• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಿಂದೂ ಸಮಾಜೋತ್ಸವದ ವೇಳೆ ಡ್ರೋನ್ ಪತ್ತೆ: ಜನರಲ್ಲಿ ಹೆಚ್ಚಿದ ಆತಂಕ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 11:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 29T230857.681

ದೊಡ್ಡಬಳ್ಳಾಪುರ, ಜನವರಿ 29: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪಾಲನಜೋಗಹಳ್ಳಿ ಪ್ರದೇಶದಲ್ಲಿ ಅಪರಿಚಿತ ಡ್ರೋನ್ ಪತ್ತೆಯಾಗಿದೆ. ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲೇ ಮನೆ ಸಮೀಪ ಖಾಲಿ ಜಮೀನಿನಲ್ಲಿ ವಿಮಾನ ಮಾದರಿಯ ಡ್ರೋನ್ ಬಿದ್ದಿರುವುದು ಕಂಡುಬಂದಿದ್ದು, ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸ್ಥಳೀಯರು ಡ್ರೋನ್ ಅನ್ನು ಕಂಡ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬ್ಯಾಟರಿಗಳು ಮತ್ತು ಎಲೆಕ್ಟ್ರಿಕ್ ವೈರ್‌ಗಳಿಂದ ಜೋಡಿಸಲ್ಪಟ್ಟಿದ್ದ ಈ ಡ್ರೋನ್ ಯಾವುದೇ ಅಪಾಯಕಾರಕ ವಸ್ತುಗಳನ್ನು ಒಳಗೊಂಡಿದೆಯೇ ಎಂಬ ಶಂಕೆಯಿಂದ ಪೊಲೀಸ್ ಎಕ್ಸ್‌ಪರ್ಟ್ಸ್ ತಂಡವನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಯಿತು.

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ADVERTISEMENT
ADVERTISEMENT

ಸುಮಾರು ಎರಡರಿಂದ ಮೂರು ಗಂಟೆಗಳ ಕಾಲ ಡ್ರೋನ್ ಅನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ ತಜ್ಞರ ತಂಡ, ಯಾವುದೇ ಸ್ಫೋಟಕ ವಸ್ತುಗಳು ಇಲ್ಲವೆಂದು ಪ್ರಾಥಮಿಕ ವರದಿ ನೀಡಿದೆ. ಆದರೂ, ಯಾವುದೇ ಅಪಾಯವನ್ನು ನಿರ್ಲಕ್ಷ್ಯ ಮಾಡದೆ, ಡ್ರೋನ್ ಅನ್ನು ಸಂಪೂರ್ಣವಾಗಿ ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಲಾಗಿದೆ.

ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ನಗರದಲ್ಲಿ ಸಂಭ್ರಮದಿಂದ ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಮನೆ ಮೇಲ್ಛಾವಣಿಯ ಬಳಿ ಹಾರುತ್ತಾ ಬಂದ ಡ್ರೋನ್ ಏಕಾಏಕಿ ನಿಯಂತ್ರಣ ತಪ್ಪಿ ಖಾಲಿ ಜಮೀನಿನಲ್ಲಿ ಬಿದ್ದಿದೆ. ಈ ದೃಶ್ಯವನ್ನು ಕಂಡ ಜನರು ಭಯಭೀತರಾಗಿ ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ.

ಪೊಲೀಸರು ಡ್ರೋನ್ ಯಾವ ಸ್ಥಳದಿಂದ ಬಂದಿತು, ಇದನ್ನು ಯಾರು ನಿಯಂತ್ರಿಸುತ್ತಿದ್ದರು, ಇದರ ಉದ್ದೇಶ ಏನು ಎಂಬುದರ ಬಗ್ಗೆ ಆಳವಾದ ತನಿಖೆ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಡ್ರೋನ್ ಹಾರಿದ ಮಾರ್ಗ ಮತ್ತು ಅದರ ಮೂಲವನ್ನು ಪತ್ತೆ ಹಚ್ಚಲು ತಾಂತ್ರಿಕ ತಜ್ಞರ ಸಹಾಯ ಪಡೆಯಲಾಗುತ್ತಿದೆ.

ಬೆಳಗಾವಿ ಆಕಾಶದಲ್ಲಿ ಕಂಡ ನಿಗೂಢ ಆಕೃತಿ: ಏಲಿಯನ್ಸ್ ಅಥವಾ ಯುಎಫ್‌ಒ..?

ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಿನ್ನೆ ಸಂಜೆ ಒಂದು ವಿಚಿತ್ರವಾದ ವಸ್ತುವೊಂದು ಕಾಣಿಸಿದೆ. ಸಂಜೆ ವೇಳೆ ಆಕಾಶದಲ್ಲಿ ಕಾಣಿಸಿಕೊಂಡ ನಿಗೂಢ ಆಕೃತಿಯೊಂದು (Unidentified Flying Object – UFO) ಜನರಲ್ಲಿ ಭಾರೀ ಕುತೂಹಲ ಮಾತ್ರವಲ್ಲದೆ, ಒಂದು ರೀತಿಯ ನಿಗೂಢ ಆತಂಕವನ್ನೂ ಸೃಷ್ಟಿಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಈ ನಿಗೂಢ ವಸ್ತು ಸ್ಥಿರವಾಗಿ ಮತ್ತು ನಿಧಾನವಾಗಿ ಚಲಿಸಿರುವುದು ಸದ್ಯ ಜಿಲ್ಲೆಯಾದ್ಯಂತ ಚರ್ಚೆಯ ವಿಷಯವಾಗಿದೆ.

ಗ್ರಾಮಸ್ಥರಲ್ಲಿ ಮೂಡಿದ ಆತಂಕ..!

ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ತೆಲಸಂಗ ಗ್ರಾಮದ ಕೆಲವರು ಮೊದಲು ಆಕಾಶದಲ್ಲಿ ಅತಿ ಹೆಚ್ಚು ಪ್ರಕಾಶಮಾನವಾಗಿ ಹೊಳೆಯುತ್ತಿದ್ದ ಗೋಲಾಕಾರದ ವಸ್ತುವನ್ನು ಗಮನಿಸಿದರು. ಆರಂಭದಲ್ಲಿ ಇದು ಯಾವುದೋ ನಕ್ಷತ್ರ ಅಥವಾ ವಿಮಾನವಿರಬಹುದು ಎಂದು ಭಾವಿಸಲಾಗಿತ್ತು. ಆದರೆ, ಆ ವಸ್ತುವು ವಿಮಾನಕ್ಕಿಂತ ಭಿನ್ನವಾಗಿ ಒಂದೇ ಕಡೆ ಸ್ಥಿರವಾಗಿ ನಿಂತಿರುವುದು ಮತ್ತು ಅದರ ವಿಚಿತ್ರ ಆಕಾರವನ್ನು ಕಂಡಾಗ ಜನರಿಗೆ ಅನುಮಾನ ಶುರುವಾಯಿತು. ಕ್ಷಣಾರ್ಧದಲ್ಲಿ ಈ ಸುದ್ದಿ ಗ್ರಾಮದಾದ್ಯಂತ ಹರಡಿ, ನೂರಾರು ಜನರು ರಸ್ತೆ ಮತ್ತು ಮನೆಯ ಮಹಡಿಗಳ ಮೇಲೆ ನಿಂತು ಆಕಾಶದತ್ತ ಕಣ್ಣಿಟ್ಟು ನೋಡತೊಡಗಿದರು.

ಏನಿದು ನಿಗೂಢ ವಸ್ತು?

ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ಆಕೃತಿಯು ಗೋಲಾಕಾರದಲ್ಲಿದ್ದು, ಆಗಾಗ್ಗೆ ತನ್ನ ಹೊಳಪನ್ನು ಬದಲಾಯಿಸುತ್ತಿತ್ತು. ಕೆಲವೊಮ್ಮೆ ಮೋಡಗಳ ನಡುವೆ ಮರೆಯಾಗುತ್ತಾ, ಮತ್ತೆ ಪ್ರತ್ಯಕ್ಷವಾಗುತ್ತಾ ಗ್ರಾಮಸ್ಥರನ್ನು ಬೆರಗುಗೊಳಿಸಿದೆ. ನಮ್ಮ ಗ್ರಾಮಕ್ಕೆ ಏಲಿಯನ್ಸ್ (Aliens) ಬಂದಿರಬಹುದು ಅಥವಾ ಇದು ಇತರೆ ಬೇರೆ ಗ್ರಹ ಜೀವಿಗಳ ಹಾರುವ ತಟ್ಟೆ ಇರಬಹುದು ಎಂಬಂತಹ ಗಾಳಿ ಸುದ್ದಿಗಳು ಹರಡಿತ್ತು. ಅನೇಕ ಯುವಕರು ಈ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಜ್ಞಾನಿಗಳ ಮತ್ತು ಅಧಿಕಾರಿಗಳ ಅಭಿಪ್ರಾಯವೇನು ?

ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ತಾಂತ್ರಿಕ ಮಾಹಿತಿ ಲಭ್ಯವಾಗಿಲ್ಲ. ಹವಾಮಾನ ಇಲಾಖೆಯ ಬಲೂನ್ ಆಗಿರಬಹುದೇ ಅಥವಾ ಯಾವುದೋ ಸಂಶೋಧನಾ ಉಪಗ್ರಹದ ಭಾಗವೇ ಎಂಬ ಬಗ್ಗೆ ಸ್ಪಷ್ಟನೆ ಸಿಗಬೇಕಿದೆ. ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತಿರುವ ಸ್ಥಳೀಯ ಅಧಿಕಾರಿಗಳು, ಇದು ಯಾವುದೇ ಅಪಾಯಕಾರಿ ವಸ್ತುವಲ್ಲದಿದ್ದರೂ ಇರಬಹುದು, ಜನರು ವದಂತಿಗಳಿಗೆ ಕಿವಿಗೊಡಬಾರದು. ವಿಜ್ಞಾನಿಗಳ ಸಲಹೆ ಪಡೆದು ಇದರ ಮೂಲ ತಿಳಿಯಲಾಗುವುದು ಎಂದು ಮನವಿ ಮಾಡಿದ್ದಾರೆ.

ಆಕಾಶದಲ್ಲಿ ಕಾಣಿಸಿಕೊಂಡ ಆ ಹೊಳೆಯುವ ವಸ್ತು ನಿಜಕ್ಕೂ ಏಲಿಯನ್ಸ್ ತಟ್ಟೆಯೇ ಅಥವಾ ಏನಿದು ಎಂದು ಜನರು ಕುತೂಹಲ ವ್ಯಕ್ರಪಡಿಸಿದ್ದಾರೆ ಈ ಬಗ್ಗೆ ವಿಜ್ಞಾನಿಗಳು ಏನು ಹೇಳುತ್ತಾರೆ ಕಾದು ನೋಡಬೇಕಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version