ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ : ಸಚಿವ ಡಾ.ಎಂ.ಸಿ ಸುಧಾಕರ್!

Befunky collage 2025 03 12t085112.188

ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಕಶಾಲಪ್ಪ,, ಭೋಜನಗೌಡ, ಶಶೀಲ್ ನಮೋಶಿ ಮುಂತಾದವರು ಕೊಡಗು ಜಿಲ್ಲೆಯಲ್ಲಿ ರಚನೆಗೊಂಡಿರುವ ವಿಶ್ವವಿದ್ಯಾಲಯಕ್ಕೆ ಕಳೆದ 2 ವರ್ಷಗಳಿಂದ ಸರ್ಕಾರ ಯಾವುದೇ ಅನುದಾನ ನೀಡದೆ ಅದರ ಅವನತಿಗೆ ಕಾರಣವಾಗುತ್ತಿದೆ ಎಂಬುದರ ಕುರಿತು ನಿಯಮ 72 ರಡಿಯಲ್ಲಿ ಕೋರಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಕೊಡಗು ಸೇರಿದಂತೆ ನೂತನವಾಗಿ ಸ್ಥಾಪಿಸಲ್ಪಟ್ಟ 7 ವಿಶ್ವವಿದ್ಯಾಲಯಗಳ
ಜೊತೆಗೆ ಹಾಲಿ ಇರುವ ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿಯನ್ನು ಪರಾಮರ್ಶಿಸಿ ಸೂಕ್ತ ಶಿಫಾರಸ್ಸು ಮಾಡಲು ಉಪಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಿದ್ದು, ಈ ಬಗ್ಗೆ ಸಭೆ ನಡೆದಿರುತ್ತದೆ.

ADVERTISEMENT
ADVERTISEMENT

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೆಲವು ವಿ.ವಿ ಗಳನ್ನು ವಿಲೀನ ಮಾಡುವುದು, ಹಂತ ಹಂತವಾಗಿ ಖಾಲಿ ಹುದ್ದೆ ಭರ್ತಿ, ಹೆಚ್ಚಿನ ಅನುದಾನದ ಅಗತ್ಯತೆ ಸೇರಿದಂತೆ ವಿ.ವಿ ಗಳ ಬಲವರ್ಧನೆಗೆ ವಿಸ್ತೃತವಾದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು

ಮುಂದುವರೆದು, ಉಪನ್ಯಾಸಕರ ನೇಮಕ, ನಿವೃತ್ತರ ಪಿಂಚಣಿಗೆ ಅನುದಾನ, ಮುಂತಾದವುಗಳ ಬಗ್ಗೆ ಶೀಘ್ರವಾಗಿ ಗಮನ ಹರಿಸಲಾಗುವುದೆಂದರು

Exit mobile version