• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿರುವ ಪ್ರಧಾನಿ ಮೋದಿ : ಬಸವರಾಜ ಬೊಮ್ಮಾಯಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2025 - 4:58 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design 2025 04 11t165624.395

ಹಾವೇರಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿದ್ದು, ಕಳೆದ ಹತ್ತು ವರ್ಷದಲ್ಲಿ ರೈಲ್ವೆ ಆದಾಯ ನಾಲ್ಕು ಪಟ್ಟು ಹೆಚ್ಚಳವಾಗಿದ್ದು, ರೈಲ್ವೆ ಇಲಾಖೆ ಲಾಭದ ಹಳಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಶನಿವಾರ ಇಂದು ಹಾವೇರಿಯ ಶ್ರೀ‌ ಮೈಲಾರ ಮಹಾದೇವಪ್ಪ ರೈಲ್ವೆ ನಿಲ್ದಾಣದಲ್ಲಿ ನೈಋತ್ಯ ರೈಲ್ವೆ ವಲಯದ ವತಿಯಿಂದ ಏರ್ಪಡಿಸಿದ್ದ ವಂದೇ ಭಾರತ ರೈಲು ನಿಲುಗಡೆ ಸಮಾರಂಭದಲ್ಲಿ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.‌ಸೋಮಣ್ಣ ಅವರೊಂದಿಗೆ ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.

RelatedPosts

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

ADVERTISEMENT
ADVERTISEMENT

ನಾನು ಲೋಕಸಭೆಗೆ ಆಯ್ಕೆಯಾದ ಮೇಲೆ ಹಲವಾರು ರೈಲ್ವೆ ಯೋಜನೆಗಳ ಬಗ್ಗೆ ಸಭೆ ಮಾಡುತ್ತಿದ್ದೇವು. ಹಲವಾರು ಓವರ್ ಬ್ರಿಡ್ಜ್, ಅಂಡರ್ ಬ್ರಿಡ್ಜ್ ಮಾಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವು‌ ಹಾವೇರಿಯಲ್ಲಿ ವಂದೇ ಭಾರತ ರೈಲು ನಿಲ್ಲಿಸಬೇಕೆಂಬ ಬೇಡಿಕೆ ಇತ್ತು. ಪ್ರತಿ ನಿತ್ಯ ನೂರಾರು ಜನ ಬೆಂಗಳೂರಿಗೆ ಪ್ರಯಾಣ ಮಾಡುತ್ತಾರೆ. ಹಾವೇರಿ, ಬ್ಯಾಡಗಿ, ರಾಣೆಬೆನ್ನೂರಿನಿಂದ ಪ್ರತಿ ದಿನ ಹತ್ರು ಸಾವಿರ ಕೋಟಿ ರೂ. ವ್ಯವಹಾರ ನಡೆಯುತ್ತಿದೆ. ಅದನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ತಿಳಿಸಿದೆ. ಅವರು ಸಕಾರಾತ್ಮಕವಾಗಿ ಯೋಚಿಸುತ್ತಾರೆ.

ಸುಮಾರು 45 ವರ್ಷದಿಂದ ಸಾರ್ವಜನಿಕ ಜೀವನದಲ್ಲಿ ಸೋಮಣ್ಣ ಅವರಿದ್ದಾರೆ. ಅವರು ಕಾರ್ಪೊರೇಟರ್ ಆಗಿ ಶಾಸಕರಾಗಿ ಮಂತ್ರಿಯಾಗಿ, ಈಗ ಕೇಂದ್ರ ಸಚಿವರಾಗಿದ್ದಾರೆ. ಅವರನ್ನು ಮೊದಲಿನಿಂದಲೂ ನೋಡಿದ್ದೇನೆ. ಅವರು ಕೇಂದ್ರದ ರೈಲ್ವೆ ಇಲಾಖೆ ಸಂಪುಟ ಸಚಿವ ಅಶ್ಬಿನಿ ವೈಷ್ಣವ ಅರಿಗೆ ಹೇಳಿದೆ. ಅವರು ಹಾವೇರಿಗೆ ವಂದೇ ಭಾರತ ರೈಲು ನಿಲುಗಡೆ ಮಾಡಬೇಕೆಂದು ಕೇಳಿದೆ. ಅವರು ಮಾಡುವುದಾಗಿ ಹೇಳಿದರು. ಅದರಂತೆ ಹಾವೇರಿಯಲ್ಲಿ ವಂದೇ ಭಾರತ ರೈಲು ನಿಲುಗಡೆಯಾಗುತ್ತಿದೆ ಎಂದು ಹೇಳಿದರು.

ಅಸಾಧ್ಯವನ್ನು ಸಾಧ್ಯ ಮಾಡುವ ಪ್ರಧಾನಿ

ಯಾವುದು ಅಸಾಧ್ಯವೋ ಅದನ್ನು ಸಾಧ್ಯ ಮಾಡುವುದೇ ಪ್ರಧಾನಿ ಮೋದಿಯವರ ಸಾಮರ್ಥ್ಯ, ಅವರು ರೈಲ್ವೆಯಲ್ಲಿ ಕ್ರಾಂತಿ ಮಾಡಿದ್ದಾರೆ‌. ರೈಲ್ವೆ ಲೈನು ಡಬ್ಲಿಂಗ್ ರೈಲ್ವೆ ಎಂಜಿನ್ ಯುನಿಫಿಕೇಶನ್ ಮಾಡಿದ್ದಾರೆ. ಕರ್ನಾಟಕದಲ್ಲಿ 2014 ರಿಂದ 3320 ಕಿ.ಮೀ ರೈಲ್ವೆ ಹಳಿ ಅಭಿವೃದಿಯಾಗಿದೆ. ಇದಕ್ಕೂ ಮುಂಚೆ 900 ಕಿಮಿ ಆಗಿತ್ತು. ಇನ್ನೊಂದು ಕ್ರಾಂತಿ ರೈಲ್ವೆ ಸಿಗ್ನಲ್ ವ್ಯವಸ್ಥೆ ಬದಲಾವಣೆ ಮಾಡಿದ್ದಾರೆ. ಮೂರನೆಯದ್ದು ಕಂಟ್ರೋಲ್ ರೂಮ್ ಎಲ್ಲ ಬದಲಾವಣೆ ಮಾಡಿದ್ದಾರೆ. ಅದರ ಜೊತೆಗೆ ರೈಲ್ವೆ ಸ್ಪೀಡ್ ಹೆಚ್ಚಳ ಮಾಡಿದ್ದಾರೆ. ರೈಲ್ವೆ ಆದಾಯ ನಾಲ್ಕು ಪಟ್ಟು ಹೆಚ್ಚಳ ಮಾಡಿದ್ಸಾರೆ‌ ಕಳೆದ ಎರಡು ವರ್ಷದಲ್ಲಿ ಸಚಿವ ಸೋಮಣ್ಣ ಅವರು ಪಾದರಸದಂತೆ ತಿರುಗಾಡಿ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ದ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ. ಸೋಮಣ್ಣ ಅವರಿಗೆ ಅಭಿನಂದನೆ. ಸಲ್ಲಿಸುವುದಾಗಿ ತಿಳಿಸಿದರು.

ಈ ಭಾಗದಲ್ಲಿ ಜನರು ರೈಲ್ವೆ ಕ್ರಾಂತಿ ನಿರೀಕ್ಷೆ ಮಾಡುತ್ತಿದ್ದಾರೆ. ರೈಲ್ವೆ ಸ್ಟೇಷನ್ ನಲ್ಲಿ ಎಸ್ಕಲೇಟರ್ ಬೇಕು. ರೈಲು ಬಹಳ ಹೊತ್ತು ನಿಲ್ಲದಿರುವುದರಿಂದ ಎಸ್ಕಲೇಟರ್ ಅಗತ್ಯವಿದೆ. ಇದಕ್ಕೆ ಪ್ರಯಾಣಿಕರು ಎಷ್ಟು ಎಂದು ಯೋಚಿಸಬೇಡಿ, ಇದೊಂದು ವಿಶೇಷ ಪ್ರಕರಣ ಅಂತ ತಿಳಿದು ಜಾರಿ ಮಾಡಿ, ರಾಣೆಬೆನ್ನೂರಿನ ರೈಲ್ವೆ ಸ್ಟೇಷನ್ ಅನ್ನು ಅಮೃತ ಯೋಜನೆ ಅಡಿಯಲ್ಲಿ ಅಭಿವೃದ್ಧಿಗೆ ತೆಗೆದುಕೊಂಡಿದ್ದು, ರಾಣೆಬೆನ್ನೂರು ಗುಡ್ ಶೆಡ್ ವಿಸ್ತರಣೆ ಮಾಡಬೇಕು. ರಾಣೆಬೆನ್ನೂರು ಬಹಳ ಮಹತ್ವದ ವಾಣಿಜ್ಯ ಕೇಂದ್ರ ಅಲ್ಲಿಂದ ಅಹಾರ ಪದಾರ್ಥಗಳನ್ನು ಬಾಂಗ್ಲಾ, ಶ್ರೀಲಂಕಾಕ್ಕೆ ರಪ್ತು ಮಾಡಲಾಗುತ್ತಿದೆ. ಅಲ್ಲದೆ ಆಮದು ಮಾಡಿಕೊಳ್ಳಲಾಗುತ್ತಿದೆ.

ಬ್ಯಾಡಗಿ ರೈಲ್ವೆ ಸ್ಟೇಷನ್ ಅಭಿವೃದ್ಧಿ ಮಾಡಲು ತೆಗೆದುಕೊಂಡಿದ್ದಿರಿ, ಬ್ಯಾಡಗಿ ಅಂತಾರಾಷ್ಟ್ರೀಯ ಮೆಣಸಿಕಾಯಿ ಮಾರುಕಟ್ಟೆ. ಶಿಕಾರಿಪುರ, ರಾಣೆಬೆನ್ನೂರು ಹೊಸ ಲೈನು ಬರುತ್ತಿದೆ. ಶಿವಮೊಗ್ಗದಿಂದ ಶಿಕಾರಿಪುರದವರೆಗೆ ಅಭಿವೃದ್ದಿ ಆಗುತ್ತಿದೆ. ಈ ಕಡೆ ಆಗುತ್ತಿಲ್ಲ. ಅದಷ್ಟು ಬೇಗ ಭೂಸ್ವಾಧೀನ ಮಾಡಬೆಕು. ಒಂದು ತಿಂಗಳಲ್ಲಿ ಭೂಸ್ವಾಧೀನ ಕಾರ್ಯ ನಾವು ಮಾಡಿಸಿಕೊಡುತ್ತೇವೆ. ಶೇ 90 ರಷ್ಟು ಭೂಸ್ವಾಧಿನ ಪ್ರಕ್ರಿಯೆ ಮುಗಿದ ತಕ್ಷ ಕೆಲಸ ಪ್ರಾರಂಭಿಸಿ, ಯಲವಿಗಿ ಗದಗ 690 ಕೋಟಿ ರೂ. ಮಂಜೂರಾಗಿದೆ.280 ಕೋಟಿ ಬಿಡುಗಡೆಯಾಗಿದೆ. ಮೇ ತಿಂಗಳಿನಲ್ಲಿ ಎರಡಕ್ಕೂ ಅನುಮೊದನೆ ಕೊಟ್ಟು ಕೆಲಸ ಆರಂಭಿಸಬೇಕು ಎಂದು ಮನವಿ ಮಾಡಿದರು.

ಹಲವಾರು ಟ್ರೇನ್ ಗಳ ನಿರ್ಣಯ ಮಾಡಬೇಕಿದೆ. ರಾಣೆಬೆನ್ನೂರು, ಚಳ್ಳಕೆರಿ, ಹಾವೆರಿಗೆ ಟ್ರೇನ್ ನಿಲ್ಲಬೇಕು ಎಂಬ ಬೇಡಿಕೆ ಇದೆ. ಹಾವೇರಿಗೆ ಮೂರು ಟ್ರೈನ್ ನಿಲ್ಲಬೇಕಿದೆ. ಯಲವಿಗಿ ಮೊದಲ ಹಂತ ಗದಗ ಕಡೆಗೆ ಆಗಿದೆ. ಹಾವೆರಿಗೆ ಸಂಪರ್ಕ ಮಾಡಿದರೆ, ಅದು ಕೊಪ್ಪಳ, ವಾಡಿವರೆಗೂ ಆಗುತ್ತದೆ. ಯಲವಿಗಿಯಿಂದ ಹಾವೇರಿಗೆ ಎರಡನೇ ಹಂತದಲ್ಲಿ ತೆಗೆದುಕೊಳ್ಳಬೇಕು. ಯಲವಿಗಿ ಹತ್ತಿರ ಎರಡು ಕೆಳ ಸೇತುವೆ ಮಾಡಿದರೂ ಪ್ರಯೋಜನ ಆಗಿಲ್ಲ, ಮೇಲು ಸೇತುವೆ ಆಗಬೇಕು. ಎರಡು ಆರ್ ಒಬಿ ಬ್ಯಾಡಗಿ ಮುಖ್ಯ ಲೈನ್ , ಕಾಕೋಳದಿಂದ ಎರಡು ಆರ್ ಒಬಿ ಆಗಬೇಕು. ಆರ್ ಒಬಿ ಆರ್ ಯುಬಿ ಎಷ್ಟು ಕೊಟ್ಟರೂ ಮಾಡುತ್ತೇನೆ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ. ಹಾವೇರಿ ಹತ್ತಿರ ನಾಗಿನಮಟ್ಟಿ ಹತ್ತಿರ ಆರ್ ಒಬಿ ಆಗಬೆಕು ಎಂದು ಮನವಿ ಮಾಡಿದರು.

ಅಮೃತ ಯೋಜನೆ

ಪ್ರಧಾನಿ ನರೇಂದ್ರ ಮೋದಿಯವರು ಬಂದ ಮೇಲೆ ಅಮೃತ ಯೋಜನೆ ಅಡಿಯಲ್ಲಿ ಕರ್ನಾಕದಲ್ಲಿ 51 ರೈಲ್ವೆ ಸ್ಟೇಷನ್ ಗಳು ಆಧುನಿಕರಣ ಯಾಗಿವೆ. 6000 ಕಿಲೋ ಮೀಟರ ಹೈವೆ ಅಭಿವೃದ್ದಿ ಮಾಡಲಾಗುತ್ತಿದೆ. ಅದರಲ್ಲಿ 3000 ಕಿಲೋ‌ಮೀಟರ್ ಆಗಿದೆ. ಇನ್ನೂ 3000 ಕಿಲೊಮೀಟರ್ ಅಭಿವೃದ್ಧಿ ಆಗಬೇಕಿದೆ. ಅದಕ್ಕೆ 6000 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಪ್ರತಿ ವರ್ಷ ಬಜೆಟ್ ನಲ್ಲಿ ರೈಲ್ವೆ ಯೋಜನೆಗೆ 7000 ಕೋಟಿ ರೂ. ನೀಡಲಾಗುತ್ತಿದೆ. ಆದರೆ ಅದು ಉಪಯೋಗ ಆಗುತ್ತಿಲ್ಲ. ಭೂಸ್ವಾಧಿನ ಆಗುತ್ತಿಲ್ಲ. ರೈಲ್ವೆ ಅಭಿವೃದ್ಧಿ ಯಾದರೆ ವ್ಯಾಪಾರ, ವ್ಯವಹಾರ, ಸಾಂಸ್ಕೃತಿಕ ರಂಗ ಎಲ್ಲ ರಂಗದಲ್ಲೂ ಅಭಿವೃದ್ಧಿಯಾಗುತ್ತದೆ ಎಂದರು.

ಕೃಷಿ ಸಿಂಚಾಯಿ ಹಣ ಬಿಡುಗಡೆಗೆ ಮನವಿ

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಹಾವೇರಿ ಗದಗ ಜಿಲ್ಲೆಗಳಿಗೆ ಹಣ ಬಿಡುಡಗೆಯಾಗಿಲ್ಲ. ರಾಜ್ಯ ಸರ್ಕಾರದಿಂದ ಈ ವಾರದಲ್ಲಿ ಅನುಮತಿ ಕೊಡೆಸಿ ಸಿಡಬ್ಲುಸಿಗೆ ಕಳುಹಿಸುತ್ತೇನ. ಹಾವೇರಿ ಜಿಲ್ಲೆಗೆ 60 ಕೋಟಿ, ಗದಗ ಜಿಲ್ಲೆಗೆ 40 ಕೋಟಿ ರೂ. ಯೋಜನೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದರು.

ಈ ಸಂಧರ್ಭದಲ್ಲಿ ಭಾರತ ಸರ್ಕಾರದ ರಾಜ್ಯ ರೈಲ್ವೆ ಹಾಗೂ ಜಲಶಕ್ತಿ ಸಚಿವರಾದ ವಿ ಸೋಮಣ್ಣ ರೈಲ್ವೆ ಇಲಾಖೆಯ ಡಿ.ಆರ್ ಎಮ್ ಮುದಿತ್ ಮಿತ್ತಲ್, ಚೀಪ್ ಕಮರ್ಷಿಯಲ್ ಮ್ಯಾನೇಜರ ಅನುಪ ಸಾಧು, ಜಿಲ್ಲಾಧಿಕಾರಿಗಳಾದ ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಅಂಶುಕುಮಾರ, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳಾದ ಶ್ರೀಮತಿ ರುಚಿ ಬಿಂದಾಲ್, ನಗರ ಸಭೆಯ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಮಾಳಗಿ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (85)

ಟಾಕ್ಸಿಕ್ v/s ಪೆದ್ದಿ ಅಖಾಡ..ಜೂನ್‌‌ಗೆ ಯಶ್-ಚರಣ್ ಪವಾಡ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:35 pm
0

BeFunky collage (84)

ಚಿಯಾನ್ ವಿಕ್ರಮ್ ಪುತ್ರನ ತೆಕ್ಕೆಗೆ ಅಪ್ಪು ಹೀರೋಯಿನ್ ಅನು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 2:01 pm
0

BeFunky collage (83)

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

by ಶ್ರೀದೇವಿ ಬಿ. ವೈ
April 15, 2026 - 1:45 pm
0

BeFunky collage (82)

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

by ಶ್ರೀದೇವಿ ಬಿ. ವೈ
April 15, 2026 - 1:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (83)
    ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ
    April 15, 2026 | 0
  • BeFunky collage (82)
    ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು
    April 15, 2026 | 0
  • BeFunky collage (81)
    ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”
    April 15, 2026 | 0
  • BeFunky collage (80)
    “ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ
    April 15, 2026 | 0
  • BeFunky collage (78)
    ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version