ಕರ್ನಾಟಕ ಬಜೆಟ್ 2026: ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್‌ನ ಟಾಪ್ 30 ಹೈಲೈಟ್ಸ್..!

BeFunky collage 2026 03 06T145740.186

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದರು. ಸುದೀರ್ಘ 3 ಗಂಟೆ 40 ನಿಮಿಷಗಳ ಭಾಷಣದಲ್ಲಿ ರಾಜ್ಯದ ಆರ್ಥಿಕತೆಗೆ ಹೊಸ ದಿಕ್ಕು ನೀಡುವ ಅನೇಕ ಯೋಜನೆಗಳನ್ನು ಘೋಷಿಸಿದರು. ಗ್ಯಾರಂಟಿ ಯೋಜನೆಗಳ ಮುಂದುವರಿಕೆಯಿಂದ ಹಿಡಿದು ಉದ್ಯೋಗ, ಆರೋಗ್ಯ, ಶಿಕ್ಷಣ, ಕೃಷಿ, ಮಹಿಳಾ-ಮಕ್ಕಳ ಕಲ್ಯಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.

ಇಲ್ಲಿ ಬಜೆಟ್‌ನ ಟಾಪ್ 30 ಹೈಲೈಟ್ಸ್ ಒಂದೇ ಕಡೆ:

  1. ದೇಶದ ಜಿಡಿಪಿ ಬೆಳವಣಿಗೆ 7.4% ಇದ್ದರೆ ಕರ್ನಾಟಕದಲ್ಲಿ 8.1% ದಾಖಲು
  2. ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಮೀಸಲು
  3. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯ ನಿಷೇಧ
  4. ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಬೋಧಕ ಹುದ್ದೆಗಳ ಭರ್ತಿ
  5. ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2 ಸಾವಿರ ಬೋಧಕ ಹುದ್ದೆಗಳ ಭರ್ತಿ
  6. ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ
  7. 18 ವರ್ಷದೊಳಗಿನ ಮಕ್ಕಳ ಡಯಾಬಿಟಿಸ್ ಚಿಕಿತ್ಸೆಗೆ ಉಚಿತ ಇನ್ಸುಲಿನ್
  8. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ
  9. ಕಾರವಾರ, ಯಾದಗಿರಿಯಲ್ಲಿ ₹100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
  10. ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ
  11. ಐಟಿಐ ಕೋರ್ಸು ಮಾಡಿದವರಿಗೆ ಪದವಿ ಪೂರ್ವ ಪ್ರಮಾಣಪತ್ರ ವಿತರಣೆ
  12. ಬೆಂಗಳೂರಲ್ಲಿ 158 ಕಿ.ಮೀ. ರಸ್ತೆಗಳ ವೈಟ್ ಟಾಪಿಂಗ್
  13. ಈ ವರ್ಷ 41 ಕಿ.ಮೀ. ಮೆಟ್ರೋ ಮಾರ್ಗ ಪೂರ್ಣಗೊಳಿಸುವ ಯೋಜನೆ
  14. ಎಲೆಕ್ಟ್ರಿಕ್ ವಾಹನಗಳ ಉತ್ತೇಜನಕ್ಕೆ 1,250 ಚಾರ್ಜಿಂಗ್ ಪಾಯಿಂಟ್‌ಗಳ ಸ್ಥಾಪನೆ
  15. ಬೆಳಗಾವಿಯಲ್ಲಿ 1,000 ಎಕರೆಯಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿ
  16. ಪತ್ರಿ ಕೆಜಿ ರೇಷ್ಮೆ ಗೂಡಿಗೆ ಸಾಗಾಣಿಕಾ ವೆಚ್ಚ ₹10ರಿಂದ ₹20ಕ್ಕೆ ಹೆಚ್ಚಳ
  17. ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ, ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್‌ಗಳ ಸ್ಥಾಪನೆ
  18. ರಾಜ್ಯದಲ್ಲಿ ಪ್ರಪ್ರಥಮವಾಗಿ ಜಾನುವಾರುಗಳಿಗೆ ಸಿ.ಟಿ ಸ್ಕ್ಯಾನಿಂಗ್ ಕೇಂದ್ರ
  19. ಬೆಂಗಳೂರು ಮತ್ತು ಬೀದರ್ ಪಶು ಆಸ್ಪತ್ರೆಗಳಲ್ಲಿ ಸಿ.ಟಿ ಸ್ಕ್ಯಾನಿಂಗ್ ಕೇಂದ್ರ
  20. ಬೆಂಗಳೂರು ಮತ್ತು ಬೀದರ್‌ನಲ್ಲಿ ‘ಶ್ವಾನ ಸಂತಾನ ನಿಯಂತ್ರಣ ಕೇಂದ್ರ’ ಸ್ಥಾಪನೆ
  21. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ, ಚಿಕ್ಕಮಗಳೂರಲ್ಲಿ ಮತ್ಸ್ಯ ದರ್ಶಿನಿ ಸ್ಥಾಪನೆ
  22. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ₹30,000 ಕೋಟಿ ಸಾಲ
  23. ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ
  24. ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಯಾತ್ರೆಗೆ ₹5,000 ಸಹಾಯ
  25. ಸಂತ ಶಿಶುನಾಳ ಶರೀಫರ ಹೆಸರಲ್ಲಿ 10 ಹೊಸ ವಸತಿ ಶಾಲೆಗಳ ಸ್ಥಾಪನೆ
  26. 25 ಹೊಸ ಅಲ್ಪಸಂಖ್ಯಾತ ಮೆಟ್ರಿಕ್ ವಿದ್ಯಾರ್ಥಿ ನಿಲಯಗಳ ಸ್ಥಾಪನೆ
  27. 50 ಸರ್ಕಾರಿ ಕಾಲೇಜುಗಳಲ್ಲಿ ಆಧುನಿಕ 10 AI ಪ್ರಯೋಗಾಲಯಗಳ ಸ್ಥಾಪನೆ
  28. ಸಾರಿಗೆ ನೌಕರರ ವೇತನ ಬಾಕಿ ಪಾವತಿಗೆ ₹1,271 ಕೋಟಿ ಮೀಸಲು
  29. ಕೊರಟಗೆರೆ ತಾ. ವಡೇರಹಳ್ಳಿಯಲ್ಲಿ 12 TMC ಸಾಮರ್ಥ್ಯದ ಡ್ಯಾಂ ನಿರ್ಮಾಣ
  30. ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆಗೆ ಅವಕಾಶ

ಸಿದ್ದರಾಮಯ್ಯ ಅವರ ಈ ಬಜೆಟ್ ರಾಜ್ಯದ ಆರ್ಥಿಕತೆಯನ್ನು ಬಲಪಡಿಸುವ ಜೊತೆಗೆ ಜನಕಲ್ಯಾಣ ಯೋಜನೆಗಳಿಗೆ ಭರ್ಜರಿ ಒತ್ತು ನೀಡಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಮುಂದುವರಿಕೆಯೊಂದಿಗೆ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.

Exit mobile version