15 ಎಕರೆ ಬೆಳೆ ನಾಶ: ನೆರೆ ಪ್ರದೇಶ ವೀಕ್ಷಿಸಿದ ಶಾಸಕ ಅವಿನಾಶ್ ಜಾಧವ್

Untitled design 2025 09 30t153634.419

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪೂರ ಗ್ರಾಮದಲ್ಲಿ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಹಲವಾರು ಎಕರೆ ಕಬ್ಬು ಬೆಳೆ ಸಂಪೂರ್ಣವಾಗಿ ನಾಶವಾಗಿದೆ. 

ಈ ಅನಿರೀಕ್ಷಿತ ಹವಾಮಾನ ವೈಪರೀತ್ಯದ ಪರಿಣಾಮವಾಗಿ ಸುಮಾರು 15 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣವಾಗಿ ನೆಲಕ್ಕಚ್ಚಿ ಹೋಗಿದೆ. ಕಬ್ಬು ಗಿಡಗಳು ನೆಲಸೂಸಿರುವುದರಿಂದ, ಯಾಂತ್ರಿಕವಾಗಿ ಅವನ್ನು ಕೊಯ್ಲು ಮಾಡುವುದು ಕಷ್ಟಸಾಧ್ಯವಾಗಿದ್ದು, ಇದರಿಂದ ಬೆಳೆಯ ಉತ್ಪಾದನೆ ಮತ್ತು ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಬೀಳಲಿದೆ. 

ಈ ಸಮಯದಲ್ಲಿ ಶಾಸಕ ಅವಿನಾಶ್ ಜಾಧವ್ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಹಾನಿಗೊಳಗಾದ ಬೆಳೆಗಳನ್ನು ಸ್ವತಃ ಪರಿಶೀಲಿಸಿದ ಅವರು, ಬೆಳೆ ಹಾನಿಯಾದ ರೈತರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಈ ಘಟನೆಯ ನಂತರ ರೈತರು ಸರ್ಕಾರದಿಂದ ತ್ವರಿತ ಪರಿಹಾರ ಮತ್ತು ಪುನರ್ವಸತಿ ಪ್ಯಾಕೇಜ್ ನೀಡುವಂತೆ ಶಾಸಕರಿಂದ ಮನವಿ ಮಾಡಿಕೊಂಡಿದ್ದಾರೆ.

.

Exit mobile version