ಕರ್ನಾಟಕ ಬಂದ್‌‌..ಬಂದ್.. ಬೆಂಗಳೂರಿನಲ್ಲಿ ಟೈಟ್ ಸೆಕ್ಯುರಿಟಿ!

11 (36)

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ದಾವಣಗೆರೆ, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯದಲ್ಲಿ ಪ್ರತಿಭಟನಾಕಾರರು ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಪಂಜಿನ ಮೆರವಣಿಗೆಯ ಮೂಲಕ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕುತ್ತಿದ್ದಾರೆ. 

ಪ್ರತಿಭಟನೆಯ ಪ್ರಮುಖ ಬೇಡಿಕೆಗಳು

ಬೆಳಗಾವಿ ಎಂಇಎಸ್ ಪುಂಡರ ಗಡಿಪಾರು, ಎಂಇಎಸ್ ನಿಷೇಧ, ಮಹಾದಾಯಿ, ಕಳಸಾ-ಬಂಡೂರಿ, ಮೇಕೆದಾಟು ಯೋಜನೆ, ಉತ್ತರ ಕರ್ನಾಟಕ ಅಭಿವೃದ್ಧಿ, ಹಿಂದಿ ಏರಿಕೆ ವಿರೋಧ ಸೇರಿ 22 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದು, ಈ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಲಾಗಿದೆ.

ADVERTISEMENT
ADVERTISEMENT
ಬೆಂಗಳೂರುದಲ್ಲಿ ಬೃಹತ್ ಪ್ರತಿಭಟನೆ

ಇಂದು ಬೆಳಿಗ್ಗೆ 11.30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಸಾವಿರಾರು ಹೋರಾಟಗಾರರು ಮೆರವಣಿಗೆ ನಡೆಸಲಿದ್ದು, ಬಳಿಕ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಇದೀಗ ಟೌನ್ ಹಾಲ್ ಬಳಿ ಮೆರವಣಿಗೆಗೆ ಪೊಲೀಸರು ಅನುಮತಿ ನೀಡಿದ್ದು, ಪೊಲೀಸ್ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಅಲರ್ಟ್ ಆಗಿದ್ದಾರೆ.

ಬಂದ್‌ನಲ್ಲಿ ಪಾಲ್ಗೊಳ್ಳಲು ಸಂಘಟಕರಿಗೆ ಎಚ್ಚರಿಕೆ

ಮೆರವಣಿಗೆಯಲ್ಲಿ ಭಾಗಿಯಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ವಾಟಾಳ್ ನಾಗರಾಜ್ ಸೇರಿದಂತೆ ಸಂಘಟಕರಿಗೆ ನೋಟಿಸ್ ನೀಡಲಾಗಿದ್ದು, ಸುಪ್ರಿಂ ಕೋರ್ಟ್ ಗೈಡ್‌ಲೈನ್ಸ್‌ಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ.

ಟ್ರಾಫಿಕ್ ಸಮಸ್ಯೆ ತಡೆಗೆ ಕ್ರಮ

ಟೌನ್ ಹಾಲ್, ಜೆಸಿ ರೋಡ್, ಮೆಜೆಸ್ಟಿಕ್, ಕಾರ್ಪೊರೇಷನ್ ಸುತ್ತಮುತ್ತ ಟ್ರಾಫಿಕ್ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಪ್ರಯಾಣಿಕರು ಎಚ್ಚರಿಕೆಯಿಂದಿರಬೇಕು. ಕೇಂದ್ರ ಮತ್ತು ಪಶ್ಚಿಮ ವಿಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 1200 ಪೊಲೀಸರನ್ನು ಫೀಲ್ಡ್‌ಗೆ ಇಳಿಸಲಾಗಿ, 65 ಪಿಎಸ್‌ಐ, 46 ಕೆಎಸ್‌ಆರ್‌ಪಿ, 30 ಸಿಎಆರ್ ಹಾಗೂ ಎರಡು ವಾಟರ್ ಜೆಟ್‌ಗಳನ್ನು ನಿಯೋಜಿಸಲಾಗಿದೆ.

ಈಗಾಗಲೇ, ಹಿಂದಿನ ಹೋರಾಟಗಳಲ್ಲಿ ನಡೆದ ಅಹಿತಕರ ಘಟನೆಗಳನ್ನು ಪೂರಕವಾಗಿ ಈ ಬಾರಿ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಪ್ರತಿಭಟನಾಕಾರರು ಶಾಂತಿಯುತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕೆಂಬ ಆಹ್ವಾನವನ್ನು ಪೊಲೀಸ್ ಇಲಾಖೆ ಮಾಡಿದೆ.

Exit mobile version