ಮಹಿಳೆಯರೇ ಗಮನಿಸಿ! ಫ್ರೀ ಬಸ್‌ಗೆ ಇನ್ಮುಂದೆ ಆಧಾರ್‌ ಅಲ್ಲ, ಸ್ಮರ್ಟ್‌ಕಾರ್ಡ್ ಕಡ್ಡಾಯ

Untitled design 2026 02 13T082049.722

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಕಠಿಣ ನಿರ್ಧಾರಗಳನ್ನು ಕೈಗೊಂಡಿದೆ. ಇವುಗಳಲ್ಲಿ ಶಕ್ತಿ ಯೋಜನೆಗೆ ಹೊಸ ರೂಪ ನೀಡುವುದು ಹಾಗೂ ಬೆಂಗಳೂರಿನ ಐತಿಹಾಸಿಕ ರೇಸ್ ಕೋರ್ಸ್ ಸ್ಥಳಾಂತರ ಪ್ರಮುಖವಾಗಿವೆ.

ಶಕ್ತಿ ಯೋಜನೆಗೆ ಸ್ಮಾರ್ಟ್ ಸ್ಪರ್ಶ: ಇನ್ಮುಂದೆ ಆಧಾರ್ ಬೇಡ!

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ‘ಶಕ್ತಿ’ ಯೋಜನೆಗೆ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಇಲ್ಲಿಯವರೆಗೆ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿ ತೋರಿಸಿ ಪ್ರಯಾಣಿಸುತ್ತಿದ್ದರು. ಆದರೆ, ಇನ್ನು ಮುಂದೆ ಕೇವಲ ‘ಶಕ್ತಿ ಸ್ಮಾರ್ಟ್ ಕಾರ್ಡ್’ (Shakti Smart Card) ಇದ್ದರೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲು ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ನಿಗಮಗಳ ಮೂಲಕ ಈ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಗುವುದು. ಇದರಿಂದ ಯೋಜನೆಯಲ್ಲಿ ಪಾರದರ್ಶಕತೆ ಬರಲಿದ್ದು, ಆಧಾರ್ ಕಾರ್ಡ್ ತೋರಿಸುವ ವ್ಯವಸ್ಥೆಗೆ ಹಂತ-ಹಂತವಾಗಿ ಬ್ರೇಕ್ ಬೀಳಲಿದೆ.

ಕುಣಿಗಲ್‌ಗೆ ಸ್ಥಳಾಂತರಗೊಳ್ಳಲಿರುವ ರೇಸ್ ಕೋರ್ಸ್

ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ಅಥವಾ ಟರ್ಫ್ ಕ್ಲಬ್ ಅನ್ನು ಸ್ಥಳಾಂತರಿಸುವ ಐತಿಹಾಸಿಕ ನಿರ್ಧಾರವನ್ನು ಕ್ಯಾಬಿನೆಟ್ ತೆಗೆದುಕೊಂಡಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಸ್ಟಡ್ ಫಾರ್ಮ್‌ಗೆ ರೇಸ್ ಕೋರ್ಸ್ ಶಿಫ್ಟ್ ಆಗಲಿದೆ. ಬೆಂಗಳೂರಿನ ರೇಸ್ ಕೋರ್ಸ್ ಜಾಗದ ಲೀಸ್ ಅವಧಿ ಮುಕ್ತಾಯಗೊಂಡಿರುವುದು ಮತ್ತು ಬಾಡಿಗೆ ಪರಿಷ್ಕರಣೆಯಾಗದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ವಿಶಾಲವಾದ ಜಾಗವನ್ನು ಸರ್ಕಾರ ತನ್ನ ಸುಪರ್ದಿಗೆ ಪಡೆದು, ಸಾರ್ವಜನಿಕ ಹಿತಾಸಕ್ತಿಗೆ ಬಳಸಿಕೊಳ್ಳುವ ಸಾಧ್ಯತೆಯಿದೆ.

ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಲುವಾಗಿ, ಸರ್ಕಾರಿ ಶಾಲೆಯ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ‘ವಿದ್ಯಾವಿಕಾಸ’ ಯೋಜನೆಯಡಿ ಈ ಸೌಲಭ್ಯ ದೊರೆಯಲಿದ್ದು, ಇದರಿಂದ ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಕೃಷಿ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ

ಇವುಗಳ ಜೊತೆಗೆ ನ್ಯಾಯಾಲಯದ ಕಟ್ಟಡ ಉದ್ಘಾಟನಾ ಶಿಷ್ಟಾಚಾರಗಳಲ್ಲಿ ಶಾಸಕರಿಗೆ ಪ್ರಾತಿನಿಧ್ಯ ನೀಡುವುದು ಹಾಗೂ ವಿವಾದಾತ್ಮಕ ಎಸ್‌ಐಆರ್ (SIR) ಕುರಿತು ಕಾನೂನು ಇಲಾಖೆಯಿಂದ ಸಮಗ್ರ ವರದಿ ಪಡೆಯಲು ನಿರ್ಧರಿಸಲಾಗಿದೆ. ಒಟ್ಟಾರೆಯಾಗಿ, ಈ ಸಂಪುಟ ಸಭೆಯು ಸಾರಿಗೆ, ಶಿಕ್ಷಣ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಸಮಾನ ಆದ್ಯತೆ ನೀಡಿದೆ.

Exit mobile version