• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ಇಂದಿನಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 3, 2026 - 10:05 am
in ಕರ್ನಾಟಕ
0 0
0
Shriram Nene Madhuri Dixit

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ಭರ್ಜರಿ ಸಿದ್ಧತೆಗಳು ನಡೆದಿದ್ದು, ಸೆಪ್ಟೆಂಬರ್ 3ರಿಂದ 5ರವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಗರದ ಪ್ರಮುಖ ಇಸ್ಕಾನ್ ದೇವಾಲಯಗಳಲ್ಲಿ ಭಕ್ತರಿಗೆ ವಿಶೇಷ ದರ್ಶನ, ಪೂಜೆ, ಸೇವೆ ಹಾಗೂ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಉತ್ಸವದ ಅಂಗವಾಗಿ ಮಹಾ ಅಭಿಷೇಕ, ಮಹಾಮಂಗಳಾರತಿ, 56 ಬಗೆಯ ಖಾದ್ಯಗಳ ಚಪ್ಪನ್ ಭೋಗ್, ಮಖನ್ ಮಿಶ್ರಿ (ಬೆಣ್ಣೆ-ಸಕ್ಕರೆ) ನೈವೇದ್ಯ, ಪುಷ್ಪಾಂಜಲಿ ಸೇವೆ, ಪಲ್ಲಕ್ಕಿ ಉತ್ಸವ ಮತ್ತು ಜುಲನ್ ಸೇವೆ ನಡೆಯಲಿದೆ. ಇದರೊಂದಿಗೆ ಗೋ ಪೂಜೆ, ಕೋಟಿ ಜಪ ಯಜ್ಞ ಹಾಗೂ ಭಗವದ್ಗೀತಾ ಪಾರಾಯಣ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

RelatedPosts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

ಬಿಸಿಲನ್ನೂ ಲೆಕ್ಕಿಸದೆ ‘ಬಳ್ಳಾರಿ ಚಲೋ’: ಮೂರನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ

ಕರ್ನಾಟಕದಲ್ಲಿ ಮಳೆ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ADVERTISEMENT
ADVERTISEMENT

ಜನ್ಮಾಷ್ಟಮಿ ಸಂಭ್ರಮಕ್ಕೆ ಸಾಂಸ್ಕೃತಿಕ ಮೆರುಗು ನೀಡಲು ಖ್ಯಾತ ಕಲಾವಿದರಿಂದ ನೃತ್ಯ ಮತ್ತು ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಕ್ಕಳಿಂದ ಶ್ಲೋಕ ಪಠಣವೂ ನಡೆಯಲಿದೆ. ಪುಟ್ಟ ಮಕ್ಕಳನ್ನು ರಾಧಾ-ಕೃಷ್ಣರ ವೇಷದಲ್ಲಿ ಸಜ್ಜುಗೊಳಿಸಿ ಭಾಗವಹಿಸಲು ಪೋಷಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಇದಕ್ಕಾಗಿ ಆನ್‌ಲೈನ್ ವೇಷಭೂಷಣ ಸ್ಪರ್ಧೆಯನ್ನೂ ಆಯೋಜಿಸಲಾಗಿದೆ.

ಇಸ್ಕಾನ್ ಸಂಸ್ಥಾಪಕ-ಆಚಾರ್ಯ ಶ್ರೀಲ ಪ್ರಭುಪಾದರ ಜೀವನ ಮತ್ತು ಸಾಧನೆಗಳನ್ನು ಪರಿಚಯಿಸುವ ವಿಶೇಷ ಪ್ರದರ್ಶನ ಕೂಡ ಭಕ್ತರ ಗಮನ ಸೆಳೆಯಲಿದೆ. ಉತ್ಸವಕ್ಕೆ ಆಗಮಿಸುವ ಭಕ್ತರಿಗೆ ನಿರಂತರವಾಗಿ ಅನ್ನಪ್ರಸಾದ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.

‘ಸ್ವಾಗತಂ ಕೃಷ್ಣ’ ನೇರಪ್ರಸಾರ

ಮನೆಯಲ್ಲೇ ಕುಳಿತು ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿಯಾಗಲು ಬಯಸುವ ಭಕ್ತರಿಗಾಗಿ ಸೆಪ್ಟೆಂಬರ್ 4ರಂದು ರಾತ್ರಿ 8 ಗಂಟೆಗೆ ‘ಸ್ವಾಗತಂ ಕೃಷ್ಣ’ ಎಂಬ ವಿಶೇಷ ಡಿಜಿಟಲ್ ಕಾರ್ಯಕ್ರಮ ನೇರಪ್ರಸಾರವಾಗಲಿದೆ. ಭಕ್ತಿ ಸಂಗೀತ, ಪ್ರವಚನ, ವಿಶೇಷ ಅಭಿಷೇಕ ಹಾಗೂ ಲೈವ್ ಕ್ವಿಜ್ ಸೇರಿದಂತೆ ಹಲವು ಕಾರ್ಯಕ್ರಮಗಳು ಇದರಲ್ಲಿರಲಿವೆ. ಕ್ವಿಜ್‌ನಲ್ಲಿ ಭಾಗವಹಿಸುವ ವೀಕ್ಷಕರಿಗೆ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶವೂ ಇರಲಿದೆ.

ಕೆಟಿಪಿಒದಲ್ಲಿ 5,253 ಖಾದ್ಯಗಳ ನೈವೇದ್ಯ

ವೈಟ್‌ಫೀಲ್ಡ್‌ನ ಕೆಟಿಪಿಒ ಆವರಣದಲ್ಲಿ ನಡೆಯುವ ಜನ್ಮಾಷ್ಟಮಿ ಉತ್ಸವ ಮತ್ತೊಂದು ವಿಶೇಷತೆಗೆ ಸಾಕ್ಷಿಯಾಗಲಿದೆ. ‘ನಿಮ್ಮ ಅಡುಗೆಮನೆಯಿಂದ ಕೃಷ್ಣನಿಗೆ ಪ್ರೀತಿಯಿಂದ’ ಅಭಿಯಾನದಡಿ ಭಕ್ತರಿಂದ ಸಂಗ್ರಹಿಸಲಾದ ಬರೋಬ್ಬರಿ 5,253 ಬಗೆಯ ಆಹಾರ ಪದಾರ್ಥಗಳನ್ನು ಶ್ರೀಕೃಷ್ಣನಿಗೆ ನೈವೇದ್ಯವಾಗಿ ಅರ್ಪಿಸಲಾಗುತ್ತದೆ.

ಯುವ ಸಮುದಾಯವನ್ನು ಆಕರ್ಷಿಸುವ ಉದ್ದೇಶದಿಂದ ಯುವ ಬ್ಯಾಂಡ್‌ಗಳಿಂದ ‘ಕೃಷ್ಣ ಜಾಮ್‌ಫೆಸ್ಟ್’ ಮತ್ತು ಭಜನ್ ಜಾಮಿಂಗ್ ಕಾರ್ಯಕ್ರಮಗಳು ನಡೆಯಲಿವೆ. ಅಂತಾರಾಷ್ಟ್ರೀಯ ಖ್ಯಾತಿಯ ಪ್ರಶಸ್ತಿ ಪುರಸ್ಕೃತ ಕಲಾವಿದ ಅಬ್ಬಿ ವಿ ಅವರ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮವೂ ಆಯೋಜಿಸಲಾಗಿದೆ.

ಪ್ರಮುಖ ಸ್ಥಳಗಳ ದರ್ಶನ ಸಮಯ

ಇಸ್ಕಾನ್ ಹರೇ ಕೃಷ್ಣ ಹಿಲ್, ಕಾರ್ಡ್‌ ರಸ್ತೆ, ರಾಜಾಜಿನಗರ:
ಸೆ.3ರಂದು ಬೆಳಿಗ್ಗೆ 8ರಿಂದ ರಾತ್ರಿ 10ರವರೆಗೆ, ಸೆ.4ರಂದು ಬೆಳಿಗ್ಗೆ 8ರಿಂದ ಮಧ್ಯರಾತ್ರಿ 12ರವರೆಗೆ.

ಇಸ್ಕಾನ್ ವೈಕುಂಠ ಹಿಲ್, ಕನಕಪುರ ರಸ್ತೆ, ವಸಂತಪುರ:
ಸೆ.3ರಂದು ಬೆಳಿಗ್ಗೆ 8ರಿಂದ ರಾತ್ರಿ 10ರವರೆಗೆ, ಸೆ.4ರಂದು ಬೆಳಿಗ್ಗೆ 8ರಿಂದ ಮಧ್ಯರಾತ್ರಿ 12ರವರೆಗೆ.

ಇಸ್ಕಾನ್ ಹರೇ ಕೃಷ್ಣ ಫೀಲ್ಡ್ಸ್, ಕೆಟಿಪಿಒ, ವೈಟ್‌ಫೀಲ್ಡ್:
ಸೆ.4ರಂದು ಬೆಳಿಗ್ಗೆ 8ರಿಂದ ಮಧ್ಯರಾತ್ರಿ 12ರವರೆಗೆ ಹಾಗೂ ಸೆ.5ರಂದು ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ.

ಐವಿ ರೊಸ್ಸಾ ರೆಸಾರ್ಟ್ ಗ್ರೌಂಡ್, ಸರ್ಜಾಪುರ ರಸ್ತೆ:
ಸೆ.4ರಂದು ಬೆಳಿಗ್ಗೆ 7ರಿಂದ ಮಧ್ಯರಾತ್ರಿ 12ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿದೆ.

ಹೀಗಾಗಿ ಬೆಂಗಳೂರಿನಲ್ಲಿ ಈ ಬಾರಿ ಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಆಚರಣೆಗಳ ಜೊತೆಗೆ ಸಂಗೀತ, ನೃತ್ಯ, ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ನಡೆಯಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Shriram Nene Madhuri Dixit

ಏಷ್ಯನ್ ಗೇಮ್ಸ್‌ಗೆ ಟೀಮ್ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

by ದಿಶಾ ಕೆ. ಎಸ್.
September 3, 2026 - 11:08 am
0

Shriram Nene Madhuri Dixit

ಹೊಂಬಾಳೆ ಫಿಲ್ಮ್ಸ್ ‘ಹನುಮಾನ್ ಅಂಶ್’ ಚಿತ್ರದ ವಿದೇಶಿ ವಿತರಣೆಗೆ ಸಜ್ಜು ಸೆ.11ರಂದು ಜಾಗತಿಕ ಬಿಡುಗಡೆ

by ದಿಶಾ ಕೆ. ಎಸ್.
September 3, 2026 - 10:39 am
0

Shriram Nene Madhuri Dixit

ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ಇಂದಿನಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

by ದಿಶಾ ಕೆ. ಎಸ್.
September 3, 2026 - 10:05 am
0

Shriram Nene Madhuri Dixit

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

by ದಿಶಾ ಕೆ. ಎಸ್.
September 3, 2026 - 9:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Shriram Nene Madhuri Dixit
    ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ
    September 3, 2026 | 0
  • Untitled design 2026 09 03T070125.465
    ಬಿಸಿಲನ್ನೂ ಲೆಕ್ಕಿಸದೆ ‘ಬಳ್ಳಾರಿ ಚಲೋ’: ಮೂರನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ
    September 3, 2026 | 0
  • Untitled design 2026 09 03T064814.859
    ಕರ್ನಾಟಕದಲ್ಲಿ ಮಳೆ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?
    September 3, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T183547.496
    ಕಿಲ್ಲರ್ BMTC ಬಸ್‌‌ಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version