ಸಾಕಪ್ಪ ಸಾಕು..ಕಾಂಗ್ರೆಸ್ ಸರ್ಕಾರ, ಇದು ಏಳೂವರೆ ಕೋಟಿ ಕನ್ನಡಿಗರ ದನಿ ಎಂದ ನಿಖಿಲ್

ಜಾತಿ ಜನಗಣತಿ; ನಮ್ಮ ಮನೆಗೆ, ನಮ್ಮ ಅಜ್ಜನ ಮನೆಗೆ ಯಾರೂ ಬಂದು ಗಣತಿ ಮಾಡಿಲ್ಲ ಎಂದ ನಿಖಿಲ್

Untitled design 2025 04 11t191340.677

ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸಾಕು ಅಭಿಯಾನ ನಮ್ಮ ಸ್ಲೋಗನ್ ಅಲ್ಲ, ನಾಡಿನ ಎಳೂವರೆ ಕೋಟಿ ಜನರ ದನಿ. ಸಾಮಾನ್ಯ ಕನ್ನಡಿಗನ ಕಣ್ಣೀರ ಕೂಗು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಸರ್ಕಾರದ ದುರಾಡಳಿತ, ಭ್ರಷ್ಟಾಚಾರದ ಜತೆಗೆ ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಸಂಪತ್ತನ್ನ ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ADVERTISEMENT
ADVERTISEMENT

ರಾಜ್ಯ ಸರ್ಕಾರದ ದುರಾಡಳಿತ, ಬೆಲೆ ಏರಿಕೆ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ರಾಜ್ಯದ ಜನರ ಮನೆ ಮನೆಯ ಮಾತು. ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸವನ್ನು ನಮ್ಮ ಪಕ್ಷ ಮಾಡುತ್ತಿದೆ ಎಂದು ಅವರು ತಿಳಿಸಿದರು.

ನಾವು ನಮ್ಮ ಜವಾಬ್ದಾರಿ ಕರ್ತವ್ಯ ಅರಿತು ಈ ಪ್ರತಿಭಟನೆ ಮಾಡುತ್ತಿದ್ದೇವೆ. ಕೇಂದ್ರ ಸಚಿವರಾದ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಬೃಹತ್ ಹೋರಾಟ ಮಾಡುತ್ತಿದ್ದೇವೆ. ಆಡಳಿತ ವೈಫಲ್ಯ, ಭ್ರಷ್ಟಾಚಾರ ಮಾತ್ರವಲ್ಲ ಅನೇಕ ವಿಚಾರಗಳ ಬಗ್ಗೆ ನಮ್ಮ ಹೋರಾಟ ನಡೆಸಳಿದ್ದೇವೆ. ಇದು ಒಂದು ದಿನದ ಅಭಿಯಾನ ಅಲ್ಲ ಸರ್ಕಾರ ಇರೋ ತನಕ ನಮ್ಮ ಹೋರಾಟ ನಿರಂತರ ವಾಗಿರುತ್ತೆ ಎಂದರು ಅವರು.

ದುರಾಡಳಿತಕ್ಕೆ ದಿಟ್ಟ ಉತ್ತರ ಕೊಡಬೇಕು

ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾಕಪ್ಪ ಸಾಕು ಈ ಕಾಂಗ್ರೆಸ್ ಸರ್ಕಾರ ಅನ್ನೋ ಭಾವನೆ ಜನರ ಮನಸಿನಲ್ಲಿ ಬಂದಿದೆ. ಜನ ವಿರೋಧಿ ಸರ್ಕಾರ ಜನರನ್ನು ಕಿತ್ತು ತಿನ್ನುತ್ತಿದೆ. ಕಾಂಗ್ರೆಸ್ಸಿನ ದುರಾಡಳಿತಕ್ಕೆ ದಿಟ್ಟ ಉತ್ತರ ನೀಡಬೇಕಿದೆ. ಈ ಹೊರಟ್ಟಕ್ಕೆ ನಮ್ಮ ಜತೆ ಕೈ ಜೋಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಅಭಿಯಾನವನ್ನು ಯಶಸ್ವಿಗೊಳಿಸೋಣ ಎಂದು ನಿಖಿಲ್ ಅವರು ಮನವಿ ಮಾಡಿದರು.

ಕಮಿಷನ್ ಅನ್ನೋದಕ್ಕೆ ಲಿಮಿಟೆಷನ್ ಇಲ್ಲ

ಕಳೆದ ಚುನಾವಣೆಯಲ್ಲಿ ಇದೇ ಕಾಂಗ್ರೆಸ್ಸಿಗರು ಅಂದು ಇದ್ದಂತ ಸರ್ಕಾರದ ವಿರುದ್ಧ ಪೇ ಸಿಎಂ ಅಭಿಯಾನ ಮಾಡಿದ್ದರು. 40% ಕಮಿಷನ್ ಆರೋಪ ಮಾಡಿದ್ದರು. ನಮಗೊಂದು ಅವಕಾಶ ಕೊಡಿ ನಾವು ಸಂಪೂರ್ಣವಾಗಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುತ್ತೇವೆ ಎಂದು ಎಂದು ಹೇಳಿದ್ದರು. ಅಂತ ಹೇಈಗ ಭ್ರಷ್ಟಾಚಾರ ಅನ್ನುವುದು ಯಾವ ಹಂತಕ್ಕೆ ತಲುಪಿದೆ ಎಂದರೆ ಪರ್ಸೆಂಟೇಜ್ ಅನ್ನುವುದಕ್ಕೆ ಲಿಮಿಟೆಷನ್ ಇಲ್ಲ, ಲಿಮಿಟೆಷನ್ ಮೀರಿ ಹೋಗಿದೆ ಎಂದು ಅವರು ಆರೋಪಿಸಿದರು.

ರಾಯರೆಡ್ಡಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ

ಬಸವರಾಜ ರಾಯರೆಡ್ಡಿ ಅವರು ಸರ್ಕಾರದ ಭ್ರಷ್ಟಾಚಾರದ ವಿಚಾರವಾಗಿ ಮಾತನಾಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಭ್ರಷ್ಟಾಚಾರ ಅನೇಕ ಸರ್ಕಾರಗಳಲ್ಲಿ ಇದೆ, ಇಲ್ಲ ಅಂತ ಹೇಳೋದಿಲ್ಲ. ಆದರೆ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅಂತ ರಾಯರೆಡ್ಡಿ ಅವರೇ ತಿಳಿಸಿದ್ದಾರೆ. ಅವರು ಹೇಳಿರುವುದನ್ನು ಗೌರವಿಸುತ್ತೇವೆ. ಆ ವ್ಯವಸ್ಥೆಯಿಂದ ಹೊರಬರುವುದಕ್ಕೆ ಈ ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ ಜೆಡಿಎಸ್ ಸರ್ಕಾರದ ವಿಚಾರವಾಗಿ ಅವರು ಮಾತನಾಡಿರುವುದು ಕೇವಲ ರಾಜಕೀಯ ಅಷ್ಟೇ ಎಂದು ತಿಳಿಸಿದರು.

ಜಾತಿ ಜನಗಣತಿ; ನಮ್ಮ ಮನೆಗೆ, ನಮ್ಮ ಅಜ್ಜನ ಮನೆಗೆ ಯಾರೂ ಬಂದು ಗಣತಿ ಮಾಡಿಲ್ಲ ಎಂದ ನಿಖಿಲ್

ಜಾತಿ ಜನಗಣತಿ ಎನ್ನುವುದು ಕ್ರಮಬದ್ಧವಾಗಿ, ವೈಜ್ಞಾನಿಕವಾಗಿ ನಡೆದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ಮೊದಲನೆಯದಾಗಿ ವರದಿಯಲ್ಲಿ ಏನಿದೆ ಎನ್ನುವುದನ್ನು ಬಹಿರಂಗಪಡಿಸಬೇಕು. ಆದಾದ ನಂತರ ನಾವು ಯಾವ ರೀತಿಯ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬ ತೀರ್ಮಾನ ಮಾಡುತ್ತೇವೆ. ಒಂದಂತೂ ಸತ್ಯ, ಈ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ. ನಮ್ಮ ಮನೆಗಾಗಲಿ, ನಮ್ಮ ಅಜ್ಜ ದೇವೇಗೌಡರ ಮನೆಗಾಗಲಿ ಯಾರೂ ಬಂದು ಗಣತಿ ಮಾಡಿಲ್ಲ ಎಂದು ಅವರು ಟೀಕಿಸಿದರು.

ರಾಜಕೀಯ ಸಂಕಷ್ಟ ಕಾಲ ಬಂದಾಗ ಕೆಲವರಿಗೆ ಇಂಥ ವಿಚಾರಗಳು ನೆನಪಿಗೆ ಬರುತ್ತವೆ. ಐದು ವರ್ಷ ಮುಖ್ಯಮಂತ್ರಿ, ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಆಗಿದೆ. ಹಣಕಾಸು ಸಚಿವರು, ಉಪ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಇಷ್ಟೆಲ್ಲಾ ಆಗಿದ್ದರು ಅವರಿಗೆ ಅಹಿಂದ ಜನರನ್ನು ಉದ್ಧಾರ ಮಾಡುವುದು ಸಾಧ್ಯ ಆಗಿಲ್ಲ. ರಾಜಕೀಯ ಗಿಮಿಕ್ ಮಾಡಿಕೊಂಡು ತಿರುಗಾಡುತ್ತಿದ್ದಾರೆ ಎಂದು ಅವರು ದೂರಿದರು.

Exit mobile version