ಗ್ರೇಟರ್ ಬೆಂಗಳೂರು ಅಧಿಕಾರ ಚುನಾವಣೆ: ಬಿಜೆಪಿ ಅಭಿಯಾನಕ್ಕೆ 11 ಸಂಯೋಜಕರ ನೇಮಕ

Untitled design 2025 10 23t231839.484

ಬೆಂಗಳೂರು: ಗ್ರೇಟರ್ ಬೆಂಗಳೂರು ರಚನೆಯ ನಂತರ ನಡೆಯಲಿರುವ ಅಧಿಕಾರ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿರುವ ಬಿಜೆಪಿ, ಪಕ್ಷದ ಸಂಘಟನೆಯನ್ನು ಬಲಪಡಿಸಲು 11 ಮಂದಿ ಸಂಯೋಜಕರನ್ನು ನೇಮಕ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನೇಮಕಾತಿಗಳನ್ನು ಅನುಮೋದಿಸಲಾಗಿದೆ.

ನೇಮಕ ಮಾಡಲಾದ 11 ಸಂಯೋಜಕರ ತಂಡದಲ್ಲಿ ಹಲವಾರು ಶಾಸಕರು ಮತ್ತು ವಿಧಾನಪರಿಷತ್ ಸದಸರನ್ನು ಸೇರಿಸಲಾಗಿದೆ. ಈ ತಂಡದಲ್ಲಿ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಎಸ್. ಸುರೇಶ್ ಕುಮಾರ್, ಡಿ.ವಿ. ಸದಾನಂದ ಗೌಡ, ಪಿ.ಸಿ. ಮೋಹನ್, ಸಿ.ಎನ್. ಮಂಜುನಾಥ್, ತೇಜಸ್ವಿ ಸೂರ್ಯ, ಡಾ. ಕೆ. ಸುಧಾಕರ್ ಮತ್ತು ಎನ್.ಎಸ್. ನಂದೀಶ್ ರೆಡ್ಡಿ ಅವರುಗಳು ಸೇರಿದ್ದಾರೆ.


ಗ್ರೇಟರ್ ಬೆಂಗಳೂರಿನ ಐದು ಪಾಲಿಕೆಗಳಿಗೆ ಸಂಘಟನಾತ್ಮಕ ಸಂಯೋಜಕರನ್ನು ನೇಮಕ ಮಾಡಲಾಗಿದೆ:

ಅಕ್ಟೋಬರ್ 23ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ತಯಾರಿಗಳನ್ನು ವಿವರವಾಗಿ ಚರ್ಚಿಸಿದ್ದಾರೆ. ಸಭೆಯಲ್ಲಿ ಯಾರಿಗೆ ಯಾವ ರೀತಿಯ ಜವಾಬ್ದಾರಿ ಹಂಚಿಕೆ ಮಾಡಬೇಕು ಎಂಬ ವಿಚಾರವನ್ನೂ ಗಮನದಲ್ಲಿಟ್ಟುಕೊಂಡು ಚರ್ಚೆ ನಡೆಸಲಾಗಿದೆ.

ಗ್ರೇಟರ್ ಬೆಂಗಳೂರು ರಚನೆಯೊಂದಿಗೆ ನಗರದ ಆಡಳಿತ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆಗಳಾಗಲಿವೆ. ಹೊಸ ಅಧಿಕಾರ ರಚನೆಗೆ ನಡೆಯಲಿರುವ ಚುನಾವಣೆಗಳು ರಾಜಕೀಯ ಪಕ್ಷಗಳಿಗೆ ಅತ್ಯಂತ ಮಹತ್ವದ್ದಾಗಿದೆ. 

Exit mobile version