• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿನಯ್ ಸೋಮಯ್ಯ ಆ*ತ್ಮಹ*ತ್ಯೆ: ಎಫ್‌ಐಆರ್‌ನಲ್ಲಿ 2 ಶಾಸಕರ ಹೆಸರು ಸೇರಿಸಲು ವಿಜಯೇಂದ್ರ ಆಗ್ರಹ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 5, 2025 - 1:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 04 05t135042.413

ಮಡಿಕೇರಿ: ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸುವ ವರೆಗೆ ನಾವಿಲ್ಲೇ ಕಾಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಎಚ್ಚರಿಸಿದ್ದಾರೆ.

ಅವರು ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಹೆಸರು ಎಫ್‍ಐಆರ್‍ನಲ್ಲಿ ಸೇರಿಸದೆ ಇದ್ದರೆ ಮುಂದೆ ಆಗುವುದಕ್ಕೆ ಅವರೇ ಹೊಣೆಗಾರರು. ನಾವು ಜವಾಬ್ದಾರರಲ್ಲ ಎಂದು ತಿಳಿಸಿದರು. ಒಂದು ಗಂಟೆ ಶಾಂತಿಯುತವಾಗಿ ಕಾಯುತ್ತೇವೆ ಎಂದು ಎಸ್ಪಿಯವರಿಗೂ ತಿಳಿಸಿದ್ದಾಗಿ ಹೇಳಿದರು. ಹಿರಿಯ ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿಯದಿರಿ ಎಂದ ಅವರು, ಒಬ್ಬ ಅಮಾಯಕ ಬಿಜೆಪಿ ಕಾರ್ಯಕರ್ತ ಅಂದರೆ ಅವರು ಮನುಷ್ಯರಲ್ಲವೇ ಎಂದು ಪ್ರಶ್ನಿಸಿದರು.

RelatedPosts

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

ADVERTISEMENT
ADVERTISEMENT
ತುಘಲಕ್ ದರ್ಬಾರ್ ನಡೆಸುತ್ತಿದ್ದಾರಾ?

ಆಡಳಿತ ಪಕ್ಷದ ಶಾಸಕರ ವೈಫಲ್ಯಗಳನ್ನು ಹೇಳಬಾರದೆಂದರೆ ಇದೇನು ಕಾಂಗ್ರೆಸ್ಸಿನವರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಶಾಸಕರು ಏನೆಂದುಕೊಂಡಿದ್ದಾರೆ? ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಅವರು ನುಡಿದರು.

ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಇದನ್ನು ಹಗುರವಾಗಿ ಪರಿಗಣಿಸದಿರಿ ಎಂದರಲ್ಲದೆ, ಹಿಂದೆ ಗುಲ್ಬರ್ಗದಲ್ಲಿ, ಯಾದಗಿರಿ ಪರಶುರಾಂ ಆತ್ಮಹತ್ಯೆ ಪ್ರಕರಣದಲ್ಲಿ ಏನಾಗಿದೆ? ಎಂದು ಕೇಳಿದರು. ಸಚಿನ್ ಪ್ರಕರಣದಲ್ಲಿ ಏನಾಗಿದೆ? ಅಧಿಕಾರಿ ಚಂದ್ರಶೇಖರ್ ಪ್ರಕರಣದಲ್ಲಿ ಏನಾಗಿದೆ ಎಂಬುದು ರಾಜ್ಯದ ಜನರ ಕಣ್ಮುಂದೆ ಇದೆ ಎಂದು ಗಮನ ಸೆಳೆದರು.

ಬೆಂಗಳೂರಿನಲ್ಲಿ ಎಫ್‍ಐಆರ್‍ನಲ್ಲಿ ಶಾಸಕರ ಹೆಸರನ್ನು ಉಲ್ಲೇಖಿಸದ ಅಯೋಗ್ಯರ ಜವಾಬ್ದಾರಿ ಇದು. ಅವರು ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಅನುಮತಿ ಪಡೆದು ಶಾಸಕರ ಹೆಸರು ಸೇರಿಸಬೇಕು. ಇದು ಅಧಿಕಾರಿಗಳ ಕರ್ತವ್ಯ ಎಂದು ಎಚ್ಚರಿಸಿದರು. ಈ ಕುರಿತು ಎಸ್ಪಿಗೂ ತಿಳಿಸಿದ್ದಾಗಿ ಹೇಳಿದರು. ಗೃಹ ಸಚಿವರೂ ಇದನ್ನು ಗಮನಿಸಬೇಕು ಎಂದು ತಿಳಿಸಿದರು.

ಮುಂದೆ ಆಗುವ ಹೆಚ್ಚು ಕಡಿಮೆಗೆ ನಾವು ಹೊಣೆಗಾರರಲ್ಲ ಎಂದು ಎಸ್ಪಿಯವರಿಗೂ ತಿಳಿಸಿದ್ದಾಗಿ ವಿವರಿಸಿದರು. ಪೊಲೀಸ್ ವ್ಯವಸ್ಥೆಯಿಂದ ಹೀಗಾಗಿದೆ. ಅವರಿಂದ, ಪೊಲೀಸರಿಂದ ಏನು ನ್ಯಾಯ ನಿರೀಕ್ಷಿಸಲು ಸಾಧ್ಯ ಎಂದು ಕೇಳಿದರು.

ಪೊಲೀಸ್ ಠಾಣೆ ಮೂಲಕ ನಮ್ಮ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ಆಗುತ್ತಿದೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಅವಕಾಶ ಕೊಡುವುದಿಲ್ಲ ಎಂದರು. ರಾಜ್ಯದ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಂತೆ ವರ್ತಿಸುತ್ತಿವೆ. ಎಲ್ಲದಕ್ಕೂ ಇತಿಮಿತಿ ಇರುತ್ತದೆ ಎಂದು ಅವರು ತಿಳಿಸಿದರು. ವಿನಯ್ ಸೋಮಯ್ಯ ಅವರು ಕಾಂಗ್ರೆಸ್ಸಿನ ಇಬ್ಬರು ಶಾಸಕರು ಹಾಗೂ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಹೆಸರನ್ನೂ ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಇದೆಲ್ಲದರ ನಡುವೆ ನಿನ್ನೆ ಬೆಂಗಳೂರಿನಲ್ಲಿ ನಮ್ಮ ವಿಪಕ್ಷ ನಾಯಕರು ಹೋಗಿದ್ದರೂ ಎಫ್‍ಐಆರ್‍ನಲ್ಲಿ ಶಾಸಕರ ಹೆಸರನ್ನು ಉಲ್ಲೇಖಿಸಿಲ್ಲ; ಇದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು. ಪೊನ್ನಣ್ಣ ಅವರು ರಾಜ್ಯದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು. ಮಂಥರ್ ಗೌಡ ಅವರೂ ಪ್ರಭಾವಿ ಶಾಸಕರು. ಇವರಿಬ್ಬರೂ ಆಡಳಿತ ಪಕ್ಷದವರೇ ಆಗಿದ್ದಾರೆ. ಅವರ ಒತ್ತಡದಿಂದ ನಮ್ಮ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನುಡಿದರು.

ಇವರ ದಬ್ಬಾಳಿಕೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಫ್‍ಐಆರ್‍ನಲ್ಲಿ ಪೊಲೀಸರು ಇವರ ಹೆಸರು ಬಿಟ್ಟಿದ್ದಾರೆ ಎಂದರೆ, ಖಂಡಿತ ನಾವು ಒಪ್ಪುವುದಿಲ್ಲ ಎಂದರು. ಮಡಿಕೇರಿ ಹಾಗೂ ರಾಜ್ಯದಲ್ಲಿ ಸಾಮಾಜಿಕ ಜಾಲತಾಣಗಳ ಆಡ್ಮಿನ್‍ಗಳ ಮೇಲೆ ಎಫ್‍ಐಆರ್ ಹಾಕುತ್ತಿದ್ದಾರೆ. ಅವರ ತೇಜೋವಧೆ ಮಾಡುತ್ತಿದ್ದಾರೆ. ಅವರು ಪೊಲೀಸ್ ಠಾಣೆಗೆ ಅಲೆಯಬೇಕಾಗಿದೆ. ಅವರೇನು ಅಪರಾಧ ಮಾಡಿದ್ದಾರೆ? ಎಂದು ಕೇಳಿದರು.

ಶಾಸಕರ ವೈಫಲ್ಯ, ಆಸ್ಪತ್ರೆ ಶೌಚಾಲಯಗಳನ್ನು ಸರಿಪಡಿಸಬೇಕೆಂಬ ಕಾಳಜಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಅಥವಾ ಮತ್ತೊಬ್ಬ ಕಾರ್ಯಕರ್ತನ ಪೋಸ್ಟನ್ನು ರಿಟ್ವೀಟ್ ಮಾಡಿದ್ದು ಮಹಾ ಅಪರಾಧ ಎಂಬಂತೆ ಅವರ ಮೇಲೆ ಎಫ್‍ಐಆರ್ ರಿಜಿಸ್ಟರ್ ಮಾಡಿ ಅರೆಸ್ಟ್ ಮಾಡುವ ಪ್ರಯತ್ನ ನಡೆದಿದೆ. ತಡೆಯಾಜ್ಞೆ ಇದ್ದರೂ ಇನ್ನೊಂದು ಕೇಸಿನಲ್ಲಿ ಸಿಲುಕಿಸಿ ಬಂಧಿಸುವ ಪ್ರಯತ್ನ ಮಾಡಿದ್ದಾರೆ. ಇದು ಖಂಡಿತ ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ವಿನಯ್ ಸೋಮಯ್ಯ ಅವರು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವಾಟ್ಸ್ ಆಪ್ ಸಂದೇಶ, ಡೆತ್ ನೋಟಿನಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಗಳೇನು? ಯಾವ ರೀತಿ ಚಿತ್ರಹಿಂಸೆ ಆಗಿದೆ? ಮಾನಸಿಕ ಕಿರುಕುಳ ಆಗಿದೆ? ಎಂದು ವಿವರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸ್ಥಳೀಯ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡರ ವೈಫಲ್ಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದೇ ಅಪರಾಧ ಎಂಬಂತೆ ಕಿರುಕುಳ, ಒತ್ತಡ ನೀಡಲಾಗಿದೆ. ವಿನಯ್ ಮೇಲೆ ಎಫ್‍ಐಆರ್ ರಿಜಿಸ್ಟರ್ ಮಾಡಿಸಿದ್ದಾರೆ ಎಂದು ಆಕ್ಷೇಪಿಸಿದರು.

ಹೈಕೋರ್ಟಿನಲ್ಲಿ ತಡೆಯಾಜ್ಞೆ ಇದ್ದು, ಜಾಮೀನು ಪಡೆದಿದ್ದರೂ ಪೊಲೀಸರು ಮನೆ ಬಾಗಿಲಿಗೆ ಹೋಗಿ, ಬೆಂಗಳೂರಿನ ಮನೆಗೂ ಹೋಗಿದ್ದಾರೆ. ಇದರಿಂದ ಮಾನಸಿಕವಾಗಿ ಸಾಕಷ್ಟು ನೊಂದಿದ್ದ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T233711.061

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

by ಶಾಲಿನಿ ಕೆ. ಡಿ
February 25, 2026 - 11:39 pm
0

Untitled design 2026 02 25T231308.406

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

by ಶಾಲಿನಿ ಕೆ. ಡಿ
February 25, 2026 - 11:19 pm
0

Untitled design 2026 02 25T225733.264

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

by ಶಾಲಿನಿ ಕೆ. ಡಿ
February 25, 2026 - 11:06 pm
0

Untitled design 2026 02 25T224450.764

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 25, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T233711.061
    ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
    February 25, 2026 | 0
  • Untitled design 2026 02 25T231308.406
    ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ
    February 25, 2026 | 0
  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 25T224450.764
    ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್
    February 25, 2026 | 0
  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version