• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

3ನೇ ದಿನವೂ ಇಂಡಿಗೋ ವಿಮಾನಯಾನದಲ್ಲಿ ಗೊಂದಲ: ಬೆಂಗಳೂರಿನಲ್ಲಿ 73 ವಿಮಾನ ರದ್ದು

admin by admin
December 4, 2025 - 12:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ, ಬೆಂ. ನಗರ
0 0
0
Untitled design 2025 12 04T120544.549

ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾದ ಇಂಡಿಗೋ (IndiGo) ವಿಮಾನಗಳ ಹಾರಾಟದಲ್ಲಿ ಉಂಟಾಗಿರುವ ಗಂಭೀರ ಅಡಚಣೆಯು ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ತಾಂತ್ರಿಕ ದೋಷಗಳು, ಸಿಬ್ಬಂದಿ ಕೊರತೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ದೇಶಾದ್ಯಂತ ವಿಮಾನಗಳ ಹಾರಾಟ ರದ್ದಾಗಿದ್ದು, ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿನ್ನೆ (ಎರಡನೇ ದಿನ) ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು.

ಇಂದಿಗೂ ಮುಂದುವರಿದ ರದ್ದತಿ: ದೇಶಾದ್ಯಂತ 100+ ವಿಮಾನಗಳ ಮೇಲೆ ಪರಿಣಾಮ

RelatedPosts

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ

ADVERTISEMENT
ADVERTISEMENT

ಈ ಸಮಸ್ಯೆ ಮೂರನೇ ದಿನವೂ ಮುಂದುವರಿಯುವ ಸಾಧ್ಯತೆಗಳಿದ್ದು, ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ಇಂದು ಕೂಡ ರದ್ದಾಗುವ ಭೀತಿ ಎದುರಾಗಿದೆ. ಇನ್ನು ಹಲವು ವಿಮಾನಗಳ ಹಾರಾಟದಲ್ಲಿ ಗಣನೀಯ ವಿಳಂಬ ಕಂಡುಬರುತ್ತಿದ್ದು, ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರೀ ವ್ಯತ್ಯಯ

ರಾಜಧಾನಿ ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport – KIA) ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

  • ನಿನ್ನೆ (ಎರಡನೇ ದಿನ) ಬೆಂಗಳೂರಿನಿಂದ 43 ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು.

  • ಆದರೆ, ಇಂದು (ಮೂರನೇ ದಿನ) ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು, ಒಟ್ಟು 73 ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಇಂಡಿಗೋ ಪ್ರಯಾಣಿಕರು ತಮ್ಮ ಪ್ರವಾಸವನ್ನು ರದ್ದುಗೊಳಿಸುವುದು ಇಲ್ಲವೇ ಬೇರೆ ವಿಮಾನಯಾನ ಸಂಸ್ಥೆಗಳನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ.

ಡಿಜಿಸಿಎಯಿಂದ ಇಂಡಿಗೋ ಅಧಿಕಾರಿಗಳಿಗೆ ಬುಲಾವ್

ಸತತ ವಿಮಾನಗಳ ರದ್ದತಿ ಮತ್ತು ವಿಳಂಬದಿಂದಾಗಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA), ಇಂಡಿಗೋ ಸಂಸ್ಥೆಗೆ ನೋಟಿಸ್ ನೀಡಿದೆ.

  • ವಿಮಾನಗಳ ವಿಳಂಬ ಮತ್ತು ರದ್ದತಿಗಳ ಹಿಂದಿನ ನಿಖರ ಕಾರಣಗಳನ್ನು ವಿವರಿಸುವಂತೆ ಡಿಜಿಸಿಎ ಸೂಚಿಸಿದೆ.

  • ಅಲ್ಲದೇ, ಪ್ರಯಾಣಿಕರ ಸಂಕಷ್ಟವನ್ನು ಪರಿಹರಿಸಲು ಮತ್ತು ಪರಿಸ್ಥಿತಿ ಸುಧಾರಿಸಲು ಸ್ಪಷ್ಟ ಯೋಜನೆಯನ್ನು ಒದಗಿಸುವಂತೆ ಇಂಡಿಗೋಗೆ ಆದೇಶಿಸಿದೆ.

  • ಈ ವಿಷಯದ ಬಗ್ಗೆ ಚರ್ಚಿಸಲು, ಡಿಜಿಸಿಎ ಇಂದು ಮಧ್ಯಾಹ್ನ ನಡೆಯಲಿರುವ ಉನ್ನತ ಮಟ್ಟದ ಸಭೆಗೆ ಇಂಡಿಗೋ ಅಧಿಕಾರಿಗಳಿಗೆ ತುರ್ತು ಬುಲಾವ್ ನೀಡಿದೆ.

48 ಗಂಟೆಗಳಲ್ಲಿ ಸುಧಾರಣೆಯ ಭರವಸೆ ನೀಡಿದ ಇಂಡಿಗೋ

ಸಂಸ್ಥೆಯಲ್ಲಿ ಉಂಟಾಗಿರುವ ಗೊಂದಲ ಮತ್ತು ಅಡಚಣೆಗಳ ಕುರಿತು ಇಂಡಿಗೋ ಸಂಸ್ಥೆಯು ಔಪಚಾರಿಕ ಪ್ರತಿಕ್ರಿಯೆ ನೀಡಿದೆ. ಸಂಸ್ಥೆಯು ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ಕ್ಷಮೆಯಾಚಿಸುತ್ತೇವೆ. ಸಮಸ್ಯೆಯನ್ನು ಬಗೆಹರಿಸಿ, ಮುಂದಿನ 48 ಗಂಟೆಗಳೊಳಗೆ ಪರಿಸ್ಥಿತಿಯನ್ನು ಸುಧಾರಿಸುತ್ತೇವೆ ಎಂದು ಭರವಸೆ ನೀಡಿದೆ.

ಇಂಡಿಗೋ ನೀಡಿದ ಕಾರಣಗಳು:

ಇಂಡಿಗೋ ಸಂಸ್ಥೆಯು ವಿಮಾನ ಹಾರಾಟದ ಅಡಚಣೆಗೆ ಹಲವು ಅನಿರೀಕ್ಷಿತ ಕಾರ್ಯಾಚರಣೆಗಳನ್ನ ತಿಳಿಸಿವೆ ಅವುಗಳೆಂದರೆ:

  1. ತಾಂತ್ರಿಕ ದೋಷಗಳು.

  2. ಚಳಿಗಾಲದ ವೇಳಾಪಟ್ಟಿಯಲ್ಲಿನ ಹೊಂದಾಣಿಕೆಗಳು

  3. ಹವಾಮಾನ ಪರಿಸ್ಥಿತಿ.

  4. ವಿಮಾನ ನಿಲ್ದಾಣಗಳಲ್ಲಿನ ದಟ್ಟಣೆ

  5. ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ ಹೊಸ ಅನುಷ್ಠಾನ

ಈ ಎಲ್ಲಾ ಕಾರಣಗಳಿಂದಾಗಿ ಸಿಬ್ಬಂದಿ ಲಭ್ಯತೆಗೆ ಅನುಗುಣವಾಗಿ ವಿಮಾನ ಕಾರ್ಯಾಚರಣೆಯನ್ನು ಸ್ಥಿರಗೊಳಿಸಲು ತಾತ್ಕಾಲಿಕವಾಗಿ ಕೆಲ ವಿಮಾನಗಳ ವೇಳಾಪಟ್ಟಿ ಬದಲಾವಣೆ ಮತ್ತು ರದ್ದತಿ ಅನಿವಾರ್ಯವಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (6)
    ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR
    August 22, 2026 | 0
  • Your paragraph text (2)
    ಕಲುಷಿತ ನೀರು ಪೂರೈಸಿದರೆ ಕ್ರಮ: ಈಶ್ವರ ಖಂಡ್ರೆ ಎಚ್ಚರಿಕೆ
    August 22, 2026 | 0
  • Your paragraph text (1)
    ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR
    August 22, 2026 | 0
  • Your paragraph text
    ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ: ‘ನಮ್ಮ ಅಧಿಕಾರಿಗಳ ಕೈವಾಡವೂ ಇದೆ’ ಎಂದ ಪ್ರಿಯಾಂಕ್ ಖರ್ಗೆ
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (10)
    4 ವರ್ಷದೊಳಗಿನ ಮಕ್ಕಳಿಗೆ ಶೀತ-ಕೆಮ್ಮಿನ ಈ ಮೆಡಿಸಿನ್ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version