ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾ*ವು: ಮಗುವಿನ ಸಾವಿಗೆ ನಾನೇ ಕಾರಣ ಎಂದು ತಾಯಿಯೂ ಆತ್ಮಹ*ತ್ಯೆ

Untitled design (15)

ಬೆಂಗಳೂರು : ಕೇವಲ 11 ತಿಂಗಳ ಹಸುಗೂಸು ಬಕೆಟ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಬೆನ್ನಲ್ಲೇ, ಮಗುವಿನ ಸಾವಿಗೆ ನಾನೇ ಕಾರಣ ಎಂದು ಮನನೊಂದು ತಾಯಿ ಆತ್ಮಹತ್ಯೆ ಮಾಡಿಕಕೊಂಡಿರುವ ಹೃದಯವಿದ್ರಾಯಕ ಘಟನೆ ಬೆಂಗಳೂರಿನ ಚಂದ್ರಾಲೇಔಟ್‌ನಲ್ಲಿ ನಡೆದಿದೆ.

ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು  ಅವರ ಮಗ 11 ತಿಂಗಳ ಮಗು ಅಗಸ್ತ್ಯ ಎಂದು ಗುರುತಿಸಲಾಗಿದೆ. ಪ್ರತಿಭಾ ಅವರು ಮನೆಯಿಂದಲೇ ಕೆಲಸ (Work From Home) ಮಾಡುತ್ತಿದ್ದರು. ಸಂಜೆ ಮನೆಯ ಟೆರೇಸ್ ಮೇಲೆ ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು ಪ್ರತಿಭಾ ಅವರು ಹೋದಾಗ ಈ ಅನಾಹುತ ನಡೆದಿದೆ.

ತಾಯಿ ಮೇಲಕ್ಕೆ ಹೋದ ಸಮಯದಲ್ಲಿ ಆಟವಾಡುತ್ತಾ ಬಾತ್‌ರೂಮ್‌ಗೆ ಹೋದ ಪುಟ್ಟ ಅಗಸ್ತ್ಯ, ಅಲ್ಲಿ ನೀರಿನಿಂದ ತುಂಬಿದ್ದ ಬಕೆಟ್‌ನಲ್ಲಿ ತಲೆಕೆಳಗಾಗಿ ಬಿದ್ದಿದ್ದಾನೆ. ಉಸಿರುಗಟ್ಟಿ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಬಟ್ಟೆ ತಂದು ಕೆಳಕ್ಕೆ ಬಂದ ಪ್ರತಿಭಾಗೆ ಏನು ಮಾಡಬೇಕೆಂದು ತಿಳಿಯದೇ ಗಾಬರಿಗೊಂಡಿದ್ದಾಳೆ. ಎಷ್ಟೇ ಪ್ರಯತ್ನಿಸಿದರೂ ಮಗು ಸ್ಪಂದಿಸದಿದ್ದಾಗ, ಪ್ರತಿಭಾ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಈ ಘಟನೆಯಿಂದ ತೀವ್ರ ಆಘಾತಗೊಂಡ ಪ್ರತಿಭಾ, ನನ್ನ ನಿರ್ಲಕ್ಷ್ಯದಿಂದಲೇ ಮಗು ಸತ್ತಿತು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ ಪತಿ ಮಹಾಂತೇಶ್ ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಅನುಮಾನಗೊಂಡು ಪರ್ಯಾಯ ಕೀಲಿಯಿಂದ ಬಾಗಿಲು ತೆರೆದಾಗ ಮನೆಯೊಳಗಿನ ದೃಶ್ಯ ಕಂಡು ಹೌಹಾರಿದ್ದಾನೆ. ಪ್ರತಿಭಾ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಮೃತ ಅಗಸ್ತ್ಯನ ಶವ ಹಾಸಿಗೆಯ ಮೇಲಿತ್ತು.

ಈ ಬಗ್ಗೆ ತಿಳಿದ ಚಂದ್ರಲೇಔಟ್‌ ಪೊಲೀಸರು ಕೂಡಲೇ ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಆತ್ಮಹತ್ಯೆಗೂ ಮುನ್ನ ಪ್ರತಿಭಾ ಅವರು ಬರೆದಿದ್ದ ಡೆತ್ ನೋಟ್ ಪೊಲೀಸರಿಗೆ ಲಭ್ಯವಾಗಿದೆ. ನನ್ನ ಮಗುವಿನ ಸಾವಿಗೆ ನಾನೇ ಕಾರಣ, ಅವನನ್ನು ಉಳಿಸಿಕೊಳ್ಳಲು ನನ್ನಿಂದ ಸಾಧ್ಯವಾಗಲಿಲ್ಲ. ಅವನಿಲ್ಲದ ಜಗತ್ತಿನಲ್ಲಿ ನಾನು ಬದುಕಿರಲಾರೆ ಎಂದು ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ.

ಪ್ರಥಮಿಕ ತನಿಖೆಯಲ್ಲಿ ತಿಳಿದಂತೆ, ಪ್ರತಿಭಾ ಮೊದಲು 15 ಮಾತ್ರೆಗಳನ್ನ ನುಂಗಿದ್ದಾರೆ ಬಳಿಕ ತಮ್ಮ ಕೈ ಕುಯ್ದುಕೊಂಡು ಸಾಯಲು ಪ್ರಯತ್ನಿಸಿದ್ದಾರೆ. ಆದರೆ ಇದರಿಂದ ಯಾವುದೇ ಉಪಯೋಗವಾಗದಿದ್ದಾಗ ಕೊನೆಯದಾಗಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Exit mobile version