ಕರ್ನಾಟಕ ಬಂದ್‌‌ಗೆ ಯಾವ ಜಿಲ್ಲೆಗಳಲ್ಲಿ ಬೆಂಬಲ..ಎಲ್ಲೆಲ್ಲಿ ಪ್ರತಿಭಟನೆ ನಡೆಯುತ್ತಿದೆ..?

11 (42)

ಮಹಾರಾಷ್ಟ್ರದ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲಿನ ದಬ್ಬಾಳಿಕೆಯನ್ನು ಖಂಡಿಸಿ ಕನ್ನಡ ಮತ್ತು ಕರ್ನಾಟಕದ ಹಿತರಕ್ಷಣೆಗಾಗಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್ ಆಯೋಜಿಸಲಾಗಿತ್ತು.ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್ ಇರಲಿದೆ.

ಕರ್ನಾಟಕ ಬಂದ್‌‌ ಈ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ 

ಬೆಂಗಳೂರು, ಬೆಳಗಾವಿ, ಕೊಪ್ಪಳ ಮುಂತಾದ ಜಿಲ್ಲೆಗಳಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊಪ್ಪಳದಲ್ಲಿ ಕರುನಾಡ ಯುವ ಪಡೆ ವೇದಿಕೆ ಕಾರ್ಯಕರ್ತರು ಅಂಗಡಿಗಳನ್ನು ಬಂದ್ ಮಾಡಲು ಮುಂದಾದರು. ಅಲ್ಲದೆ, ಬಸ್ ನಿಲ್ದಾಣದ ಎದುರಿನ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದು, ಹೋಟೆಲ್, ಹಣ್ಣಿನ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದರು. ಇದರಿಂದ ರಸ್ತೆ ಸಂಚಾರಕ್ಕೂ ಅಡ್ಡಿಯಾಗಿದೆ.

ADVERTISEMENT
ADVERTISEMENT
ಈ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌‌ಗೆ ಬೆಂಬಲವಿಲ್ಲ

ಚಿತ್ರದುರ್ಗ, ತುಮಕೂರು, ಯಾದಗಿರಿ, ಬಳ್ಳಾರಿ, ಕೋಲಾರ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ಸೂಚಿಸಿಲ್ಲ. ಇಲ್ಲಿನ ಜನರು ಎಂದಿನಂತೆ ವಾಹನ ಸಂಚಾರ, ಅಂಗಡಿ ಮುಂಗಟ್ಟುಗಳ ವಹಿವಾಟು, ಶಾಲಾ ಕಾಲೇಜುಗಳ ದಿನಚರಿ ನಡೆಯುತ್ತಿವೆ. ಜಿಲ್ಲಾಡಳಿತ ಹಾಗೂ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಬೆಂಬಲ ನೀಡಿದ ಸಂಘಟನೆಗಳು

ಈ ಬಂದ್‌ಗೆ ಬೆಂಬಲ ನೀಡಿದ ಪ್ರಮುಖ ಸಂಘಟನೆಗಳು ಕನ್ನಡ ಪರ ಹೋರಾಟಗಾರರ ಸಂಘಟನೆಯಾಗಿದ್ದು, ಬೆಳಗಾವಿಯಲ್ಲಿ ಮಹಾರಾಷ್ಟ್ರಕ್ಕೆ ಹೋಗುವ ಬಸ್‌ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿತ್ತು. ಇದರಿಂದ ಮಹಾರಾಷ್ಟ್ರಕ್ಕೆ ಹೋಗಬೇಕಾದ ಪ್ರಯಾಣಿಕರಿಗೆ ತೀವ್ರ ಅಡ್ಡಿಯಾಗಿದೆ. ಕೊಪ್ಪಳದಲ್ಲಿ ರಸ್ತೆಗೆ ಇಳಿದ ಪ್ರತಿಭಟನಾಕಾರರು ವಾಹನ ಸಂಚಾರವನ್ನು ತಡೆದು ಪ್ರತಿಭಟನೆ ನಡೆಸಿದರು.

ಒಟ್ಟಿನಲ್ಲಿ, ಈ ಬಾರಿಯ ಕರ್ನಾಟಕ ಬಂದ್‌ನ ಪ್ರತಿಕ್ರಿಯೆ ಮಿಶ್ರವಾಗಿದ್ದು, ಕೆಲವೊಂದು ಜಿಲ್ಲೆಗಳಲ್ಲಿ ಬಂದ್‌ಗೆ ಸಂಪೂರ್ಣ ಬೆಂಬಲವಿದ್ದರೆ, ಇತರ ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ಸೂಚಿಸಿಲ್ಲ.

Exit mobile version