• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 20, 2025 - 6:59 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 05 20t184901.827

ಬೆಂಗಳೂರು : ಕೆಜಿ ಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಗರಾಜ್ ಅವರ ಪತ್ನಿ ಶಾಲಿನಿ ಎಚ್‌ಬಿಆರ್ ಲೇಔಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಗೆ ದಾಂಪತ್ಯ ಕಲಹ ಕಾರಣ ಎಂದು ಶಂಕಿಸಲಾಗಿದ್ದು, ಗೋವಿಂದಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಾಲಿನಿಯ ತಂದೆ-ತಾಯಿ ಈ ಸಾವಿನಲ್ಲಿ ಕೊಲೆಯ ಆರೋಪ ಹೊರಿಸಿದ್ದು, ಪಿಎಸ್‌ಐ ನಾಗರಾಜ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಶಾಲಿನಿ ಮತ್ತು ನಾಗರಾಜ್ ಚಿಕ್ಕಂದಿನಿಂದಲೂ ಟ್ಯೂಷನ್‌ನಲ್ಲಿ ಸ್ನೇಹಿತರಾಗಿದ್ದರು. ಶಾಲಿನಿ ಎಂ.ಎಸ್.ಸಿ. ಪದವೀಧರರಾಗಿದ್ದು, ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಗರಾಜ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ತಯಾರಿ ನಡೆಸುವಾಗ ಶಾಲಿನಿ ಆರ್ಥಿಕ ಸಹಾಯವನ್ನೂ ನೀಡಿದ್ದರು. ಈ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಮೊಳಕೆಯೊಡೆದಿತ್ತು. ಶಾಲಿನಿ ತನ್ನ ಮೊದಲ ಪತಿಗೆ 2024ರ ಆಗಸ್ಟ್‌ನಲ್ಲಿ ವಿಚ್ಛೇದನ ನೀಡಿ ನಾಗರಾಜ್‌ನನ್ನು ಮದುವೆಯಾದರು. ಆದರೆ, ಮದುವೆಯಾದ ಕೆಲವೇ ತಿಂಗಳಲ್ಲಿ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿತ್ತು.

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ADVERTISEMENT
ADVERTISEMENT

ಕಳೆದ ಎರಡು ತಿಂಗಳಿನಿಂದ ಶಾಲಿನಿ ಮತ್ತು ನಾಗರಾಜ್ ನಡುವಿನ ಸಂಬಂಧ ಒಡಕು ಮೂಡಿದ್ದು, ನಾಗರಾಜ್ ಶಾಲಿನಿ ಹಾಗೂ ಮನೆಯನ್ನು ಬಿಟ್ಟು ಬೇರೆಡೆ ವಾಸಿಸುತ್ತಿದ್ದರು. ಇದರಿಂದ ಕೋಪಗೊಂಡ ಶಾಲಿನಿ, ತೀವ್ರ ಮಾನಸಿಕ ಒತ್ತಡಕ್ಕೊಳಗಾಗಿದ್ದರು. ಈ ಘಟನೆಗೂ ಮುನ್ನ ರಾತ್ರಿ ಶಾಲಿನಿ “ರೈಲಿಗೆ ಸಿಲುಕಿ ಸಾಯುವೆ” ಎಂದು ಹೇಳಿ ಮನೆಯಿಂದ ಹೊರಟಿದ್ದರು. ಹೊಯ್ಸಳ ಪೊಲೀಸರು ಗಸ್ತಿನ ವೇಳೆ ಶಾಲಿನಿಯನ್ನು ರಕ್ಷಿಸಿ ಮನೆಗೆ ಕರೆತಂದಿದ್ದರು. ಆದರೆ, ಮನೆಗೆ ಮರಳಿದ ಕೆಲವೇ ಕ್ಷಣಗಳಲ್ಲಿ ಶಾಲಿನಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದರು.

ಶಾಲಿನಿಯ ತಂದೆ ಶಿವಲಿಂಗಪ್ಪ ಮತ್ತು ತಾಯಿ ಭಾರತಿ, ನಾಗರಾಜ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. “ನಾಗರಾಜ್‌ಗೆ ನನ್ನ ಮಗಳ ಹಣ ಬೇಕಿತ್ತು, ಆಕೆಯ ಜೊತೆ ಜೀವನ ಬೇಡವಿತ್ತು. ಆಕೆಯನ್ನು ಹೊಡೆಯುತ್ತಿದ್ದ, ಹಣಕ್ಕಾಗಿ ಒತ್ತಾಯಿಸುತ್ತಿದ್ದ, ಡೈಮಂಡ್ ರಿಂಗ್‌ಗೆ ಡಿಮ್ಯಾಂಡ್ ಮಾಡುತ್ತಿದ್ದ,” ಎಂದು ಶಿವಲಿಂಗಪ್ಪ ಆರೋಪಿಸಿದ್ದಾರೆ. “ಇದು ಆತ್ಮಹತ್ಯೆಯಲ್ಲ, ಕೊಲೆ,” ಎಂದು ಶಾಲಿನಿಯ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಿನಿಯವರು ಈ ಹಿಂದೆ ಕೋಣನಕುಂಟೆ ಠಾಣೆಯಲ್ಲಿ ನಾಗರಾಜ್ ವಿರುದ್ಧ ದೂರು ದಾಖಲಿಸಿದ್ದರು, ಇದರ ಮೇಲೆ ಇಲಾಖಾ ತನಿಖೆಯೂ ನಡೆದಿತ್ತು. ಶಿವಾಜಿನಗರ ಮಹಿಳಾ ಠಾಣೆಯಲ್ಲಿ ಕೌನ್ಸೆಲಿಂಗ್‌ಗೆ ಕರೆದಾಗ ಶಾಲಿನಿಗೆ ಪೊಲೀಸರೇ ತಪ್ಪಿತಸ್ಥರಂತೆ ಮಾತನಾಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

ಶಾಲಿನಿಗೆ ಮೊದಲ ಮದುವೆಯಿಂದ ಏಳು ವರ್ಷದ ಮಗುವಿದೆ. ಈಗ ತಂದೆ-ತಾಯಿಯನ್ನು ಕಳೆದುಕೊಂಡ ಆ ಮಗುವಿನ ಭವಿಷ್ಯದ ಬಗ್ಗೆ ಕುಟುಂಬದವರು ಕಳವಳ ವ್ಯಕ್ತಪಡಿಸಿದ್ದಾರೆ. “ನನ್ನ ಮಗಳ ಸಾವಿಗೆ ನ್ಯಾಯ ಸಿಗಬೇಕು,” ಎಂದು ಶಾಲಿನಿಯ ತಂದೆ-ತಾಯಿ ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 26T073026.447

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

by ಶಾಲಿನಿ ಕೆ. ಡಿ
August 26, 2026 - 7:31 am
0

Untitled design 2026 08 26T070458.403

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

by ಶಾಲಿನಿ ಕೆ. ಡಿ
August 26, 2026 - 7:05 am
0

Untitled design 2026 08 26T064340.413

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

by ಶಾಲಿನಿ ಕೆ. ಡಿ
August 26, 2026 - 6:47 am
0

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version