ಬೆಂಗಳೂರಿನಲ್ಲಿ ಜೂನ್ 21ರಂದು ಬೃಹತ್ ಮಟ್ಟದ ಸಹಜ ಯೋಗ, ಸಾಂಸ್ಕೃತಿಕ ಕಾರ್ಯಕ್ರಮ

Untitled design 2025 06 19t181254.697

ವಿಶ್ವ ಯೋಗ ದಿನ ಹಾಗೂ ವಿಶ್ವ ಸಂಗೀತ ದಿನದ ಪ್ರಯುಕ್ತ ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ಡ್ ಸಹಯೋಗದೊಂದಿಗೆ ಲೈಫ್ ಎಟರ್ನಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಬೃಹತ್ ಮಟ್ಟದಲ್ಲಿ ಯೋಗ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೂನ್ 21ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ ತ್ರಿಪುರವಾಸಿನಿಯಲ್ಲಿ ಆಯೋಜಿಸಿದೆ. ಕಾರ್ಯಕ್ರಮವು ಬೆಳಗ್ಗೆ 7:30 ರಿಂದ 9:30ರ ವರೆಗೆ ನಡೆಯಲಿದ್ದು, ವೀಕ್ಷಣೆಗೆ ಸಂಪೂರ್ಣ ಉಚಿತ ಮತ್ತು ಮುಕ್ತ ಅವಕಾಶವನ್ನು ಕಲ್ಪಿಸಿದೆ.

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಯೋಗ, ಸಂಗೀತ ಜೊತೆಗೆ ನೃತ್ಯದ ಮೂಲಕ ಜನರ ಅಂತರಂಗವನ್ನು ತಲುಪುವ ಪ್ರಯತ್ನ ಮಾಡಲಾಗುತ್ತಿದೆ. ಈ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ ಮತ್ತು ಆಯುಷ್ ರಾಜ್ಯ ಸಚಿವ ಪ್ರತಾಪ್ರಾವ್ ಜಾಧವ್ ಅವರು ವರ್ಚುವಲ್ ಉದ್ಘಾಟನೆ ಮಾಡಲಿದ್ದಾರೆ. ಅಂತರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟುಗಳ ನೇತೃತ್ವದಲ್ಲಿ ಯೋಗ ಕಾರ್ಯಗಾರವು ನಡೆಯಲಿದ್ದು, ಮಾನ್ಯ ಕೇಂದ್ರ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ,ನಟಿ ನಮ್ರತಾ ಗೌಡ, ಬೆಂಗಳೂರು ಗ್ರಾಮಾಂತರ ಸಂಸದರಾದ ಡಾ. ಸಿ.ಎನ್. ಮಂಜುನಾಥ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸಿಇಒ (ಲಂಡನ್ ಯುಕೆ) ಸಂತೋಷ್ ಶುಕ್ಲ ಅವರು ಭಾಗವಹಿಸಲಿದ್ದಾರೆ.

ವಿಶ್ವ ಯೋಗ ದಿನ ಹಾಗೂ ವಿಶ್ವ ಸಂಗೀತ ದಿನದ ಪ್ರಯುಕ್ತ ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ಡ್ ಸಹಯೋಗದೊಂದಿಗೆ ಲೈಫ್ ಎಟರ್ನಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಬೃಹತ್ ಮಟ್ಟದಲ್ಲಿ ಯೋಗ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೂನ್ 21ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ ತ್ರಿಪುರವಾಸಿನಿಯಲ್ಲಿ ಆಯೋಜಿಸಿದೆ. ಕಾರ್ಯಕ್ರಮವು ಬೆಳಗ್ಗೆ 7:30 ರಿಂದ 9:30ರ ವರೆಗೆ ನಡೆಯಲಿದ್ದು, ವೀಕ್ಷಣೆಗೆ ಸಂಪೂರ್ಣ ಉಚಿತ ಮತ್ತು ಮುಕ್ತ ಅವಕಾಶವನ್ನು ಕಲ್ಪಿಸಿದೆ.

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಯೋಗ, ಸಂಗೀತ ಜೊತೆಗೆ ನೃತ್ಯದ ಮೂಲಕ ಜನರ ಅಂತರಂಗವನ್ನು ತಲುಪುವ ಪ್ರಯತ್ನ ಮಾಡಲಾಗುತ್ತಿದೆ. ಈ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ ಮತ್ತು ಆಯುಷ್ ರಾಜ್ಯ ಸಚಿವ ಪ್ರತಾಪ್ರಾವ್ ಜಾಧವ್ ಅವರು ವರ್ಚುವಲ್ ಉದ್ಘಾಟನೆ ಮಾಡಲಿದ್ದಾರೆ. ಅಂತರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟುಗಳ ನೇತೃತ್ವದಲ್ಲಿ ಯೋಗ ಕಾರ್ಯಗಾರವು ನಡೆಯಲಿದ್ದು, ಮಾನ್ಯ ಕೇಂದ್ರ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ,ನಟಿ ನಮ್ರತಾ ಗೌಡ, ಬೆಂಗಳೂರು ಗ್ರಾಮಾಂತರ ಸಂಸದರಾದ ಡಾ. ಸಿ.ಎನ್. ಮಂಜುನಾಥ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸಿಇಒ (ಲಂಡನ್ ಯುಕೆ) ಸಂತೋಷ್ ಶುಕ್ಲ ಅವರು ಭಾಗವಹಿಸಲಿದ್ದಾರೆ.

  • Categories: Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
  • Tags:
  • Exit mobile version