• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2026 - 9:11 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಮುನ್ಸೂಚನೆ (18)

ಬೆಂಗಳೂರು, ಜುಲೈ 30: ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆಯೇ ಹೊರತು ಅಂತಿಮ ತೀರ್ಮಾನಕ್ಕೆ ಬರುವ ಲಕ್ಷಣಗಳು ಕಾಣಿಸುತ್ತಿಲ್ಲ. ಖಾಲಿ ಇರುವ 20 ಸಚಿವ ಸ್ಥಾನಗಳ ಭರ್ತಿಗೆ ಹೈಕಮಾಂಡ್ ಸಮ್ಮತಿ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರು ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸುತ್ತಿದ್ದರೂ, ಅಂತಿಮ ನಿರ್ಧಾರ ಇನ್ನೂ ಹೊರಬಿದ್ದಿಲ್ಲ. ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಅಂತಿಮ ಒಪ್ಪಿಗೆ ನೀಡಬೇಕಿರುವ ಹಿನ್ನೆಲೆ ರಾಜ್ಯ ನಾಯಕರು ಅವರ ಭೇಟಿಗಾಗಿ ಕಾದು ಕುಳಿತಿದ್ದಾರೆ.

ರಾಜ್ಯದಲ್ಲಿ ಇನ್ನೂ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳ ಭರ್ತಿಗಾಗಿ 35ಕ್ಕೂ ಹೆಚ್ಚು ಶಾಸಕರು ತೀವ್ರ ಲಾಬಿ ನಡೆಸುತ್ತಿದ್ದಾರೆ.

RelatedPosts

ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ

ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್

ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

ADVERTISEMENT
ADVERTISEMENT
ಮೂರು ಪಟ್ಟಿಗಳಿಂದ ಹೆಚ್ಚಿದ ಗೊಂದಲ

ಸಂಪುಟ ವಿಸ್ತರಣೆಯ ವಿಚಾರದಲ್ಲಿ ಮೂರು ಪ್ರತ್ಯೇಕ ಪಟ್ಟಿಗಳು ಸಿದ್ಧವಾಗಿರುವುದೇ ಕಾಂಗ್ರೆಸ್‌ಗೆ ದೊಡ್ಡ ತಲೆನೋವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮದೇ ಆದ ಶಿಫಾರಸು ಪಟ್ಟಿಯನ್ನು ಸಿದ್ಧಪಡಿಸಿದ್ದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಪಟ್ಟಿಯನ್ನು ನೀಡಿದ್ದಾರೆ. ಇದರ ಜೊತೆಗೆ ಎಐಸಿಸಿ ಹೈಕಮಾಂಡ್ ಕೂಡ ತನ್ನದೇ ಆದ ಮೂರನೇ ಪಟ್ಟಿಯನ್ನು ಇಟ್ಟುಕೊಂಡಿದೆ.

ಈ ಮೂರು ಪಟ್ಟಿಗಳಲ್ಲಿರುವ ಹೆಸರುಗಳನ್ನು ಪರಿಶೀಲಿಸಿ, ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮತೋಲನ ಕಾಪಾಡುವ ಜೊತೆಗೆ ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ಜವಾಬ್ದಾರಿ ಹೈಕಮಾಂಡ್ ಮೇಲಿದೆ. ಇದೇ ಕಾರಣದಿಂದ ಸಂಪುಟ ವಿಸ್ತರಣೆ ಪ್ರಕ್ರಿಯೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ.

ರಾಹುಲ್ ಗಾಂಧಿ ಭೇಟಿಗೆ ಇನ್ನೂ ಅವಕಾಶ ಸಿಕ್ಕಿಲ್ಲ

ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಆದರೆ, ದೇಶಾದ್ಯಂತ ನಡೆಯುತ್ತಿರುವ ನೀಟ್ ಪರೀಕ್ಷಾ ಅಕ್ರಮದ ವಿರುದ್ಧದ ಪ್ರತಿಭಟನೆಗಳಲ್ಲಿ ರಾಹುಲ್ ಗಾಂಧಿ ನಿರತರಾಗಿರುವುದರಿಂದ ರಾಜ್ಯ ನಾಯಕರಿಗೆ ಅವರ ಭೇಟಿಗೆ ಸಮಯ ಸಿಕ್ಕಿಲ್ಲ.

ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮತ್ತೊಂದು ಮಹತ್ವದ ಸಭೆ ನಡೆಯುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಹಾಗೂ ರಾಹುಲ್ ಗಾಂಧಿ ಭಾಗವಹಿಸುವ ನಿರೀಕ್ಷೆಯಿದ್ದು, ಸಚಿವರ ಅಂತಿಮ ಪಟ್ಟಿಗೆ ಇದೇ ಸಭೆಯಲ್ಲಿ ಮುದ್ರೆ ಬೀಳಬಹುದು ಎಂಬ ವಿಶ್ವಾಸ ಕಾಂಗ್ರೆಸ್ ವಲಯದಲ್ಲಿದೆ.

ಬೆಂಗಳೂರಿನಲ್ಲಿ ಪ್ರಮಾಣವಚನಕ್ಕೆ ಸಿದ್ಧತೆ

ದೆಹಲಿ ಮಟ್ಟದಲ್ಲಿ ತೀರ್ಮಾನ ಬಾಕಿ ಇದ್ದರೂ, ಬೆಂಗಳೂರಿನಲ್ಲಿ ಪ್ರಮಾಣವಚನ ಸಮಾರಂಭಕ್ಕೆ ಸರ್ಕಾರ ಸಕಲ ಸಿದ್ಧತೆ ನಡೆಸುತ್ತಿದೆ. ಲೋಕಭವನದಲ್ಲಿ ಶುಕ್ರವಾರ ಮಧ್ಯಾಹ್ನ 12.30ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಸುವ ಉದ್ದೇಶದಿಂದ ಬೃಹತ್ ಶಾಮಿಯಾನ, ಆಸನ ವ್ಯವಸ್ಥೆ ಹಾಗೂ ಭದ್ರತಾ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.

ನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಸಂಬಂಧಪಟ್ಟ ಇಲಾಖೆಗಳಿಗೂ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಿಗಳಿಗೆ ಕಾರ್ಯಕ್ರಮಕ್ಕೆ ಸಿದ್ಧರಾಗುವಂತೆ ಮಾಹಿತಿ ರವಾನಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (21)

ವಾಹನ ಸವಾರರೇ ಗಮನಿಸಿ: ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
July 30, 2026 - 11:08 am
0

ಮುನ್ಸೂಚನೆ (20)

ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ

by ಶಾಲಿನಿ ಕೆ. ಡಿ
July 30, 2026 - 10:33 am
0

ಮುನ್ಸೂಚನೆ (19)

ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್

by ಶಾಲಿನಿ ಕೆ. ಡಿ
July 30, 2026 - 9:34 am
0

ಮುನ್ಸೂಚನೆ (18)

ಸಂಪುಟ ವಿಸ್ತರಣೆಗೆ ಇಂದೇ ಗ್ರೀನ್‌ ಸಿಗ್ನಲ್‌..?: ರಾಜ್ಯ ನಾಯಕರ ಕೈಗೆ ಸಿಗದ ರಾಹುಲ್ ಗಾಂಧಿ

by ಶಾಲಿನಿ ಕೆ. ಡಿ
July 30, 2026 - 9:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (20)
    ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ
    July 30, 2026 | 0
  • ಮುನ್ಸೂಚನೆ (19)
    ಪತ್ನಿಯನ್ನು ಹತ್ಯೆಗೈದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
  • ಮುನ್ಸೂಚನೆ (14)
    ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ
    July 30, 2026 | 0
  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version