ರಾಜ್ಯದ ರೈತರಿಗೆ ಸಿಹಿ ಸುದ್ದಿ: ತುಂತುರು ನೀರಾವರಿಗೆ ಅರ್ಜಿ ಘಟಕಗಳಿಗೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆ

111 (9)

ಕರ್ನಾಟಕದ ಕೃಷಿ ಇಲಾಖೆಯು 2025-26ನೇ ಸಾಲಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗಾಗಿ ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯು ರೈತರಿಗೆ ಆಧುನಿಕ ನೀರಾವರಿ ತಂತ್ರಜ್ಞಾನದ ಮೂಲಕ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳು:

ರೈತರು ಈ ಕೆಳಗಿನ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು:

ADVERTISEMENT
ADVERTISEMENT
ಎಫ್.ಐ.ಡಿ. ಕಡ್ಡಾಯ:

ರೈತರು ಕಡ್ಡಾಯವಾಗಿ ಫಾರ್ಮರ್ ಐಡಿ (ಎಫ್.ಐ.ಡಿ.) ಹೊಂದಿರಬೇಕು. ಎಫ್.ಐ.ಡಿ. ಇಲ್ಲದಿದ್ದರೆ, ತಮ್ಮ ಎಲ್ಲಾ ಪಹಣಿಗಳನ್ನು ಎಫ್.ಐ.ಡಿ.ಗೆ ಜೋಡಣೆ ಮಾಡಿಕೊಳ್ಳಬೇಕು. ಈಗಾಗಲೇ ಎಫ್.ಐ.ಡಿ. ಹೊಂದಿರುವವರು ತಮ್ಮ ದಾಖಲೆಗಳನ್ನು ಪರಿಶೀಲಿಸಿಕೊಂಡು, ಈ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಕೃಷಿ ಚಟುವಟಿಕೆಗಳನ್ನು ಉನ್ನತೀಕರಿಸಿಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version