• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

2 ತಿಂಗಳು ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ: 58 ರೈಲುಗಳ ಸಂಚಾರ ರದ್ದು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 16, 2026 - 4:35 pm
in ಕರ್ನಾಟಕ, ಬೆಂ. ನಗರ
0 0
0
Untitled design 2026 06 16T163427.432

ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಗತಿ ಶಕ್ತಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿರುವ ಯಾರ್ಡ್ ನವೀಕರಣ ಮತ್ತು ಆಧುನೀಕರಣ ಕಾಮಗಾರಿಗಳ ಪರಿಣಾಮವಾಗಿ ಮುಂಬರುವ ಎರಡು ತಿಂಗಳ ಕಾಲ ರೈಲು ಸಂಚಾರದಲ್ಲಿ ಭಾರಿ ಬದಲಾವಣೆಗಳು ಆಗಲಿದೆ. ನಗರದ ಅತ್ಯಂತ ಜನನಿಬಿಡ ಸಾರಿಗೆ ಕೇಂದ್ರವಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣದಲ್ಲಿ ಸುರಕ್ಷತೆ ಹೆಚ್ಚಿಸುವುದು ಹಾಗೂ ರೈಲು ಕಾರ್ಯಾಚರಣೆಯನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ಎರಡು ಪ್ರಮುಖ ರೈಲು ಮಾರ್ಗಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತಿದೆ.

ಜೂನ್ 16ರಿಂದ ಆರಂಭವಾಗುವ ಈ ಕಾಮಗಾರಿಗಳ ಹಿನ್ನೆಲೆಯಲ್ಲಿ ಸುಮಾರು ಎರಡು ತಿಂಗಳ ಕಾಲ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ, ಈ ಅವಧಿಯಲ್ಲಿ ಒಟ್ಟು 58 ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 26 ರೈಲುಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಎರಡು ರೈಲುಗಳ ವೇಳಾಪಟ್ಟಿಯನ್ನು ಮರು ನಿಗದಿಪಡಿಸಲಾಗಿದ್ದು, ಐದು ಪ್ರಮುಖ ರೈಲುಗಳ ನಿಲುಗಡೆ ಅವಧಿಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಕೆಲವು ಆಯ್ದ ನಿಲ್ದಾಣಗಳಲ್ಲಿ ಈ ರೈಲುಗಳನ್ನು 15ರಿಂದ 60 ನಿಮಿಷಗಳವರೆಗೆ ನಿಯಂತ್ರಿಸಿ ಸಂಚಾರ ನಡೆಸಲಾಗುತ್ತದೆ. ಇದರಿಂದ ಪ್ರಯಾಣಿಕರು ತಮ್ಮ ಪ್ರಯಾಣ ಯೋಜನೆಗಳನ್ನು ಮುಂಚಿತವಾಗಿಯೇ ಪರಿಶೀಲಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.

RelatedPosts

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ADVERTISEMENT
ADVERTISEMENT

ಈ ಕಾಮಗಾರಿಯ ನೇರ ಪರಿಣಾಮ ಮೈಸೂರು ಹಾಗೂ ತುಮಕೂರು ಭಾಗದ ನಿತ್ಯ ಪ್ರಯಾಣಿಕರ ಮೇಲೆ ಹೆಚ್ಚಾಗಿ ಬೀಳಲಿದೆ. ಮೈಸೂರು ಮತ್ತು ಅಶೋಕಪುರಂ ರೈಲು ನಿಲ್ದಾಣಗಳಿಂದ ಸಂಚಾರ ಆರಂಭಿಸುವ ಅಥವಾ ಅಲ್ಲಿಗೆ ತಲುಪುವ 16 ಪ್ರಮುಖ ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಇದರೊಂದಿಗೆ ಕೆಎಸ್‌ಆರ್ ಬೆಂಗಳೂರು ನಗರವನ್ನು ಸುತ್ತಮುತ್ತಲಿನ ಉಪನಗರಗಳು ಹಾಗೂ ತುಮಕೂರಿನ ವಿವಿಧ ಭಾಗಗಳಿಗೆ ಸಂಪರ್ಕಿಸುವ ಒಂಬತ್ತು ಪ್ರಮುಖ ಮೆಮು ರೈಲುಗಳ ಸೇವೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಭಾಗಶಃ ರದ್ದುಗೊಂಡಿರುವ ಹಲವು ರೈಲುಗಳು ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ಬರುವ ಬದಲಾಗಿ ನಗರದ ಇತರೆ ಉಪನಗರ ರೈಲು ನಿಲ್ದಾಣಗಳಲ್ಲೇ ತಮ್ಮ ಪ್ರಯಾಣವನ್ನು ಕೊನೆಗೊಳಿಸಲಿವೆ ಅಥವಾ ಅಲ್ಲಿಂದಲೇ ಮುಂದಿನ ಸಂಚಾರ ಆರಂಭಿಸಲಿವೆ. ಇದರ ಮಧ್ಯೆ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮೇಲೂ ಈ ಕಾಮಗಾರಿಯ ಪರಿಣಾಮ ಬೀಳಲಿದ್ದು, ಒಟ್ಟು 10 ವಂದೇ ಭಾರತ್ ರೈಲುಗಳ ನಿಲ್ದಾಣಗಳಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ವಂದೇ ಭಾರತ್ ರೈಲನ್ನು ಸಂಪೂರ್ಣವಾಗಿ ರದ್ದುಗೊಳಿಸದೆ, ಕೇವಲ ಅವುಗಳ ಆಗಮನ ಮತ್ತು ನಿರ್ಗಮನ ನಿಲ್ದಾಣಗಳಲ್ಲಿ ಮಾತ್ರ ಬದಲಾವಣೆ ಮಾಡಲಾಗಿದೆ. ರೈಲುಗಳ ಸಂಚಾರದಲ್ಲಿ ಉಂಟಾಗಿರುವ ಈ ಬದಲಾವಣೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ರೈಲ್ವೆ ಇಲಾಖೆಯ ಅಧಿಕೃತ ಮಾಹಿತಿ ಮತ್ತು ವೇಳಾಪಟ್ಟಿಯನ್ನು ಪರಿಶೀಲಿಸಿಕೊಳ್ಳುವುದು ಸೂಕ್ತವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಅನೈತಿಕ (3)

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

by ಕವಿತಾ
August 1, 2026 - 4:50 pm
0

ಅನೈತಿಕ (2)

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

by ಕವಿತಾ
August 1, 2026 - 4:35 pm
0

ಅನೈತಿಕ (1)

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

by ಕವಿತಾ
August 1, 2026 - 4:10 pm
0

ಅನೈತಿಕ

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

by ಕವಿತಾ
August 1, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (3)
    ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ
    August 1, 2026 | 0
  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
  • Untitled design 2026 08 01T114336.903
    ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version