• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯಸಭೆಯಲ್ಲಿ ಮತ್ತೆ ಅಬ್ಬರಿಸಿದ ಹೆಚ್.ಡಿ ದೇವೇಗೌಡರು

ಕರ್ನಾಟಕದ ರೈಲ್ವೆ ಯೋಜನೆಗಳಿಗೆ ವೇಗ ನೀಡಲು ಹೆಚ್‌ಡಿಡಿ ಆಗ್ರಹ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2025 - 8:42 pm
in Flash News, ಕರ್ನಾಟಕ
0 0
0
111 (26)

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರವನ್ನು ಕೋರಿದರು.

ರಾಜ್ಯಸಭೆಯಲ್ಲಿ ರೇಲ್ವೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಕರ್ನಾಟಕದ ರೈಲ್ವೆ ಯೋಜನೆಗಳ ಅಗತ್ಯವನ್ನು ಒತ್ತಿ ಹೇಳಿದರು.

RelatedPosts

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ADVERTISEMENT
ADVERTISEMENT

ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೇಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಆದಾಗ್ಯೂ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೇಲ್ವೆ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು ₹800 ಕೋಟಿಯಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ನರೇಂದ್ರ ಮೋದಿ ಅವರ ಆಡಳಿತದ ಅಡಿಯಲ್ಲಿ ರಾಜ್ಯದ ಅನೇಕ ರೇಲ್ವೆ ಯೋಜೆಗಳಿಗೆ ಮರು ಚಾಲನೆ ಸಿಕ್ಕಿದೆ. ಆದಾಗ್ಯೂ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಮತ್ತು ಬೆಂಗಳೂರಿನಿಂದ ಭಾರತದ ಇತರೆ ಭಾಗಗಳಿಗೆ ಸಂಪರ್ಕ ಸೇರಿದಂತೆ ಹಲವಾರು ಯೋಜನೆಗಳು ಕಾರ್ಯರೂಪಕ್ಕೆ ಬಾರದೆ ಇನ್ನೂ ಬಾಕಿ ಉಳಿದಿವೆ. ಇವುಗಳ ಕಡೆ ರೇಲ್ವೆ ಸಚಿವರು ತಕ್ಷಣ ಗಮನ ಹರಿಸಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು.

ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ರೇಲ್ವೆ ಯೋಜನೆಗಳನ್ನು ಮತ್ತಷ್ಟು ವೇಗಗೊಳಿಸುವಂತೆ ಸರ್ಕಾರವನ್ನು ಪದೇ ಪದೆ ಮನವಿ ಮಾಡಿದ ಅವರು; ರೈಲ್ವೆ ಸಂಪರ್ಕವು ಸಾಮಾನ್ಯ ನಾಗರಿಕರಿಗೆ ಕೈಗೆಟುಕುವ ಪ್ರಯಾಣಕ್ಕೆ ಕಾರಣವಾದ ಕೆಲ ಮಹತ್ವದ ಅಂಶಗಳನ್ನು ಉದಾಹರಣೆ ಸಮೇತವಾಗಿ ಉಲ್ಲೇಖಿಸಿದರು.

ಹಾಸನದಿಂದ ಮೈಸೂರಿಗೆ ರೇಲಿನಲ್ಲಿ ಪ್ರಯಾಣ ಮಾಡಿದರೆ ಟಿಕೆಟ್ ವೆಚ್ಚ ₹30 ಆಗುತ್ತದೆ. ಆದರೆ ಬಸ್ ದರಗಳು ಬಹುತೇಕ ಎರಡು ಪಟ್ಟು ಮೂರು ಪಟ್ಟು ಹೆಚ್ಚಾಗಿರುತ್ತವೆ. ಇದಕ್ಕಾಗಿಯೇ ರೇಲ್ವೆ ಯೋಜನೆಗಳ ವಿಸ್ತರಣೆ ಪೂರ್ಣ ವೇಗದಲ್ಲಿ ಮುಂದುವರಿಯಬೇಕು ಎಂದು ಅವರು ಪ್ರತಿಪಾದಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ರೇಲ್ವೆ ಕ್ಷೇತ್ರದಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಮಾಜಿ ಪ್ರಧಾನಿಗಳು ಮುಕ್ತಕಂಠದಿಂದ ಶ್ಲಾಘಿಸಿದರು. ತಮ್ಮ ಅನುಭವದಿಂದ ಹೇಳುತ್ತಿದ್ದೇನೆ, ಕಳೆದ ಎಪ್ಪತ್ತೈದು ವರ್ಷಗಳ ಅಭಿವೃದ್ಧಿಯನ್ನು ಪರಿಶೀಲನೆ ಮಾಡಿ ನೋಡಿದಾಗ ಹತ್ತು ವರ್ಷಗಳ ಅಭಿವೃದ್ಧಿ ಕಣ್ಣಿಗೆ ಕಟ್ಟುವಂತೆ ಕಾಣುತ್ತದೆ ಎಂದು ಅವರು ಹೇಳಿದರು.

ಹಿಂದೆ ಅನುಮೋದನೆ ಪಡೆಯಲು ವರ್ಷಗಳೇ ಹಿಡಿಯುತ್ತಿದ್ದ ರೈಲ್ವೆ ಯೋಜನೆಗಳು ಈಗ ಅಭೂತಪೂರ್ವ ವೇಗದಲ್ಲಿ ಕಾರ್ಯಗತಗೊಳ್ಳುತ್ತಿವೆ ಎಂದ ಅವರು; ತಮ್ಮ ಅಧಿಕಾರಾವಧಿಯಲ್ಲಿ ರೈಲ್ವೆ ಅನುದಾನ ಹಂಚಿಕೆ, ಯೋಜನೆಗಳ ಜಾರಿ ಇತ್ಯಾದಿ ಅಂಶಗಳನ್ನು ನೆನಪು ಮಾಡಿಕೊಂಡರು, ಅಲ್ಲದೆ; ಆಗ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮತ್ತು ನಿಧಾನಗತಿಯ ಯೋಜನಾ ಅನುಷ್ಠಾನ ಪರಿಸ್ಥಿತಿಯನ್ನು ನೆನಪಿಸಿಕೊಂಡರು. ಇದಕ್ಕೆ ವ್ಯತಿರಿಕ್ತವಾಗಿ, ದೇಶಾದ್ಯಂತ ರೈಲ್ವೆ ಅಭಿವೃದ್ಧಿಯನ್ನು ಪರಿವರ್ತಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಸ್ಪಷ್ಟ ದೃಷ್ಟಿಕೋನದೊಂದಿಗೆ ಮುನ್ನಡೆಯುತ್ತಿದೆ ಎಂದು ಹೇಳಿದರು.

ರೈಲ್ವೆ ವಿಸ್ತರಣೆ ಮತ್ತು ಸುರಕ್ಷತೆಯಲ್ಲಿ ಗಮನಾರ್ಹ ಸುಧಾರಣೆಗಳು ಕಂಡುಬಂದಿವೆ ಎಂದು ದೇವೇಗೌಡರು; ಕೆಲ ಅಂಶಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದರು.

ಹಿಂದೆ, ಆಧುನಿಕ ಮೂಲಸೌಕರ್ಯಗಳ ಕೊರತೆಯಿಂದಾಗಿ ರೇಲ್ವೆ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿದ್ದವು. ಆದರೆ ಇಂದು ಸುರಕ್ಷತಾ ಮಾನದಂಡಗಳು ಗಮನಾರ್ಹವಾಗಿ ಸುಧಾರಿಸಿವೆ ಎಂದು ಅವರು ಹೇಳಿದರು. ಇದಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರಯತ್ನಗಳು ಕಾರಣ ಎಂದ ಅವರು, ಸಚಿವರನ್ನು ಅವರನ್ನು “ರಾಷ್ಟ್ರದ ಪ್ರಗತಿಗೆ ಬದ್ಧರಾಗಿರುವ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮಿ ನಾಯಕ” ಎಂದು ಬಣ್ಣಿಸಿದರು.

ಅಲ್ಲದೆ, ಭಾರತದ ರೇಲ್ವೆ ಬೆಳವಣಿಗೆಯನ್ನು ಚೀನಾ, ರಷ್ಯಾ, ಕೆನಡಾ ಮತ್ತು ಆಸ್ಟ್ರೇಲಿಯಾದೊಂದಿಗೆ ಹೋಲಿಸಿ ವಿವರಿಸಿದರು. ಭಾರತದ ಪ್ರಗತಿ ಈಗ ಜಾಗತಿಕ ಮಾನದಂಡಗಳಿಗೆ ಸಮನಾಗಿದೆ ಎಂದರಲ್ಲದೆ, ರೇಲ್ವೆ ಮಾರ್ಗಗಳ ವಿಸ್ತರಣೆ, ವಿದ್ಯುದೀಕರಣ ಮತ್ತು ಸರಕು ಸಾಗಣೆ ಕಾರಿಡಾರ್‌ಗಳ ಅಭಿವೃದ್ಧಿ ಗಮನಾರ್ಹವಾಗಿ ಆಗಿದೆ ಎಂದರು ಮೆಚ್ಚುಗೆ ವ್ಯಕ್ತಪಡಿಸಿದರು.

ದೇವೇಗೌಡರು ರೈಲ್ವೆ ಆಧುನೀಕರಣಕ್ಕೆ ಮೋದಿ ಅವರ ಸರ್ಕಾರವು ತೋರಿದ ಬದ್ಧತೆಗೆ ಅಭಿನಂದನೆ ಸಲ್ಲಿಸಿದ ಅವರು; ಕರ್ನಾಟಕದಲ್ಲಿ ಬಾಕಿ ಇರುವ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ಒತ್ತಿ ಹೇಳಿದರು. ತಮ್ಮ ಸಲಹೆಗಳು ಟೀಕಿಸುವ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ಎಲ್ಲಾ ಪ್ರದೇಶಗಳಲ್ಲಿ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಆಶಯವನ್ನು ಹೊಂದಿವೆ ಎಂದು ಅವರು ಪುನರುಚ್ಚರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (2)

ಚಿಕ್ಕಣ್ಣ ಮದುವೆಸಂಭ್ರಮ ಜೋರು: ಪಾವನಾ ಮನೆಯಲ್ಲಿ ಅರಿಶಿಣ ಶಾಸ್ತ್ರದ ಸಂಭ್ರಮ!

by ಕವಿತಾ
August 27, 2026 - 6:36 pm
0

ಸರ್ಟಿಫಿಕೇಟ್ (1)

ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

by ಕವಿತಾ
August 27, 2026 - 6:31 pm
0

ಸರ್ಟಿಫಿಕೇಟ್

ಪ್ರಭಾಸ್ ಸ್ಪಿರಿಟ್‌‌ಗೆ A ಸರ್ಟಿಫಿಕೇಟ್.. ವಂಗಾ ಕೊಟ್ರು ಕ್ಲ್ಯಾರಿಟಿ

by ಕವಿತಾ
August 27, 2026 - 6:21 pm
0

Untitled design (63)

ನೇಪಾಳ ಪ್ರವಾಹ: 288 ಭಾರತೀಯರು ನಾಪತ್ತೆ, ಮಾಹಿತಿ ಹಂಚಿಕೊಂಡ MEA

by ಕವಿತಾ
August 27, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version