• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧುರಂದರ್ ಸಾಂಗ್‌‌ಗೆ ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 10, 2026 - 1:55 pm
in Flash News, ಕರ್ನಾಟಕ, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design 2026 02 10T135231.999

 

ಕಲಬುರಗಿ/ಅಫಜಲಪುರ: ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡುವ ಮತ್ತೊಂದು ವಿವಾದ ಭುಗಿಲೆದ್ದಿದೆ. ಕೈ ಮುಖಂಡನೊಬ್ಬ ಗನ್ ಹಿಡಿದು ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದ ಬೆನ್ನಲ್ಲೇ, ಇದೀಗ ಅದೇ ಮುಖಂಡ ದುಡ್ಡು ಹಾರಿಸುತ್ತಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ.

RelatedPosts

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ADVERTISEMENT
ADVERTISEMENT

ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್. ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಬಲಗೈ ಬಂಟನಾಗಿರೋ ಮತೀನ್ ಪಟೇಲ್, ಗನ್ ಹಿಡಿದು ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಹೊರಬಂದಿದೆ. ಕಲಬುರಗಿ ನಗರದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್‌ ಸಿನಿಮಾ ಧುರಂದರ್ ಸಾಂಗ್‌ಗೆ ಗನ್ ಹಿಡಿದು ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಕೈ ಮುಖಂಡನ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ..

ಮತೀನ್ ಪಟೇಲ್ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಹೊಸ ವಿಡಿಯೋದಲ್ಲಿ, ಮತೀನ್ ಪಟೇಲ್ ಹಣವನ್ನು ಗಾಳಿಗೆ ಎಸೆಯುವುದು ಸ್ಪಷ್ಟವಾಗಿ ಕಾಣುತ್ತದೆ. ಈ ಘಟನೆ ಕಲಬುರಗಿ ನಗರದ ರಿಂಗ್ ರಸ್ತೆಯಲ್ಲಿರುವ ಕ್ಯೂಪಿ ಪ್ಯಾಲೇಸ್ (QP Palace) ನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ನಡೆದಿರುವುದು ಎಂದು ತಿಳಿದುಬಂದಿದೆ. ಕಾರ್ಯಕ್ರಮದ ವೇಳೆ ಜನರ ಮುಂದೆ ದುಡ್ಡು ಹಾರಿಸುವ ಮೂಲಕ ಬಿಲ್ಡಪ್ ತೋರಿಸಲು ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಹಣ ಹಾರಾಟದ ವಿಡಿಯೋದಲ್ಲಿ ಶಾಸಕ ಎಂ.ವೈ. ಪಾಟೀಲ್ ಅವರ ಪುತ್ರ, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣ್ ಕುಮಾರ್ ಪಾಟೀಲ್ ಅವರ ಮೇಲೆ ಹಣ eಸೆಯುವ ದೃಶ್ಯಗಳು ಕಾಣಿಸುತ್ತಿವೆ ಎನ್ನಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಕೈ ಮುಖಂಡ ಮತೀನ್ ಪಟೇಲ್‌ಗೆ ಸಂಬಂಧಿಸಿದ ಈ ಎರಡು ವೈರಲ್ ವೀಡಿಯೋಗಳು ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿ ಕೂಡ ಭಾರೀ ಚರ್ಚೆಗೆ ಕಾರಣವಾಗಿವೆ.

ನೀನು ಬಿಜೆಪಿಗೆ ಸಪೋರ್ಟ್ ಮಾಡ್ತೀಯಾ?: ಅಧಿಕಾರಿಗೆ ಪ್ರದೀಪ್ ಈಶ್ವರ್ ಆಪ್ತನ ಬೆದರಿಕೆ ಆಡಿಯೋ ವೈರಲ್

 

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ನಡೆಯುತ್ತಿರುವ ಹೊತ್ತಲ್ಲೇ, ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡುವ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಂಗ್ರೆಸ್ ಮುಖಂಡ ಹಾಗೂ ತಾಲೂಕು ಅಧ್ಯಕ್ಷ ನಾಗೇಶ್ ರೆಡ್ಡಿ ಅವರು ಬೂತ್ ಲೆವೆಲ್ ಅಧಿಕಾರಿ (ಬಿಎಲ್‌ಓ) ಯೊಬ್ಬರೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.

ವೈರಲ್ ಆಗಿರುವ ಆಡಿಯೋದಲ್ಲಿ, ನಾಗೇಶ್ ರೆಡ್ಡಿ ಅವರು ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಲ್‌ಓ ಶಿವಶಂಕರ್ ಅವರೊಂದಿಗೆ ಅವಾಚ್ಯ ಪದಗಳನ್ನು ಬಳಸಿಕೊಂಡು ನಿಂದಿಸಿದ್ದಾರೆ ಎಂದು ಹೇಳಲಾಗಿದೆ.. ಈ ಘಟನೆ ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್ ಕಾಲೇಜಿನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿವಶಂಕರ್ ಅವರು ಮತದಾರರ ಪಟ್ಟಿ ತಯಾರಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ವೇಳೆ ನಡೆದಿದೆ ಎನ್ನಲಾಗಿದೆ.

ಮತದಾರರ ಪಟ್ಟಿ ಸಂಬಂಧಿಸಿದ ಮಾಹಿತಿಯನ್ನು ನಿಯಮಾನುಸಾರವಾಗಿ ಕೇಳಿದ ಶಿವಶಂಕರ್ ಅವರ ಪ್ರಶ್ನೆಗೆ ಕೋಪಗೊಂಡ ನಾಗೇಶ್ ರೆಡ್ಡಿ, “ನೀನು ಬಿಜೆಪಿಗೆ ಸಪೋರ್ಟ್ ಮಾಡ್ತೀಯಾ?” ಎಂದು ಆರೋಪಿಸಿದ್ದಾರೆ. ಅಲ್ಲದೆ, ಬಿಜೆಪಿ ಪರವಾಗಿ ಕೆಲಸ ಮಾಡುತ್ತಿರುವೆ ಎಂಬ ಆರೋಪ ಹೊರಿಸಿ, ಅವಾಚ್ಯ ಭಾಷೆಯಲ್ಲಿ ನಿಂದಿಸಿರುವುದು ಆಡಿಯೋದಲ್ಲಿ ದಾಖಲಾಗಿದೆ.

ವೈರಲ್ ಆಡಿಯೋದಲ್ಲಿ, “ಈಗಾಗಲೇ ನನ್ನ ಮೇಲೆ ಎರಡು ಕೇಸ್ ಇದೆ, ಇನ್ನೊಂದು ಕೇಸ್ ಆದರೆ ಏನೂ ಆಗಲ್ಲ. ನನಗೆ ಯಾವ ಭಯವೂ ಇಲ್ಲ” ಎಂದು ನಾಗೇಶ್ ರೆಡ್ಡಿ ಹೇಳಿರುವುದು ಕೇಳಿಬರುತ್ತಿದೆ.

ಈ ವೇಳೆ ಬಿಎಲ್‌ಓ ಶಿವಶಂಕರ್ ಅವರು, “ನಾನು ಎಲ್ಲರನ್ನೂ ಒಂದೇ ರೀತಿಯಲ್ಲಿ ಕೇಳುತ್ತಿದ್ದೇನೆ. ಯಾವುದೇ ರಾಜಕೀಯ ಉದ್ದೇಶ ಇಲ್ಲ” ಎಂದು ಸ್ಪಷ್ಟನೆ ನೀಡಿದರೂ, ಅದನ್ನು ಪರಿಗಣಿಸದೆ ನಾಗೇಶ್ ರೆಡ್ಡಿ ಮತ್ತೆ ಅವಾಚ್ಯ ಪದಗಳಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. “ನಾನು ಯಾವತ್ತೂ ಮಾತನಾಡಿಲ್ಲ, ಇವತ್ತು ಮಾತನಾಡುತ್ತಿದ್ದೀನಿ” ಎಂದು ಹೇಳುತ್ತಾ, ರಾಜಕೀಯ ಒತ್ತಡ ಹೇರಿದ ಆರೋಪವೂ ಕೇಳಿಬರುತ್ತಿದೆ.

ಇದೇ ವೇಳೆ, ಈ ಆಡಿಯೋ ಶಾಸಕ ಪ್ರದೀಪ್ ಈಶ್ವರ್ ಅವರ ಬೆಂಬಲಿಗನಿಂದ ಬಂದಿದೆ ಎನ್ನಲಾಗುತ್ತಿದ್ದು, ಇದರಿಂದ ಕಾಂಗ್ರೆಸ್ ಪಕ್ಷದೊಳಗೂ ಅಸಮಾಧಾನ ಮೂಡಿದೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ವರ್ತನೆಯನ್ನು ಖಂಡಿಸಿ, ಪಕ್ಷದ ಇಮೇಜ್‌ಗೆ ಧಕ್ಕೆಯಾಗುತ್ತಿದೆ ಎಂದು ಆಂತರಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸದ್ಯ ಈ ಆಡಿಯೋ ಗ್ಯಾರಂಟಿ ನ್ಯೂಸ್‌ಗೆ ಲಭ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಚುನಾವಣಾ ಆಯೋಗ ಹಾಗೂ ಶಿಕ್ಷಣ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version