್ಲೆಯ ಪರಂಪರೆ, ಇತಿಹಾಸ ಉಳಿಸಿ, ಗೌರವ ಕಾಪಾಡೋಣ. ಈ ಕರಾವಳಿಯನ್ನು ಅಭಿವೃದ್ಧಿ ಮಾಡಿ ಇತಿಹಾಸದ ಪುಟಕ್ಕೆ ಸೇರಿಸೋಣ. ಈ ರಾಜ್ಯದ ಭವಿಷ್ಯಕ್ಕಾಗಿ ಕೆಲಸ ಮಾಡೋಣ” ಎಂದು ಕರೆಕೊಟ್ಟರು.

“ರಾಜೇಂದ್ರಕುಮಾರ್‌ ಮತ್ತವರ ತಂಡ ಯಾವುದೇ ಅಧಿಕಾರ ಬಯಸದೆ ನಿಮ್ಮ ಸೇವೆ ಮಾಡುತ್ತಾ ಇತಿಹಾಸ ನಿರ್ಮಿಸಿದ್ದಾರೆ. ಜನನ ಉಚಿತ, ಮರಣ ಖಚಿತ. ಹುಟ್ಟು- ಸಾವುಗಳ ನಡುವೆ ಏನಾದರೂ ಮಾಡಬೇಕು ಎಂದು ಹೆಣ್ಣುಮಕ್ಕಳ ಬಾಳಿನಲ್ಲಿ ಜ್ಯೋತಿ ಬೆಳಗಿಸುವ ಕೆಲಸ ಇವರು ಮಾಡಿದ್ದಾರೆ. ಸರ್ಕಾರದ ಪರವಾಗಿ ಅವರಿಗೆ ತುಂಬು ಹೃದಯದಿಂದ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T164143.948

“ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ

by ಶಾಲಿನಿ ಕೆ. ಡಿ
January 18, 2026 - 4:43 pm
0

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 18T164143.948
    “ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ
    January 18, 2026 | 0
  • Untitled design 2026 01 18T155435.248
    Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್
    January 18, 2026 | 0
  • BeFunky collage 2026 01 18T123800.070
    ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಕೌಂಟ್‌ಡೌನ್ ಶುರು
    January 18, 2026 | 0
  • BeFunky collage 2026 01 18T115912.355
    ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚ ಸುದೀಪ್ ಅಚ್ಚರಿ ಪೋಸ್ಟ್
    January 18, 2026 | 0
  • BeFunky collage 2026 01 18T073854.066
    ಸ್ಟ್ರಾಂಗ್ ಕೋರ್ ಬೇಕಾ? ಈ 4 ಮ್ಯಾಜಿಕ್ ಯೋಗಾಸನಗಳು ಮನೆಯಲ್ಲೇ ಮಾಡಿ
    January 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version